‘ಧರ್ಮ, ಸಾಹಿತ್ಯ, ಕಲೆ, ಶಿಕ್ಷಣ ಹಾಗೂ ಜನರ ಸ್ವಾಭಿಮಾನದ ಮೇಲೆ ಕೋಮುಶಕ್ತಿಗಳು ದಾಳಿ ನಡೆಸುತ್ತಿವೆ. ಇಂದಿನ ರಾಜಕೀಯ ಸನ್ನಿವೇಶದಲ್ಲಿ ಇವುಗಳನ್ನು ಎದುರಿಸುವ ದೊಡ್ಡ ಸವಾಲು ನಮ್ಮ ಮುಂದಿದೆ. ದ್ರಾವಿಡ ಚಳವಳಿಗಾರರಾದ ಇ.ವಿ.ರಾಮಸಾಮಿ ಪೆರಿಯಾರ್ ಮತ್ತು ಸಿ.ಎನ್.ಅಣ್ಣಾದೊರೈ ಅವರ ಸಿದ್ಧಾಂತಗಳನ್ನು ಪಕ್ಷ ಎಂದಿಗೂ ತ್ಯಜಿಸುವುದಿಲ್ಲ. ರಾಜ್ಯದ ಜನರ ಏಳಿಗಾಗಿ ಪಕ್ಷ ಎಲ್ಲ ರೀತಿಯ ಹೋರಾಟ ನಡೆಸಲಿದೆ’ ಎಂದು ಹೇಳಿದರು.