<p><strong>ಮುಂಬೈ:</strong> ದೇಶದ ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ನ್ಯಾಯಾಂಗ ಬಂಧನದಲ್ಲಿದ್ದಾಗ ಅವರ ಸಾವು ಸಂಭವಿಸಿರುವುದನ್ನು ಸಮರ್ಥಿಸಲಾಗದು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾವುತ್, 84 ವಯಸ್ಸಿನ ವ್ಯಕ್ತಿಯೊಬ್ಬ ದೇಶದ ವಿರುದ್ದ ಹೋರಾಡುವಷ್ಟು ನಮ್ಮ ವ್ಯವಸ್ಥೆ ದುರ್ಬಲವಾಗಿದೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/uttar-pradesh-ats-nabs-two-al-qaeda-terrorists-from-lucknow-foils-major-attack-847146.html" itemprop="url">ಉತ್ತರ ಪ್ರದೇಶ: ಅಲ್ ಖೈದಾದೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರ ಬಂಧನ </a></p>.<p>'ನಾವು ಮಾವೋವಾದಿ ಹಾಗೂ ನಕ್ಸಲರ ಸಿದ್ಧಾಂತವನ್ನು ಒಪ್ಪುವುದಿಲ್ಲ. ಕಾಶ್ಮೀರದ ಪ್ರತ್ಯೇಕತಾವಾದಿಗಳಿಗಿಂತ ಮಾವೋವಾದಿ, ನಕ್ಸಲರು ಹೆಚ್ಚು ಅಪಾಯಕಾರಿಯಾದರೂ ಸಹ ಸ್ಟ್ಯಾನ್ ಸ್ವಾಮಿ ಬಂಧನವನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಅವರಿಂದ ಸರ್ಕಾರ ಉರುಳಿಸಲು ಸಾಧ್ಯವೇ' ಎಂದು ಪ್ರಶ್ನಿಸಿದ್ದಾರೆ.</p>.<p>'ಸರ್ವಾಧಿಕಾರಿ ಧೋರಣೆಯ ಸರ್ಕಾರವು ಅನಾರೋಗ್ಯದ ವ್ಯಕ್ತಿಯೊಬ್ಬರಿಂದ ಭಯಗೊಂಡಿದೆ, ಸರ್ಕಾರ ಮಾನಸಿಕವಾಗಿ ದುರ್ಬಲವಾಗಿದೆ' ಎಂದರು.</p>.<p>ಎಲ್ಗರ್ ಪರಿಷತ್ ಚಟುವಟಿಕೆಗಳನ್ನು ಬೆಂಬಲಿಸಲಾಗುವುದಿಲ್ಲ. ಆದರೆ ಅದಾದ ನಂತರ ಸ್ವಾತಂತ್ರ್ಯವನ್ನು ಭೇದಿಸುವ ಪಿತೂರಿ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ವರವರ ರಾವ್, ಸುಧಾ ಭಾರದ್ವಾಜ್, ಗೌರವ್ ನವಲಖಾ ಹೆಸರುಗಳನ್ನು ಉಲ್ಲೇಖಿಸಿ ಹೇಳಿದರು.</p>.<p>84 ವರ್ಷದ ಸ್ಟ್ಯಾನ್ ಸ್ವಾಮಿ, ಬಹುಶಃ ದೇಶದಲ್ಲಿ ಭಯೋತ್ಪಾದನೆ ಆರೋಪ ಹೊರಿಸಲ್ಪಟ್ಟ ಅತಿ ಹಿರಿಯ ವ್ಯಕ್ತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ದೇಶದ ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ನ್ಯಾಯಾಂಗ ಬಂಧನದಲ್ಲಿದ್ದಾಗ ಅವರ ಸಾವು ಸಂಭವಿಸಿರುವುದನ್ನು ಸಮರ್ಥಿಸಲಾಗದು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.</p>.<p>ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಬರೆದುಕೊಂಡಿರುವ ರಾವುತ್, 84 ವಯಸ್ಸಿನ ವ್ಯಕ್ತಿಯೊಬ್ಬ ದೇಶದ ವಿರುದ್ದ ಹೋರಾಡುವಷ್ಟು ನಮ್ಮ ವ್ಯವಸ್ಥೆ ದುರ್ಬಲವಾಗಿದೆಯೇ ಎಂದು ಅಚ್ಚರಿ ವ್ಯಕ್ತಪಡಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/uttar-pradesh-ats-nabs-two-al-qaeda-terrorists-from-lucknow-foils-major-attack-847146.html" itemprop="url">ಉತ್ತರ ಪ್ರದೇಶ: ಅಲ್ ಖೈದಾದೊಂದಿಗೆ ನಂಟು ಹೊಂದಿದ್ದ ಇಬ್ಬರು ಉಗ್ರರ ಬಂಧನ </a></p>.<p>'ನಾವು ಮಾವೋವಾದಿ ಹಾಗೂ ನಕ್ಸಲರ ಸಿದ್ಧಾಂತವನ್ನು ಒಪ್ಪುವುದಿಲ್ಲ. ಕಾಶ್ಮೀರದ ಪ್ರತ್ಯೇಕತಾವಾದಿಗಳಿಗಿಂತ ಮಾವೋವಾದಿ, ನಕ್ಸಲರು ಹೆಚ್ಚು ಅಪಾಯಕಾರಿಯಾದರೂ ಸಹ ಸ್ಟ್ಯಾನ್ ಸ್ವಾಮಿ ಬಂಧನವನ್ನು ಸಮರ್ಥಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಅವರಿಂದ ಸರ್ಕಾರ ಉರುಳಿಸಲು ಸಾಧ್ಯವೇ' ಎಂದು ಪ್ರಶ್ನಿಸಿದ್ದಾರೆ.</p>.<p>'ಸರ್ವಾಧಿಕಾರಿ ಧೋರಣೆಯ ಸರ್ಕಾರವು ಅನಾರೋಗ್ಯದ ವ್ಯಕ್ತಿಯೊಬ್ಬರಿಂದ ಭಯಗೊಂಡಿದೆ, ಸರ್ಕಾರ ಮಾನಸಿಕವಾಗಿ ದುರ್ಬಲವಾಗಿದೆ' ಎಂದರು.</p>.<p>ಎಲ್ಗರ್ ಪರಿಷತ್ ಚಟುವಟಿಕೆಗಳನ್ನು ಬೆಂಬಲಿಸಲಾಗುವುದಿಲ್ಲ. ಆದರೆ ಅದಾದ ನಂತರ ಸ್ವಾತಂತ್ರ್ಯವನ್ನು ಭೇದಿಸುವ ಪಿತೂರಿ ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತರಾದ ವರವರ ರಾವ್, ಸುಧಾ ಭಾರದ್ವಾಜ್, ಗೌರವ್ ನವಲಖಾ ಹೆಸರುಗಳನ್ನು ಉಲ್ಲೇಖಿಸಿ ಹೇಳಿದರು.</p>.<p>84 ವರ್ಷದ ಸ್ಟ್ಯಾನ್ ಸ್ವಾಮಿ, ಬಹುಶಃ ದೇಶದಲ್ಲಿ ಭಯೋತ್ಪಾದನೆ ಆರೋಪ ಹೊರಿಸಲ್ಪಟ್ಟ ಅತಿ ಹಿರಿಯ ವ್ಯಕ್ತಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>