‘ಮಹಿಳೆಯ ಮಾತು ನಂಬಲು ನಾವು ಸಿದ್ಧವಿಲ್ಲ. ಮಗುವನ್ನು ಕೊಂದಿರುವುದರ ಹಿಂದಿನ ಉದ್ದೇಶ ಹೆಚ್ಚಿನ ತನಿಖೆಯಿಂದ ಬಹಿರಂಗವಾಗಲಿದೆ. ಸದ್ಯ, ಮಹಿಳೆ ಮತ್ತು ಆಕೆಯ ಪತಿ ದೂರವಾಗಿದ್ದರು. ಅದಕ್ಕಾಗಿಯೇ ಮಹಿಳೆ ಮಗು ಕೊಂದಿರಬಹುದೆಂಬ ಮಾಹಿತಿ ಇದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಆರೋಪಿ ಮಹಿಳೆ ಸುಚನಾ ಸೇಠ್, ಗೋವಾದ ಕ್ಯಾಂಡೋಲಿಮ್ನಲ್ಲಿರುವ ಸರ್ವೀಸ್ ಅಪಾರ್ಟ್ಮೆಂಟ್ನಲ್ಲಿ ತನ್ನ ಮಗನನ್ನು ಕೊಂದು ಶವವನ್ನು ಬ್ಯಾಗ್ನಲ್ಲಿ ತುಂಬಿ ಕಾರಿನಲ್ಲಿ ಬೆಂಗಳೂರಿನತ್ತ ಸಾಗಿಸುತ್ತಿದ್ದಾಗ ಚಿತ್ರದುರ್ಗದ ಐಮಂಗಲ ಠಾಣೆಯ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದರು. ಆರೋಪಿಯನ್ನು ಮಂಗಳವಾರ ಗೋವಾ ಪೊಲೀಸರಿಗೆ ಒಪ್ಪಿಸಿದ್ದರು.