ಪ್ರಶ್ನೋತ್ತರ ಅವಧಿಯಲ್ಲಿ ‘ದೇಶದಾದ್ಯಂತ ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆಯನ್ನು ಕಲಿಸಲು ನಿಬಂಧನೆಗಳನ್ನು ತರಲು ಸರ್ಕಾರವು ಪರಿಗಣಿಸುತ್ತದೆಯೇ’ ಎಂಬ ಗೋಪಾಲ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವೆ ದೇವಿ, ‘ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಸಿ) ಮಾದರಿಯಲ್ಲಿ ಈಗಾಗಲೇ ಭಗವದ್ಗೀತೆಯನ್ನು ವಿವಿಧ ತರಗತಿಗಳಲ್ಲಿ ಕಲಿಸಲಾಗುತ್ತಿದೆ. 6,7 ಮತ್ತು 8ನೇ ತರಗತಿಯ ವಿದ್ಯಾರ್ಥಿಳಿಗೆ ಭಗವದ್ಗೀತೆಯ ಕೆಲವು ಅಧ್ಯಾಯಗಳನ್ನು ಈಗಾಗಲೇ ಕಲಿಸಲಾಗುತ್ತಿದೆ’ ಎಂದರು.