ವಕೀಲರ ತಂಡವು ಬದಲಾಗಿರುವ ಕಾರಣ ಉತ್ತರಾಖಂಡ ಸರ್ಕಾರದ ವಕೀಲರಿಗೆ ಜಾಮೀನು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ, ಸೂಚನೆ ಇಲ್ಲ ಎಂಬುದನ್ನು ಪೀಠಕ್ಕೆ ತಿಳಿಸಲಾಯಿತು. ಕಳೆದ ಏಳೆಂಟು ವರ್ಷಗಳಿಂದ ವಕೀಲರ ಒಂದೇ ತಂಡವು ಸರ್ಕಾರವನ್ನು ಪ್ರತಿನಿಧಿಸುತ್ತಿದ್ದ ಕಾರಣ, ಅದನ್ನು ಬದಲಾಯಿಸಲಾಗಿದೆ ಎಂದು ಉತ್ತರಾಖಂಡ ಸರ್ಕಾರದ ಕಾನೂನು ಇಲಾಖೆಯ ಕಾರ್ಯದರ್ಶಿ ಪೀಠಕ್ಕೆ ತಿಳಿಸಿದರು.