<p>ಭುವನೇಶ್ವರ: ಒಡಿಶಾದ ಬಲಾಂಗೀರ್ ಜಿಲ್ಲೆಯ ಪಟ್ನಾಗಢದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಮಂಗಳವಾರ ಬೆಂಕಿ ಹಚ್ಚಿದ್ದಾರೆ.</p>.<p>ಕಿಡಿಗೇಡಿಗಳ ದುಷ್ಕೃತ್ಯವನ್ನು ಮುಖ್ಯಮಂತ್ರಿ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಖಂಡಿಸಿದ್ದಾರೆ.</p>.<p>ಪ್ರತಿಮೆಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜು ಜನತಾದಳದ ಮುಖಂಡರು, ಭುವನೇಶ್ವರದ ವಿಮಾನ ನಿಲ್ದಾಣದಲ್ಲಿರುವ ಬಿಜು ಪ್ರತಿಮೆ ಬಳಿ ಪ್ರತಿಭಟಿಸಿದರು. ಆಡಳಿತಾರೂಢ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪಟ್ನಾಯಕ್ ಅವರ ಪ್ರತಿಮೆಗಳಿಗೆ ಹಾನಿಯಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹೇಳಿದ್ದಾರೆ.</p>.<p>‘ಹೀನರು, ಮಾನಸಿಕ ಅಸ್ವಸ್ಥರ ಕೆಲಸವಿದು. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇದರ ಹಿಂದಿರುವ ಪಿತೂರಿಯನ್ನು ಬಹಿರಂಗಪಡಿಸಿ’ ಎಂದು ಮುಖ್ಯಮಂತ್ರಿ ಪೊಲೀಸರಿಗೆ ನಿರ್ದೇಶಿಸಿದ್ದಾರೆ.</p>.<p>ಪಟ್ನಾಗಢದ ಮಾಜಿ ಶಾಸಕ ಸರೋಜ್ ಕುಮಾರ್ ಮೆಹೆರ್ ಅವರು ಬಿಜು ಪಟ್ನಾಯಕ್ ಅವರ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಆದರೆ ಇದಕ್ಕೆ ಕೆಲವರು ವಿರೋಧಿಸಿದ್ದು, ಪರಶುರಾಮನ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬ್ರಾಹ್ಮಣ ಸಮಾಜದ ಸದಸ್ಯರು ತಿಂಗಳ ಹಿಂದಷ್ಟೇ ಪ್ರತಿಭಟನೆ ನಡೆಸಿದ್ದರು. ಈ ವಿಷಯವು ಹೈಕೋರ್ಟ್ನಲ್ಲಿದೆ. ಬಿಜು ಪಟ್ನಾಯಕ್ ಮತ್ತು ಪರಶುರಾಮರ ಪ್ರತಿಮೆಗಳನ್ನು ಒಂದೇ ವೃತ್ತದಲ್ಲಿ ಪ್ರತಿಷ್ಠಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭುವನೇಶ್ವರ: ಒಡಿಶಾದ ಬಲಾಂಗೀರ್ ಜಿಲ್ಲೆಯ ಪಟ್ನಾಗಢದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಮಂಗಳವಾರ ಬೆಂಕಿ ಹಚ್ಚಿದ್ದಾರೆ.</p>.<p>ಕಿಡಿಗೇಡಿಗಳ ದುಷ್ಕೃತ್ಯವನ್ನು ಮುಖ್ಯಮಂತ್ರಿ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಖಂಡಿಸಿದ್ದಾರೆ.</p>.<p>ಪ್ರತಿಮೆಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜು ಜನತಾದಳದ ಮುಖಂಡರು, ಭುವನೇಶ್ವರದ ವಿಮಾನ ನಿಲ್ದಾಣದಲ್ಲಿರುವ ಬಿಜು ಪ್ರತಿಮೆ ಬಳಿ ಪ್ರತಿಭಟಿಸಿದರು. ಆಡಳಿತಾರೂಢ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪಟ್ನಾಯಕ್ ಅವರ ಪ್ರತಿಮೆಗಳಿಗೆ ಹಾನಿಯಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹೇಳಿದ್ದಾರೆ.</p>.<p>‘ಹೀನರು, ಮಾನಸಿಕ ಅಸ್ವಸ್ಥರ ಕೆಲಸವಿದು. ದುಷ್ಕೃತ್ಯದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಇದರ ಹಿಂದಿರುವ ಪಿತೂರಿಯನ್ನು ಬಹಿರಂಗಪಡಿಸಿ’ ಎಂದು ಮುಖ್ಯಮಂತ್ರಿ ಪೊಲೀಸರಿಗೆ ನಿರ್ದೇಶಿಸಿದ್ದಾರೆ.</p>.<p>ಪಟ್ನಾಗಢದ ಮಾಜಿ ಶಾಸಕ ಸರೋಜ್ ಕುಮಾರ್ ಮೆಹೆರ್ ಅವರು ಬಿಜು ಪಟ್ನಾಯಕ್ ಅವರ ಪ್ರತಿಮೆ ಪ್ರತಿಷ್ಠಾಪಿಸಿದ್ದರು. ಆದರೆ ಇದಕ್ಕೆ ಕೆಲವರು ವಿರೋಧಿಸಿದ್ದು, ಪರಶುರಾಮನ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬ್ರಾಹ್ಮಣ ಸಮಾಜದ ಸದಸ್ಯರು ತಿಂಗಳ ಹಿಂದಷ್ಟೇ ಪ್ರತಿಭಟನೆ ನಡೆಸಿದ್ದರು. ಈ ವಿಷಯವು ಹೈಕೋರ್ಟ್ನಲ್ಲಿದೆ. ಬಿಜು ಪಟ್ನಾಯಕ್ ಮತ್ತು ಪರಶುರಾಮರ ಪ್ರತಿಮೆಗಳನ್ನು ಒಂದೇ ವೃತ್ತದಲ್ಲಿ ಪ್ರತಿಷ್ಠಾಪಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>