<p><strong>ನವದೆಹಲಿ</strong>: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ, ಗುಜರಾತ್ನಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ಎನ್ನಿಸಿಕೊಂಡಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಯ ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ್ ಸುತಾರ್ ಅವರು ಬುಧವಾರ ನಿಧನರಾದರು. </p><p>ಅವರಿಗೆ 100 ವರ್ಷ ವಯಸ್ಸಾಗಿತ್ತು ಎಂದು ಅವರ ಪುತ್ರ ಅನಿಲ್ ಸುತಾರ್ ತಿಳಿಸಿದ್ದಾರೆ.</p><p>1925ರ ಫೆ.19ರಂದು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ಜನಿಸಿದ್ದ ಸುತಾರ್ ಅವರು ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು.</p><p>ದೆಹಲಿಯ ಸಂಸತ್ ಭವನದ ಆವರಣದಲ್ಲಿರುವ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿ ಪ್ರತಿಮೆ, ಕುದುರೆ ಸವಾರಿ ಮಾಡುತ್ತಿರುವ ಛತ್ರಪತಿ ಶಿವಾಜಿಯ ಪ್ರತಿಮೆಗಳ ಹಿಂದೆ ಸುತಾರ್ ಅವರ ಕೈಚಳಕವಿದೆ. ಈ ಪ್ರತಿಮೆಗಳು ಕೂಡ ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಸ್ಥಾನ ಪಡೆದಿವೆ.</p><p>ಸುತಾರ್ ಅವರಿಗೆ ಕೇಂದ್ರ ಸರ್ಕಾರ 1999 ರಲ್ಲಿ ಪದ್ಮಶ್ರೀ ಮತ್ತು 2016 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತ್ತೀಚೆಗೆ ಮಹಾರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ‘ಮಹಾರಾಷ್ಟ್ರ ಭೂಷಣ್ ಪುರಸ್ಕಾರ’ವನ್ನು ನೀಡಿ ಗೌರವಿಸಲಾಗಿತ್ತು.</p><p>ದೇಶದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಗೌರವಿಸುವ ಸಲುವಾಗಿ ಗುಜರಾತ್ನಲ್ಲಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ, ಗುಜರಾತ್ನಲ್ಲಿರುವ ವಿಶ್ವದ ಅತಿ ಎತ್ತರದ ಪ್ರತಿಮೆ ಎನ್ನಿಸಿಕೊಂಡಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಯ ವಿನ್ಯಾಸಗೊಳಿಸಿದ್ದ ಶಿಲ್ಪಿ ರಾಮ್ ಸುತಾರ್ ಅವರು ಬುಧವಾರ ನಿಧನರಾದರು. </p><p>ಅವರಿಗೆ 100 ವರ್ಷ ವಯಸ್ಸಾಗಿತ್ತು ಎಂದು ಅವರ ಪುತ್ರ ಅನಿಲ್ ಸುತಾರ್ ತಿಳಿಸಿದ್ದಾರೆ.</p><p>1925ರ ಫೆ.19ರಂದು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ಜನಿಸಿದ್ದ ಸುತಾರ್ ಅವರು ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು.</p><p>ದೆಹಲಿಯ ಸಂಸತ್ ಭವನದ ಆವರಣದಲ್ಲಿರುವ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿ ಪ್ರತಿಮೆ, ಕುದುರೆ ಸವಾರಿ ಮಾಡುತ್ತಿರುವ ಛತ್ರಪತಿ ಶಿವಾಜಿಯ ಪ್ರತಿಮೆಗಳ ಹಿಂದೆ ಸುತಾರ್ ಅವರ ಕೈಚಳಕವಿದೆ. ಈ ಪ್ರತಿಮೆಗಳು ಕೂಡ ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಸ್ಥಾನ ಪಡೆದಿವೆ.</p><p>ಸುತಾರ್ ಅವರಿಗೆ ಕೇಂದ್ರ ಸರ್ಕಾರ 1999 ರಲ್ಲಿ ಪದ್ಮಶ್ರೀ ಮತ್ತು 2016 ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಇತ್ತೀಚೆಗೆ ಮಹಾರಾಷ್ಟ್ರದ ಅತ್ಯುನ್ನತ ಪ್ರಶಸ್ತಿಯಾದ ‘ಮಹಾರಾಷ್ಟ್ರ ಭೂಷಣ್ ಪುರಸ್ಕಾರ’ವನ್ನು ನೀಡಿ ಗೌರವಿಸಲಾಗಿತ್ತು.</p><p>ದೇಶದ ಮೊದಲ ಉಪ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಗೌರವಿಸುವ ಸಲುವಾಗಿ ಗುಜರಾತ್ನಲ್ಲಿ 182 ಮೀಟರ್ ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>