<p><strong>ನವದೆಹಲಿ</strong>: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ, ಗುಜರಾತಿನ ಕೆವಾಡಿಯಾದಲ್ಲಿ ನಿರ್ಮಿಸಲಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’ಯ ಮುಖ್ಯಶಿಲ್ಪಿ ರಾಮ್ ಸುತಾರ್ ಅವರು ಬುಧವಾರ ರಾತ್ರಿ ನಿಧನರಾದರು.</p><p>ಅವರಿಗೆ 100 ವರ್ಷ ವಯಸ್ಸಾಗಿತ್ತು, ವಯೋಸಜಹ ಕಾಯಿಲೆಗಳಿಂದ ಬಳಲುತ್ತಿದ್ದರು. </p><p>ಸಂಸತ್ತಿನ ಆವರಣದಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿ ಪ್ರತಿಮೆಯು ಅವರ ಪ್ರಮುಖ ಶಿಲ್ಪಕಲಾಕೃತಿಗಳಲ್ಲಿ ಒಂದಾಗಿದೆ. ಅಲ್ಲದೆ ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ ಸೇರಿದಂತೆ ದೇಶ, ವಿದೇಶಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಹಲವು ನಾಯಕರ ಪ್ರತಿಮೆಗಳ ಶಿಲ್ಪಿಯೂ ಅವರಾಗಿದ್ದಾರೆ. </p><p>ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ 1925ರ ಫೆಬ್ರುವರಿ 19ರಂದು ಜನಿಸಿದ ಸುತಾರ್ ಅವರು ಬಾಲ್ಯದಿಂದಲೂ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು.</p><p>ಸುತಾರ್ ಅವರು ಶಿಲ್ಪಕಲೆಗೆ ನೀಡಿದ ಗಣನೀಯ ಕೊಡುಗೆಗಾಗಿ 1999ರಲ್ಲಿ ಪದ್ಮಶ್ರೀ, 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಗೌರವಗಳು ಸಂದಿವೆ. ಮಹಾರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಯೂ ಅವರಿಗೆ ಇತ್ತೀಚೆಗೆ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿರುವ ಕೆಂಪೇಗೌಡರ ಪ್ರತಿಮೆ, ಗುಜರಾತಿನ ಕೆವಾಡಿಯಾದಲ್ಲಿ ನಿರ್ಮಿಸಲಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 182 ಮೀಟರ್ ಎತ್ತರದ ‘ಏಕತಾ ಪ್ರತಿಮೆ’ಯ ಮುಖ್ಯಶಿಲ್ಪಿ ರಾಮ್ ಸುತಾರ್ ಅವರು ಬುಧವಾರ ರಾತ್ರಿ ನಿಧನರಾದರು.</p><p>ಅವರಿಗೆ 100 ವರ್ಷ ವಯಸ್ಸಾಗಿತ್ತು, ವಯೋಸಜಹ ಕಾಯಿಲೆಗಳಿಂದ ಬಳಲುತ್ತಿದ್ದರು. </p><p>ಸಂಸತ್ತಿನ ಆವರಣದಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿ ಪ್ರತಿಮೆಯು ಅವರ ಪ್ರಮುಖ ಶಿಲ್ಪಕಲಾಕೃತಿಗಳಲ್ಲಿ ಒಂದಾಗಿದೆ. ಅಲ್ಲದೆ ಬಿ.ಆರ್.ಅಂಬೇಡ್ಕರ್, ಛತ್ರಪತಿ ಶಿವಾಜಿ ಸೇರಿದಂತೆ ದೇಶ, ವಿದೇಶಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಹಲವು ನಾಯಕರ ಪ್ರತಿಮೆಗಳ ಶಿಲ್ಪಿಯೂ ಅವರಾಗಿದ್ದಾರೆ. </p><p>ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ 1925ರ ಫೆಬ್ರುವರಿ 19ರಂದು ಜನಿಸಿದ ಸುತಾರ್ ಅವರು ಬಾಲ್ಯದಿಂದಲೂ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು.</p><p>ಸುತಾರ್ ಅವರು ಶಿಲ್ಪಕಲೆಗೆ ನೀಡಿದ ಗಣನೀಯ ಕೊಡುಗೆಗಾಗಿ 1999ರಲ್ಲಿ ಪದ್ಮಶ್ರೀ, 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಗೌರವಗಳು ಸಂದಿವೆ. ಮಹಾರಾಷ್ಟ್ರದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಮಹಾರಾಷ್ಟ್ರ ಭೂಷಣ’ ಪ್ರಶಸ್ತಿಯೂ ಅವರಿಗೆ ಇತ್ತೀಚೆಗೆ ಲಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>