<p><strong>ಮುಂಬೈ:</strong> ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. </p>.<p>ಆರ್ಎಸ್ಎಸ್ನ ಶತಮಾನೋತ್ಸವದ ಆಚರಣೆ ಹಿನ್ನೆಲೆ ಮುಂಬೈನಲ್ಲಿ ಆಯೋಜಿಸಲಾದ ಎರಡು ದಿನಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.</p>.<p>ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ಸಮಿತಿಯ ಭಾಗವಾಗಿಲ್ಲ. ಅವಕಾಶ ಬಂದಾಗ, ನಾನು ಖಂಡಿತವಾಗಿಯೂ ಕೇಳುತ್ತೇನೆ ಎಂದಿದ್ದಾರೆ.</p>.<p>ಬಹಳ ಸಮಯದಿಂದ, ಹಲವು ಸಂಸ್ಥೆಗಳು, ಪ್ರಮುಖ ನಾಯಕರು ಮತ್ತು ರಾಜಕೀಯ ಪಕ್ಷಗಳು ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕೆಂದು ಆಗ್ರಹಿಸುತ್ತಿವೆ ಎಂದೂ ಹೇಳಿದ್ದಾರೆ.</p>.<p>ಸಾವರ್ಕರ್ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರಿಗ ಭಾರತ ರತ್ನವನ್ನು ನೀಡಿದರೆ ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. </p>.<p>ಆರ್ಎಸ್ಎಸ್ನ ಶತಮಾನೋತ್ಸವದ ಆಚರಣೆ ಹಿನ್ನೆಲೆ ಮುಂಬೈನಲ್ಲಿ ಆಯೋಜಿಸಲಾದ ಎರಡು ದಿನಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.</p>.<p>ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ಸಮಿತಿಯ ಭಾಗವಾಗಿಲ್ಲ. ಅವಕಾಶ ಬಂದಾಗ, ನಾನು ಖಂಡಿತವಾಗಿಯೂ ಕೇಳುತ್ತೇನೆ ಎಂದಿದ್ದಾರೆ.</p>.<p>ಬಹಳ ಸಮಯದಿಂದ, ಹಲವು ಸಂಸ್ಥೆಗಳು, ಪ್ರಮುಖ ನಾಯಕರು ಮತ್ತು ರಾಜಕೀಯ ಪಕ್ಷಗಳು ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕೆಂದು ಆಗ್ರಹಿಸುತ್ತಿವೆ ಎಂದೂ ಹೇಳಿದ್ದಾರೆ.</p>.<p>ಸಾವರ್ಕರ್ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರಿಗ ಭಾರತ ರತ್ನವನ್ನು ನೀಡಿದರೆ ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>