ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2025ರ ವೇಳೆಗೆ ಕ್ಷಯ, ಕುಷ್ಠರೋಗ ನಿರ್ಮೂಲನೆಗೆ ಕ್ರಮ: ಮೋದಿ

Published 1 ಜುಲೈ 2023, 16:33 IST
Last Updated 1 ಜುಲೈ 2023, 16:33 IST
ಅಕ್ಷರ ಗಾತ್ರ

ನವದೆಹಲಿ: ‘2025ರ ವೇಳೆಗೆ ಭಾರತದಿಂದ ಕ್ಷಯರೋಗ (ಟಿ.ಬಿ) ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಪ್ರಯತ್ನಗಳು ಸಾಗಿದ್ದು, ಈ ನಿಟ್ಟಿನಲ್ಲಿ ಪ್ರಕರಣಗಳ ಸಂಖ್ಯೆಗಳು ಕಡಿಮೆಯಾಗುತ್ತಿವೆ’ ಎಂದು ಪ್ರಧಾನಿ ಮೋದಿ ಹೇಳಿದರು. 

‘ಅಂತೆಯೇ ದೇಶದಾದ್ಯಂತ 'ಕಾಲಾ ಅಜರ್", ಕುಷ್ಠರೋಗ ಮತ್ತು ಮಲೇರಿಯಾದ ಪ್ರಕರಣಗಳಲ್ಲೂ ಗಮನಾರ್ಹವಾಗಿ ಇಳಿಕೆಯಾಗಿದೆ. 2013ರಲ್ಲಿ ದೇಶದಲ್ಲಿ ಕಾಲಾ ಅಜರ್‌ನ 11 ಸಾವಿರ ಪ್ರಕರಣಗಳಿದ್ದವು. ಈಗ ಈ ಸಂಖ್ಯೆ ಸಾವಿರಕ್ಕಿಂತಲೂ ಕಡಿಮೆಯಾಗಿದೆ. 2013ರಲ್ಲಿ 10 ಲಕ್ಷ ಮಲೇರಿಯಾ ಪ್ರಕರಣಗಳಿದ್ದವು, 2022ರ ವೇಳೆಗೆ ಈ ಪ್ರಕರಣ ಸಂಖ್ಯೆ 2 ಲಕ್ಷಕ್ಕೆ ಇಳಿದಿದೆ. ಕುಷ್ಠರೋಗಿಗಳ ಸಂಖ್ಯೆಯೂ 1.25 ಲಕ್ಷದಿಂದ 70ರಿಂದ 75 ಸಾವಿರಕ್ಕೆ ಇಳಿದಿದೆ’ ಎಂದು ಮಾಹಿತಿ ನೀಡಿದರು. 

‘ಶನಿವಾರ 1 ಕೋಟಿ ಜನರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಈ ಕಾರ್ಡ್‌ಗಳು ಆಸ್ಪತ್ರೆಗಳಲ್ಲಿ ಬಡವರಿಗೆ ₹ 5 ಲಕ್ಷದ ತನಕ ಚಿಕಿತ್ಸೆ ಪಡೆಯಲು ಎಟಿಎಂ ಕಾರ್ಡ್‌ಗಳಂತೆ ಕಾರ್ಯನಿರ್ವಹಿಸಲಿವೆ’ ಎಂದೂ ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT