<p><strong>ಮುಂಬೈ</strong>: ಪರ್ಭಣಿ ಹಿಂಸಾಚಾರ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಪೊಲೀಸ್ ಮಹಾನಿರೀಕ್ಷಕ ಶಾಜಿ ಉಮಾಪ್ ಅವರೊಂದಿಗೆ ಮಾತನಾಡಿರುವುದಾಗಿ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ದಾರೆ.</p><p>‘ದಲಿತರ ಬಂಧನವನ್ನು ಮತ್ತು ಅವರ ಸ್ಥಳಗಳ ಮೇಲೆ ಕೊಂಬಿಂಗ್ ಕಾರ್ಯಾಚರಣೆ ನಡೆಸುವುದನ್ನು ತಕ್ಷಣ ನಿಲ್ಲಿಸುವಂತೆ ನಾನು ಒತ್ತಾಯಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.</p><p>ದಲಿತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ.</p><p>‘ಶುಕ್ರವಾರ ಮಧ್ಯಾಹ್ನ 12 ಗಂಟೆಯೊಳಗೆ ವಿಧ್ವಂಸಕ ಕೃತ್ಯ ಎಸಗಿದ ದುಷ್ಕರ್ಮಿಗಳ ಬಂಧನವಾಗಬೇಕು. ಇಲ್ಲವಾದಲ್ಲಿ ಮುಂದೆ ಏನು ಮಾಡಬೇಕೆಂಬುವುದನ್ನು ತಿಳಿಸುತ್ತೇನೆ’ ಎಂದೂ ಪ್ರಕಾಶ್ ಅಂಬೇಡ್ಕರ್ ಎಚ್ಚರಿಸಿದ್ದಾರೆ.</p><p><strong>ಘಟನೆ ಏನು?</strong></p><p>ಪರ್ಭಣಿ ರೈಲು ನಿಲ್ದಾಣದ ಆವರಣದಲ್ಲಿನ ಅಂಬೇಡ್ಕರ್ ಮೂರ್ತಿಯ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ದುಷ್ಕರ್ಮಿಗಳು ಮಂಗಳವಾರ ಧ್ವಂಸಗೊಳಿಸಿದ್ದರು.</p><p>ಈ ಕೃತ್ಯವನ್ನು ಖಂಡಿಸಿ ಮುಂಬೈನ ಪರ್ಭಣಿ ನಗರದಲ್ಲಿ ನಡೆಸಿದ ಪ್ರತಿಭಟನೆಯು ಬುಧವಾರ ಹಿಂಸಾಚಾರಕ್ಕೆ ತಿರುಗಿತ್ತು.</p><p>ಘಟನೆಗೆ ಸಂಬಂಧ ಈಗಾಗಲೇ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಪರ್ಭಣಿ ಹಿಂಸಾಚಾರ ಸಂಬಂಧ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಪೊಲೀಸ್ ಮಹಾನಿರೀಕ್ಷಕ ಶಾಜಿ ಉಮಾಪ್ ಅವರೊಂದಿಗೆ ಮಾತನಾಡಿರುವುದಾಗಿ ವಂಚಿತ್ ಬಹುಜನ ಅಘಾಡಿ ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ತಿಳಿಸಿದ್ದಾರೆ.</p><p>‘ದಲಿತರ ಬಂಧನವನ್ನು ಮತ್ತು ಅವರ ಸ್ಥಳಗಳ ಮೇಲೆ ಕೊಂಬಿಂಗ್ ಕಾರ್ಯಾಚರಣೆ ನಡೆಸುವುದನ್ನು ತಕ್ಷಣ ನಿಲ್ಲಿಸುವಂತೆ ನಾನು ಒತ್ತಾಯಿಸಿದ್ದೇನೆ’ ಎಂದು ಅವರು ಹೇಳಿದ್ದಾರೆ.</p><p>ದಲಿತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ.</p><p>‘ಶುಕ್ರವಾರ ಮಧ್ಯಾಹ್ನ 12 ಗಂಟೆಯೊಳಗೆ ವಿಧ್ವಂಸಕ ಕೃತ್ಯ ಎಸಗಿದ ದುಷ್ಕರ್ಮಿಗಳ ಬಂಧನವಾಗಬೇಕು. ಇಲ್ಲವಾದಲ್ಲಿ ಮುಂದೆ ಏನು ಮಾಡಬೇಕೆಂಬುವುದನ್ನು ತಿಳಿಸುತ್ತೇನೆ’ ಎಂದೂ ಪ್ರಕಾಶ್ ಅಂಬೇಡ್ಕರ್ ಎಚ್ಚರಿಸಿದ್ದಾರೆ.</p><p><strong>ಘಟನೆ ಏನು?</strong></p><p>ಪರ್ಭಣಿ ರೈಲು ನಿಲ್ದಾಣದ ಆವರಣದಲ್ಲಿನ ಅಂಬೇಡ್ಕರ್ ಮೂರ್ತಿಯ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ದುಷ್ಕರ್ಮಿಗಳು ಮಂಗಳವಾರ ಧ್ವಂಸಗೊಳಿಸಿದ್ದರು.</p><p>ಈ ಕೃತ್ಯವನ್ನು ಖಂಡಿಸಿ ಮುಂಬೈನ ಪರ್ಭಣಿ ನಗರದಲ್ಲಿ ನಡೆಸಿದ ಪ್ರತಿಭಟನೆಯು ಬುಧವಾರ ಹಿಂಸಾಚಾರಕ್ಕೆ ತಿರುಗಿತ್ತು.</p><p>ಘಟನೆಗೆ ಸಂಬಂಧ ಈಗಾಗಲೇ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>