<p><strong>ಮುಂಬೈ</strong>: ಎರಡರಿಂದ ನಾಲ್ಕು ತಿಂಗಳ ಕಾಲ ಈರುಳ್ಳಿ ತಿನ್ನದೇ ಇದ್ದರೆ ಯಾವ ಬದಲಾವಣೆಯೂ ಆಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ದಾದಾ ಭುಸೆ ಹೇಳಿದ್ದಾರೆ. </p><p>ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಸಚಿವರು ಈ ಹೇಳಿಕೆ ನೀಡಿದ್ದಾರೆ.</p><p>‘ಕೇಂದ್ರ ಸರ್ಕಾರವು ಸರಿಯಾದ ಸಮಾಲೋಚನೆ ನಡೆಸಿಯೇ ಈ ನಿರ್ಧಾರವನ್ನು ಕೈಗೊಂಡಿದೆ. ಬೆಲೆ ಏರಿಕೆಯನ್ನು ಪರಿಶೀಲಿಸಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ಈ ಕ್ರಮ ಕೈಗೊಂಡಿದೆ’ ಎನ್ನುವ ಮೂಲಕ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.</p><p>₹10 ಲಕ್ಷ ಮೌಲ್ಯದ ವಾಹನವನ್ನು ಬಳಸುವವರಿಗೆ, ₹10 ಅಥವಾ ₹20 ಹೆಚ್ಚಿನ ದರದಲ್ಲಿ ಈರುಳ್ಳಿಯನ್ನು ಖರೀದಿಸುವುದು ಹೊರೆಯಲ್ಲ. ಈರುಳ್ಳಿಯನ್ನು ಕೊಳ್ಳಲು ಶಕ್ತರಲ್ಲದವರು, ಎರಡು-ನಾಲ್ಕು ತಿಂಗಳ ಕಾಲ ಅದನ್ನು ತಿನ್ನದೇ ಇದ್ದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದಿದ್ದಾರೆ.</p><p>ಹಣಕಾಸು ಸಚಿವಾಲಯವು ಆಗಸ್ಟ್ 19 ರಂದು 2023ರ ಡಿಸೆಂಬರ್31ರವರೆಗೆ ಈರುಳ್ಳಿ ರಫ್ತಿನ ಮೇಲೆ 40 ಪ್ರತಿಶತ ಸುಂಕವನ್ನು ವಿಧಿಸಿ ಆದೇಶ ಹೊರಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಎರಡರಿಂದ ನಾಲ್ಕು ತಿಂಗಳ ಕಾಲ ಈರುಳ್ಳಿ ತಿನ್ನದೇ ಇದ್ದರೆ ಯಾವ ಬದಲಾವಣೆಯೂ ಆಗುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ದಾದಾ ಭುಸೆ ಹೇಳಿದ್ದಾರೆ. </p><p>ಈರುಳ್ಳಿ ರಫ್ತಿನ ಮೇಲೆ ಶೇ 40 ರಫ್ತು ಸುಂಕ ವಿಧಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿರುವ ಮಧ್ಯೆ ಸಚಿವರು ಈ ಹೇಳಿಕೆ ನೀಡಿದ್ದಾರೆ.</p><p>‘ಕೇಂದ್ರ ಸರ್ಕಾರವು ಸರಿಯಾದ ಸಮಾಲೋಚನೆ ನಡೆಸಿಯೇ ಈ ನಿರ್ಧಾರವನ್ನು ಕೈಗೊಂಡಿದೆ. ಬೆಲೆ ಏರಿಕೆಯನ್ನು ಪರಿಶೀಲಿಸಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆಯನ್ನು ಸುಧಾರಿಸಲು ಈ ಕ್ರಮ ಕೈಗೊಂಡಿದೆ’ ಎನ್ನುವ ಮೂಲಕ ಕೇಂದ್ರ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.</p><p>₹10 ಲಕ್ಷ ಮೌಲ್ಯದ ವಾಹನವನ್ನು ಬಳಸುವವರಿಗೆ, ₹10 ಅಥವಾ ₹20 ಹೆಚ್ಚಿನ ದರದಲ್ಲಿ ಈರುಳ್ಳಿಯನ್ನು ಖರೀದಿಸುವುದು ಹೊರೆಯಲ್ಲ. ಈರುಳ್ಳಿಯನ್ನು ಕೊಳ್ಳಲು ಶಕ್ತರಲ್ಲದವರು, ಎರಡು-ನಾಲ್ಕು ತಿಂಗಳ ಕಾಲ ಅದನ್ನು ತಿನ್ನದೇ ಇದ್ದರೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದಿದ್ದಾರೆ.</p><p>ಹಣಕಾಸು ಸಚಿವಾಲಯವು ಆಗಸ್ಟ್ 19 ರಂದು 2023ರ ಡಿಸೆಂಬರ್31ರವರೆಗೆ ಈರುಳ್ಳಿ ರಫ್ತಿನ ಮೇಲೆ 40 ಪ್ರತಿಶತ ಸುಂಕವನ್ನು ವಿಧಿಸಿ ಆದೇಶ ಹೊರಡಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>