ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

EVM ಬಗ್ಗೆ ದಾರಿ ತಪ್ಪಿಸುವುದನ್ನು ನಿಲ್ಲಿಸಿ, ಜನಾದೇಶ ಒಪ್ಪಿಕೊಳ್ಳಿ: ಶಿಂದೆ

Published : 8 ಡಿಸೆಂಬರ್ 2024, 10:49 IST
Last Updated : 8 ಡಿಸೆಂಬರ್ 2024, 10:49 IST
ಫಾಲೋ ಮಾಡಿ
Comments
ಉಪ ಸ್ಪೀಕರ್ ಹುದ್ದೆಗೆ ಕೋರಿಕೆ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಭಾನುವಾರ ಭೇಟಿ ಮಾಡಿದ ಮಹಾ ವಿಕಾಸ ಆಘಾಡಿ ಮೈತ್ರಿಕೂಟದ (ಎಂವಿಎ) ನಾಯಕರು ವಿಧಾನಸಭೆಯ ಉಪ ಸ್ಪೀಕರ್ ಹುದ್ದೆಯನ್ನು ಎಂವಿಎ ಪಕ್ಷಗಳಿಗೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು. ಸಂಪ್ರದಾಯದಂತೆ ಉಪ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಟ್ಟರೆ ಸ್ಪೀಕರ್‌ ಆಯ್ಕೆಯನ್ನು ಅವಿರೋಧವಾಗಿ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಎಂವಿಎ ನಾಯಕರು ಫಡಣವೀಸ್ ಅವರಿಗೆ ತಿಳಿಸಿದರು.
ನಾರ್ವೇಕರ ನೂತನ ಸ್ಪೀಕರ್?
ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಸ್ಪೀಕರ್ ಹುದ್ದೆಗೆ ತನ್ನ ಕಡೆಯಿಂದ ಯಾರನ್ನೂ ಕಣಕ್ಕೆ ಇಳಿಸದೆ ಇರಲು ಎಂವಿಎ ಮೈತ್ರಿಕೂಟ ತೀರ್ಮಾನಿಸಿದೆ. ಸ್ಪೀಕರ್ ಹುದ್ದೆಗೆ ನಾರ್ವೇಕರ ಅವರು ಭಾನುವಾರ ನಾಮಪತ್ರ ಸಲ್ಲಿಸಿದ್ದಾರೆ. ಭಾನುವಾರ ನಡೆದ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಒಟ್ಟು 105 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ‘ರಾಜ್‌ ಠಾಕ್ರೆ ಅಪ್ರಸ್ತುತ’: ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್‌ಎಸ್‌) ಮುಖ್ಯಸ್ಥ ರಾಜ್ ಠಾಕ್ರೆ ಅವರು ಅಪ್ರಸ್ತುತರಾಗಿದ್ದಾರೆ ಮಹಾಯುತಿ ಮೈತ್ರಿಕೂಟಕ್ಕೆ ಅವರ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಎಂಎನ್‌ಎಸ್‌ ಒಂದೂ ಸ್ಥಾನ ಗೆದ್ದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT