<p><strong>ನವದೆಹಲಿ</strong>: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್ ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಕಂಪನಿಯು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದೆ.</p>.<p>ಅಲ್ಲದೆ, ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಎಲ್ಲ ಮಾಧ್ಯಮ ವೇದಿಕೆಗಳಿಂದಲೂ ಹಿಂಪಡೆಯಲು ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ.</p>.<p>ಜಾಹೀರಾತುಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳಿಗೆ ಮಾಡಿದ ಮನವಿಯನ್ನು ಅಂಗೀಕರಿಸಲಾಗಿದೆಯೇ ಮತ್ತು ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂಪಡೆಯಲಾಗಿದೆಯೇ ಎನ್ನುವುದರ ಕುರಿತು ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಪೀಠವು, ಪತಂಜಲಿ ಆಯುರ್ವೇದ ಲಿಮಿಟೆಡ್ಗೆ ಸೂಚಿಸಿತು.</p>.<p>ಪೀಠವು ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.</p>.<p>ಕೋವಿಡ್ ಲಸಿಕಾ ಅಭಿಯಾನ ಮತ್ತು ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ಪತಂಜಲಿ ನಡೆಸಿದ ಅಪಪ್ರಚಾರದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.</p>.<p>ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರವು ಈ ಹಿಂದೆ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<p>ದಿಕ್ಕು ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್ದೇವ್, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್ಗೆ ನೀಡಲಾದ ನ್ಯಾಯಾಂಗ ನಿಂದನೆ ನೋಟಿಸ್ನ ಆದೇಶವನ್ನು ಸುಪ್ರೀಂ ಕೋರ್ಟ್ ಮೇ 14 ರಂದು ಕಾಯ್ದಿರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಉತ್ತರಾಖಂಡ ರಾಜ್ಯದ ಪರವಾನಗಿ ಪ್ರಾಧಿಕಾರವು ಏಪ್ರಿಲ್ನಲ್ಲಿ ಉತ್ಪಾದನಾ ಪರವಾನಗಿ ಅಮಾನತುಗೊಳಿಸಿದ್ದರಿಂದ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದೆ ಎಂದು ಪತಂಜಲಿ ಆಯುರ್ವೇದ ಲಿಮಿಟೆಡ್ ಮಂಗಳವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p>ಈ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಹಿಂತೆಗೆದುಕೊಳ್ಳುವಂತೆ 5,606 ಫ್ರಾಂಚೈಸ್ ಸ್ಟೋರ್ಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಕಂಪನಿಯು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದೆ.</p>.<p>ಅಲ್ಲದೆ, ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಎಲ್ಲ ಮಾಧ್ಯಮ ವೇದಿಕೆಗಳಿಂದಲೂ ಹಿಂಪಡೆಯಲು ಸೂಚನೆ ನೀಡಲಾಗಿದೆ ಎಂದು ಅದು ಹೇಳಿದೆ.</p>.<p>ಜಾಹೀರಾತುಗಳನ್ನು ತೆಗೆದುಹಾಕಲು ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳಿಗೆ ಮಾಡಿದ ಮನವಿಯನ್ನು ಅಂಗೀಕರಿಸಲಾಗಿದೆಯೇ ಮತ್ತು ಈ 14 ಉತ್ಪನ್ನಗಳ ಜಾಹೀರಾತುಗಳನ್ನು ಹಿಂಪಡೆಯಲಾಗಿದೆಯೇ ಎನ್ನುವುದರ ಕುರಿತು ಎರಡು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಪೀಠವು, ಪತಂಜಲಿ ಆಯುರ್ವೇದ ಲಿಮಿಟೆಡ್ಗೆ ಸೂಚಿಸಿತು.</p>.<p>ಪೀಠವು ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿತು.</p>.<p>ಕೋವಿಡ್ ಲಸಿಕಾ ಅಭಿಯಾನ ಮತ್ತು ಆಧುನಿಕ ವೈದ್ಯಕೀಯ ವ್ಯವಸ್ಥೆಗಳ ವಿರುದ್ಧ ಪತಂಜಲಿ ನಡೆಸಿದ ಅಪಪ್ರಚಾರದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.</p>.<p>ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ದಿವ್ಯ ಫಾರ್ಮಸಿಯ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರವು ಈ ಹಿಂದೆ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.</p>.<p>ದಿಕ್ಕು ತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಯೋಗ ಗುರು ರಾಮ್ದೇವ್, ಅವರ ಸಹಾಯಕ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್ಗೆ ನೀಡಲಾದ ನ್ಯಾಯಾಂಗ ನಿಂದನೆ ನೋಟಿಸ್ನ ಆದೇಶವನ್ನು ಸುಪ್ರೀಂ ಕೋರ್ಟ್ ಮೇ 14 ರಂದು ಕಾಯ್ದಿರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>