ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ), ರಾಜ್ಯಸಭೆ ಸದಸ್ಯ ಜೈರಾಮ್ ರಮೇಶ್ ಅವರು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದು, ‘ರಾಹುಲ್ ಗಾಂಧಿ ಅವರು ಪಳನಿಸ್ವಾಮಿ ಅವರಿಗೆ ಯಾವುದೇ ದೂರವಾಣಿ ಕರೆ ಮಾಡಿಲ್ಲ. ಡಿಎಂಕೆ-ಕಾಂಗ್ರೆಸ್ ಮೈತ್ರಿ ದೃಢವಾಗಿದೆ. ಗೊಂದಲ ಮೂಡಿಸುವ ಮತ್ತು ದುರ್ಬಲಗೊಳಿಸುವ ಇಂತಹ ಕುಚೇಷ್ಟೆಯ ಪ್ರಯತ್ನಗಳನ್ನು ಮೀರಿ ನಿಲ್ಲುವಷ್ಟು ಮೈತ್ರಿ ದೃಢವಾಗಿದೆ’ ಎಂದು ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.