<p><strong>ನವದೆಹಲಿ:</strong>ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 10 ರಾಜ್ಯಗಳ ಆಯ್ದ 54 ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ ಅವರು ಲಸಿಕೆ ವ್ಯರ್ಥವಾಗದಂತೆ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.</p>.<p>ಕೊರೊನಾ ವೈರಸ್ ಅಗೋಚರ ಹಾಗೂ ಪದೇಪದೇ ರೂಪಾಂತರಗೊಳ್ಳುವುದರಿಂದ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಿದೆ. ಹೀಗಾಗಿ ಈ ವೈರಸ್ ವಿರುದ್ಧದ ಕಾರ್ಯತಂತ್ರವು ಕ್ರಿಯಾಶೀಲವಾಗಿರಬೇಕು ಹಾಗೂ ಹೊಸತನದಿಂದ ಕೂಡಿರಬೇಕು ಎಂದುಪ್ರತಿಪಾದಿಸಿದರು.</p>.<p>‘ಮಕ್ಕಳು ಹಾಗೂ ಯುವಜನರು ಈಗ ಹೆಚ್ಚು ಅಪಾಯ ಎದುರಿಸುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ನಿಮ್ಮ ಜಿಲ್ಲೆಗಳಲ್ಲಿ ಮಕ್ಕಳು ಹಾಗೂ ಯುವಜನರಲ್ಲಿ ಕೊರೊನಾ ಸೋಂಕು ಹರಡುತ್ತಿರುವುದು ಹಾಗೂ ಅದರ ಗಂಭಿರತೆ ಬಗ್ಗೆ ನಿಗಾ ಇಡಬೇಕು. ಈ ಕುರಿತ ಮಾಹಿತಿಯನ್ನು ದಾಖಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಲಸಿಕೆ ವ್ಯರ್ಥವಾಗುವುದನ್ನು ತಡೆಯಬೇಕು. ವ್ಯರ್ಥವಾಗುವ ಪ್ರತಿ ಡೋಸ್, ಸೋಂಕಿನ ವಿರುದ್ಧ ಒಬ್ಬ ವ್ಯಕ್ತಿಗೆ ನೀಡಬೇಕಾಗಿದ್ದ ರಕ್ಷಣೆಯನ್ನು ನಿರಾಕರಿಸಿದಂತೆ’ ಎಂದೂ ಅವರು ಹೇಳಿದರು.</p>.<p>‘ಕೋವಿಡ್–19 ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ನಮ್ಮ ಮುಂದಿರುವ ಸವಾಲು ಕೊನೆಗೊಂಡಿಲ್ಲ. ಅಲ್ಪ ಪ್ರಮಾಣದ ಸೋಂಕು ಉಳಿದಿದ್ದರೂ ಅದನ್ನು ನಿರ್ಲಕ್ಷಿಸುವಂತಿಲ್ಲ. ಪ್ರಕರಣಗಳು ಕಡಿಮೆಯಾಗಿವೆ ಎಂದು ಮೈಮರೆಯುವಂತಿಲ್ಲ. ಕೋವಿಡ್–19 ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು.</p>.<p>ಅಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ ಎರಡನೇ ಸಂವಾದ ಇದಾಗಿದೆ. ಆಯ್ದ ರಾಜ್ಯಗಳ ಅಧಿಕಾರಿಗಳೊಂದಿಗೆ ಮಂಗಳವಾರ ಮೊದಲ ಸಂವಾದ ನಡೆಸಿದ್ದರು.</p>.<p>ಗುರುವಾರ ನಡೆದ ಸಂವಾದದಲ್ಲಿ ಛತ್ತೀಸಗಡ, ಹರಿಯಾಣ, ಕೇರಳ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಷಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಆಯ್ದ ಜಿಲ್ಲೆಗಳ ಅಧಿಕಾರಿಗಳು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 10 ರಾಜ್ಯಗಳ ಆಯ್ದ 54 ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಈ ವೇಳೆ ಅವರು ಲಸಿಕೆ ವ್ಯರ್ಥವಾಗದಂತೆ ಕ್ರಮಕೈಗೊಳ್ಳುವಂತೆ ಸಲಹೆ ನೀಡಿದರು.</p>.<p>ಕೊರೊನಾ ವೈರಸ್ ಅಗೋಚರ ಹಾಗೂ ಪದೇಪದೇ ರೂಪಾಂತರಗೊಳ್ಳುವುದರಿಂದ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಿದೆ. ಹೀಗಾಗಿ ಈ ವೈರಸ್ ವಿರುದ್ಧದ ಕಾರ್ಯತಂತ್ರವು ಕ್ರಿಯಾಶೀಲವಾಗಿರಬೇಕು ಹಾಗೂ ಹೊಸತನದಿಂದ ಕೂಡಿರಬೇಕು ಎಂದುಪ್ರತಿಪಾದಿಸಿದರು.</p>.<p>‘ಮಕ್ಕಳು ಹಾಗೂ ಯುವಜನರು ಈಗ ಹೆಚ್ಚು ಅಪಾಯ ಎದುರಿಸುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದ ಅವರು, ‘ನಿಮ್ಮ ಜಿಲ್ಲೆಗಳಲ್ಲಿ ಮಕ್ಕಳು ಹಾಗೂ ಯುವಜನರಲ್ಲಿ ಕೊರೊನಾ ಸೋಂಕು ಹರಡುತ್ತಿರುವುದು ಹಾಗೂ ಅದರ ಗಂಭಿರತೆ ಬಗ್ಗೆ ನಿಗಾ ಇಡಬೇಕು. ಈ ಕುರಿತ ಮಾಹಿತಿಯನ್ನು ದಾಖಲಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ಲಸಿಕೆ ವ್ಯರ್ಥವಾಗುವುದನ್ನು ತಡೆಯಬೇಕು. ವ್ಯರ್ಥವಾಗುವ ಪ್ರತಿ ಡೋಸ್, ಸೋಂಕಿನ ವಿರುದ್ಧ ಒಬ್ಬ ವ್ಯಕ್ತಿಗೆ ನೀಡಬೇಕಾಗಿದ್ದ ರಕ್ಷಣೆಯನ್ನು ನಿರಾಕರಿಸಿದಂತೆ’ ಎಂದೂ ಅವರು ಹೇಳಿದರು.</p>.<p>‘ಕೋವಿಡ್–19 ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದ್ದರೂ, ನಮ್ಮ ಮುಂದಿರುವ ಸವಾಲು ಕೊನೆಗೊಂಡಿಲ್ಲ. ಅಲ್ಪ ಪ್ರಮಾಣದ ಸೋಂಕು ಉಳಿದಿದ್ದರೂ ಅದನ್ನು ನಿರ್ಲಕ್ಷಿಸುವಂತಿಲ್ಲ. ಪ್ರಕರಣಗಳು ಕಡಿಮೆಯಾಗಿವೆ ಎಂದು ಮೈಮರೆಯುವಂತಿಲ್ಲ. ಕೋವಿಡ್–19 ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸಬೇಕು’ ಎಂದರು.</p>.<p>ಅಧಿಕಾರಿಗಳೊಂದಿಗೆ ಪ್ರಧಾನಿ ನಡೆಸಿದ ಎರಡನೇ ಸಂವಾದ ಇದಾಗಿದೆ. ಆಯ್ದ ರಾಜ್ಯಗಳ ಅಧಿಕಾರಿಗಳೊಂದಿಗೆ ಮಂಗಳವಾರ ಮೊದಲ ಸಂವಾದ ನಡೆಸಿದ್ದರು.</p>.<p>ಗುರುವಾರ ನಡೆದ ಸಂವಾದದಲ್ಲಿ ಛತ್ತೀಸಗಡ, ಹರಿಯಾಣ, ಕೇರಳ, ಮಹಾರಾಷ್ಟ್ರ, ಒಡಿಶಾ, ಪುದುಚೇರಿ, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಷಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಆಯ್ದ ಜಿಲ್ಲೆಗಳ ಅಧಿಕಾರಿಗಳು ಭಾಗಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>