<p><strong>ಲಖನೌ</strong> : ಮಧ್ಯಪ್ರದೇಶ ಮತ್ತು ರಾಜಸ್ಥಾನದ ರೈತರು ತಮ್ಮ ಹಸು ಹಾಗೂ ಎಮ್ಮೆಗಳು ದೊಡ್ಡಿಗಳಿಂದ ಹೋಗುತ್ತಿದ್ದರೂ ಹಿಡಿದುತರಲು ಪ್ರಯತ್ನಿಸದೇ ಸುಮ್ಮನೆ ಬಿಡುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ಬೀಡಾಡಿ ದನಗಳ ಕಾಟ ಹೆಚ್ಚಾಗಿದೆ!</p>.<p>ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಸುರೇಶಕುಮಾರ್ ಖನ್ನಾ ವಿಧಾನಸಭೆಗೆ ಸೋಮವಾರ ನೀಡಿದ ಮಾಹಿತಿ ಇದು. ಕಾಂಗ್ರೆಸ್ನ ಶಾಸಕ ಅಜಯ್ ಕುಮಾರ್ ಲಲ್ಲು ಅವರು ಬೀಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಅವರು ಈ ಉತ್ತರವನ್ನು ನೀಡಿದರು.</p>.<p>‘ಬೀಡಾಡಿ ದನಗಳಿಂದ ಬೆಳೆಹಾನಿ ಆಗುತ್ತಿಲ್ಲವೇ’ ಎಂಬ ಪ್ರಶ್ನೆಗೆ, ಪಶುಸಂಗೋಪನಾ ಸಚಿವ ಲಕ್ಷ್ಮಿನಾರಾಯಣ ಚೌಧರಿ, ‘ಇಂತಹ ದತ್ತಾಂಶವನ್ನು ಇಲಾಖೆಯಿಂದ ಕ್ರೋಡೀಕರಣ ಮಾಡಿಲ್ಲ’ ಎಂದು ಉತ್ತರಿಸಿದರು.</p>.<p>‘ಮಧ್ಯ ಪ್ರದೇಶ ಮತ್ತು ರಾಜಸ್ಥಾನದಿಂದ ದನಗಳನ್ನು ತಂದು ಬಿಡುತ್ತಿರುವುದರಿಂದ ನಮ್ಮ ರಾಜ್ಯದಲ್ಲಿ ಏನೇ ವ್ಯವಸ್ಥೆ ಮಾಡಿದರೂ ಸಮಸ್ಯೆಯು ಮತ್ತಷ್ಟು ಕಗ್ಗಂಟಾಗುತ್ತಾ ಹೊರಟಿದೆ.ನಮ್ಮ ಸರ್ಕಾರಕ್ಕೆ ಕೆಟ್ಟು ಹೆಸರು ತರಲು ಅವರು ಹೀಗೆ ಮಾಡುತ್ತಿದ್ದಾರೆ’ ಎಂದೂ ದೂರಿದರು.</p>.<p><strong>9,261 ದನ ಸಾವು</strong></p>.<p>ಉತ್ತರ ಪ್ರದೇಶದ ಗೋಶಾಲೆಗಳಲ್ಲಿ ಕಳೆದ ವರ್ಷ ಒಟ್ಟಾರೆ 9,261 ದನಗಳು ಸಾವನ್ನಪ್ಪಿವೆ ಎಂದು ವಿಧಾನಸಭೆಗೆ ಮಾಹಿತಿ ನೀಡಲಾಯಿತು.</p>.<p>‘ಇಷ್ಟೊಂದು ದನಗಳ ಸಾವು ಸಂಭವಿಸಿದರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿಲ್ಲವೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಲಕ್ಷ್ಮಿನಾರಾಯಣ ಚೌಧರಿ, ‘ಅವುಗಳೆಲ್ಲ ಸಹಜವಾಗಿ ಸಂಭವಿಸಿದ ಸಾವುಗಳಾಗಿದ್ದರಿಂದ ಯಾರ ಮೇಲೂ ಕ್ರಮ ಕೈಗೊಂಡಿಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong> : ಮಧ್ಯಪ್ರದೇಶ ಮತ್ತು ರಾಜಸ್ಥಾನದ ರೈತರು ತಮ್ಮ ಹಸು ಹಾಗೂ ಎಮ್ಮೆಗಳು ದೊಡ್ಡಿಗಳಿಂದ ಹೋಗುತ್ತಿದ್ದರೂ ಹಿಡಿದುತರಲು ಪ್ರಯತ್ನಿಸದೇ ಸುಮ್ಮನೆ ಬಿಡುತ್ತಿರುವ ಕಾರಣ ಉತ್ತರ ಪ್ರದೇಶದಲ್ಲಿ ಬೀಡಾಡಿ ದನಗಳ ಕಾಟ ಹೆಚ್ಚಾಗಿದೆ!</p>.<p>ಉತ್ತರಪ್ರದೇಶದ ಸಂಸದೀಯ ವ್ಯವಹಾರಗಳ ಸಚಿವ ಸುರೇಶಕುಮಾರ್ ಖನ್ನಾ ವಿಧಾನಸಭೆಗೆ ಸೋಮವಾರ ನೀಡಿದ ಮಾಹಿತಿ ಇದು. ಕಾಂಗ್ರೆಸ್ನ ಶಾಸಕ ಅಜಯ್ ಕುಮಾರ್ ಲಲ್ಲು ಅವರು ಬೀಡಾಡಿ ದನಗಳ ಹಾವಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಅವರು ಈ ಉತ್ತರವನ್ನು ನೀಡಿದರು.</p>.<p>‘ಬೀಡಾಡಿ ದನಗಳಿಂದ ಬೆಳೆಹಾನಿ ಆಗುತ್ತಿಲ್ಲವೇ’ ಎಂಬ ಪ್ರಶ್ನೆಗೆ, ಪಶುಸಂಗೋಪನಾ ಸಚಿವ ಲಕ್ಷ್ಮಿನಾರಾಯಣ ಚೌಧರಿ, ‘ಇಂತಹ ದತ್ತಾಂಶವನ್ನು ಇಲಾಖೆಯಿಂದ ಕ್ರೋಡೀಕರಣ ಮಾಡಿಲ್ಲ’ ಎಂದು ಉತ್ತರಿಸಿದರು.</p>.<p>‘ಮಧ್ಯ ಪ್ರದೇಶ ಮತ್ತು ರಾಜಸ್ಥಾನದಿಂದ ದನಗಳನ್ನು ತಂದು ಬಿಡುತ್ತಿರುವುದರಿಂದ ನಮ್ಮ ರಾಜ್ಯದಲ್ಲಿ ಏನೇ ವ್ಯವಸ್ಥೆ ಮಾಡಿದರೂ ಸಮಸ್ಯೆಯು ಮತ್ತಷ್ಟು ಕಗ್ಗಂಟಾಗುತ್ತಾ ಹೊರಟಿದೆ.ನಮ್ಮ ಸರ್ಕಾರಕ್ಕೆ ಕೆಟ್ಟು ಹೆಸರು ತರಲು ಅವರು ಹೀಗೆ ಮಾಡುತ್ತಿದ್ದಾರೆ’ ಎಂದೂ ದೂರಿದರು.</p>.<p><strong>9,261 ದನ ಸಾವು</strong></p>.<p>ಉತ್ತರ ಪ್ರದೇಶದ ಗೋಶಾಲೆಗಳಲ್ಲಿ ಕಳೆದ ವರ್ಷ ಒಟ್ಟಾರೆ 9,261 ದನಗಳು ಸಾವನ್ನಪ್ಪಿವೆ ಎಂದು ವಿಧಾನಸಭೆಗೆ ಮಾಹಿತಿ ನೀಡಲಾಯಿತು.</p>.<p>‘ಇಷ್ಟೊಂದು ದನಗಳ ಸಾವು ಸಂಭವಿಸಿದರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿಲ್ಲವೇ’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಲಕ್ಷ್ಮಿನಾರಾಯಣ ಚೌಧರಿ, ‘ಅವುಗಳೆಲ್ಲ ಸಹಜವಾಗಿ ಸಂಭವಿಸಿದ ಸಾವುಗಳಾಗಿದ್ದರಿಂದ ಯಾರ ಮೇಲೂ ಕ್ರಮ ಕೈಗೊಂಡಿಲ್ಲ’ ಎಂದು ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>