<p><strong>ಹೈದರಾಬಾದ್</strong>: ತೆಲಂಗಾಣದಲ್ಲಿ ಮತ್ತೆ 300 ಶ್ವಾನಗಳನ್ನು ಹತ್ಯೆ ಮಾಡಲಾಗಿದೆ. ಜಗಿತ್ಯಾಲ ಜಿಲ್ಲೆಯ ಪೆಗದಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p>.<p>ಇದರೊಂದಿಗೆ ರಾಜ್ಯದಲ್ಲಿ ಹತ್ಯೆಗೀಡಾದ ಶ್ವಾನಗಳ ಸಂಖ್ಯೆ 900ಕ್ಕೆ ಏರಿಕೆಯಾಗಿದೆ ಎಂದು ಪ್ರಾಣಿಗಳ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ. </p>.<p>‘ಪೆಗದಪಲ್ಲಿಯಲ್ಲಿ ಜನವರಿ 22ರಂದು ವಿಷಕಾರಿ ಚುಚ್ಚುಮದ್ದು ನೀಡಿ 300 ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಗ್ರಾಮದ ಸರಪಂಚ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸೇರಿ ಈ ಕೃತ್ಯ ಎಸಗಿದ್ದಾರೆ. ಶ್ವಾನಗಳನ್ನು ಕೊಲ್ಲುವುದಕ್ಕಾಗಿಯೇ ಅವರು ಕೆಲವರನ್ನು ನೇಮಿಸಿಕೊಂಡಿದ್ದಾರೆ’ ಎಂದೂ ಪೊಲೀಸರಿಗೆ ಹೋರಾಟಗಾರರು ದೂರು ನೀಡಿದ್ದಾರೆ. </p>.<p class="title">ದೂರನ್ನು ಆಧರಿಸಿ ಸರಪಂಚ್ ಹಾಗೂ ಪಂಚಾಯಿತಿ ಕಾರ್ಯದರ್ಶಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜತೆಗೆ ತನಿಖೆ ವೇಳೆ 70 ರಿಂದ 80 ಶ್ವಾನಗಳ ಕಳೆಬರಹ ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. </p>.<p class="title">3–4 ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವಂತಿದೆ. ಕೃತ್ಯದಲ್ಲಿ ಆರೋಪಿಗಳ ಕೈವಾಡ ಇದೆಯೇ ಎಂಬುದನ್ನು ಈ ಹಂತದಲ್ಲಿ ದೃಢಪಡಿಸಲಾಗದು. ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದ್ದು, ತನಿಖೆ ನಡೆಸಲಾಗುತ್ತಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p class="title">ಜನವರಿ 19ರಂದು ಯಾಚಾರಮ್ ಗ್ರಾಮದಲ್ಲಿ 100 ಶ್ವಾನಗಳನ್ನು, ಹನುಮಕೊಂಡ ಜಿಲ್ಲೆಯಲ್ಲಿ 300, ಕಾಮರೆಡ್ಡಿ ಜಿಲ್ಲೆಯಲ್ಲಿ 200 ಶ್ವಾನಗಳನ್ನು ಹತ್ಯೆಗೈಯ್ಯಲಾಗಿದೆ ಎಂದೂ ಪ್ರಾಣಿಗಳ ಹಕ್ಕುಗಳ ಸಂಘಟನೆಗಳು ಆರೋಪಿಸಿ, ದೂರು ದಾಖಲಿಸಿದ್ದವು.</p>.<p class="title">ಬೀದಿ ನಾಯಿಗಳ ಹತ್ಯೆ ಪ್ರಕರಣದಲ್ಲಿ ಸರಪಂಚ್ ಸೇರಿದಂತೆ ಕೆಲವು ಚುನಾಯಿತ ಪ್ರತಿನಿಧಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬೀದಿ ನಾಯಿಗಳ ಹಾವಳಿ ತಪ್ಪಿಸುವುದಾಗಿ ಜನರಿಗೆ ನೀಡಿರುವ ಭರವಸೆ ಈಡೇರಿಸಲು ಅವರು ಈ ಕೃತ್ಯಗಳನ್ನು ಎಸಗುತ್ತಿರಬಹುದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ತೆಲಂಗಾಣದಲ್ಲಿ ಮತ್ತೆ 300 ಶ್ವಾನಗಳನ್ನು ಹತ್ಯೆ ಮಾಡಲಾಗಿದೆ. ಜಗಿತ್ಯಾಲ ಜಿಲ್ಲೆಯ ಪೆಗದಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.</p>.<p>ಇದರೊಂದಿಗೆ ರಾಜ್ಯದಲ್ಲಿ ಹತ್ಯೆಗೀಡಾದ ಶ್ವಾನಗಳ ಸಂಖ್ಯೆ 900ಕ್ಕೆ ಏರಿಕೆಯಾಗಿದೆ ಎಂದು ಪ್ರಾಣಿಗಳ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ. </p>.<p>‘ಪೆಗದಪಲ್ಲಿಯಲ್ಲಿ ಜನವರಿ 22ರಂದು ವಿಷಕಾರಿ ಚುಚ್ಚುಮದ್ದು ನೀಡಿ 300 ಬೀದಿ ನಾಯಿಗಳನ್ನು ಹತ್ಯೆಗೈಯ್ಯಲಾಗಿದೆ. ಗ್ರಾಮದ ಸರಪಂಚ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸೇರಿ ಈ ಕೃತ್ಯ ಎಸಗಿದ್ದಾರೆ. ಶ್ವಾನಗಳನ್ನು ಕೊಲ್ಲುವುದಕ್ಕಾಗಿಯೇ ಅವರು ಕೆಲವರನ್ನು ನೇಮಿಸಿಕೊಂಡಿದ್ದಾರೆ’ ಎಂದೂ ಪೊಲೀಸರಿಗೆ ಹೋರಾಟಗಾರರು ದೂರು ನೀಡಿದ್ದಾರೆ. </p>.<p class="title">ದೂರನ್ನು ಆಧರಿಸಿ ಸರಪಂಚ್ ಹಾಗೂ ಪಂಚಾಯಿತಿ ಕಾರ್ಯದರ್ಶಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜತೆಗೆ ತನಿಖೆ ವೇಳೆ 70 ರಿಂದ 80 ಶ್ವಾನಗಳ ಕಳೆಬರಹ ಪತ್ತೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. </p>.<p class="title">3–4 ದಿನಗಳ ಹಿಂದೆಯೇ ಈ ಕೃತ್ಯ ನಡೆದಿರುವಂತಿದೆ. ಕೃತ್ಯದಲ್ಲಿ ಆರೋಪಿಗಳ ಕೈವಾಡ ಇದೆಯೇ ಎಂಬುದನ್ನು ಈ ಹಂತದಲ್ಲಿ ದೃಢಪಡಿಸಲಾಗದು. ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದ್ದು, ತನಿಖೆ ನಡೆಸಲಾಗುತ್ತಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p class="title">ಜನವರಿ 19ರಂದು ಯಾಚಾರಮ್ ಗ್ರಾಮದಲ್ಲಿ 100 ಶ್ವಾನಗಳನ್ನು, ಹನುಮಕೊಂಡ ಜಿಲ್ಲೆಯಲ್ಲಿ 300, ಕಾಮರೆಡ್ಡಿ ಜಿಲ್ಲೆಯಲ್ಲಿ 200 ಶ್ವಾನಗಳನ್ನು ಹತ್ಯೆಗೈಯ್ಯಲಾಗಿದೆ ಎಂದೂ ಪ್ರಾಣಿಗಳ ಹಕ್ಕುಗಳ ಸಂಘಟನೆಗಳು ಆರೋಪಿಸಿ, ದೂರು ದಾಖಲಿಸಿದ್ದವು.</p>.<p class="title">ಬೀದಿ ನಾಯಿಗಳ ಹತ್ಯೆ ಪ್ರಕರಣದಲ್ಲಿ ಸರಪಂಚ್ ಸೇರಿದಂತೆ ಕೆಲವು ಚುನಾಯಿತ ಪ್ರತಿನಿಧಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಕಳೆದ ವರ್ಷ ಡಿಸೆಂಬರ್ನಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಗೂ ಮುನ್ನ ಬೀದಿ ನಾಯಿಗಳ ಹಾವಳಿ ತಪ್ಪಿಸುವುದಾಗಿ ಜನರಿಗೆ ನೀಡಿರುವ ಭರವಸೆ ಈಡೇರಿಸಲು ಅವರು ಈ ಕೃತ್ಯಗಳನ್ನು ಎಸಗುತ್ತಿರಬಹುದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>