<p><strong>ನವದೆಹಲಿ:</strong> ಬೀದಿನಾಯಿಗಳನ್ನು ಸ್ಥಳಾಂತರ ಮಾಡುವಂತೆ ಮತ್ತು ಅವುಗಳನ್ನು ಆಶ್ರಯ ಕೇಂದ್ರಗಳಲ್ಲಿ (ಡಾಗ್ ಶೆಲ್ಟರ್) ಸಲಹುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ನಿರ್ದೇಶನವು ಕಾರ್ಯಸಾಧುವಲ್ಲ ಎಂದು ಪ್ರಾಣಿ ಹಕ್ಕುಗಳ ರಕ್ಷಣಾ ಕಾರ್ಯಕರ್ತೆ ಹಾಗೂ ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಪ್ರಾಣಿಗಳ ಬಗ್ಗೆ ಭಾರತಕ್ಕೆ ಇರುವ ಸಹಾನುಭೂತಿಯು ಮತ್ತೊಬ್ಬರಿಗೆ ಮಾರ್ಗದರ್ಶಿ ಆಗುವಂತಿರಬೇಕು ಎಂದು ಅವರು ಹೇಳಿದ್ದಾರೆ.</p>.<p>ಶಾಲೆ–ಕಾಲೇಜುಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಅಂತಹ ಶ್ವಾನಗಳನ್ನು ನಿರ್ದಿಷ್ಟ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಕಳೆದವಾರ ನಿರ್ದೇಶನ ನೀಡಿತ್ತು.</p>.<p>‘ಶ್ವಾನ, ಬೆಕ್ಕು, ಕೋತಿಗಳನ್ನು ಹಿಡಿದು ಆಶ್ರಯ ಕೇಂದ್ರಗಳಿಗೆ ಹಾಕಿ, ಸಂತಾನಶಕ್ತಿಹರಣ ಚಿಕಿತ್ಸೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ. ಆದರೆ ಯಾರೂ ಇದನ್ನು ಮಾಡುವುದಿಲ್ಲ. ಇದು ಕಾರ್ಯಸಾಧ್ಯವೂ ಅಲ್ಲ’ ಎಂದು ಪ್ರಶ್ನೆಯೊಂದಕ್ಕೆ ಮೇನಕಾ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೀದಿನಾಯಿಗಳನ್ನು ಸ್ಥಳಾಂತರ ಮಾಡುವಂತೆ ಮತ್ತು ಅವುಗಳನ್ನು ಆಶ್ರಯ ಕೇಂದ್ರಗಳಲ್ಲಿ (ಡಾಗ್ ಶೆಲ್ಟರ್) ಸಲಹುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ನಿರ್ದೇಶನವು ಕಾರ್ಯಸಾಧುವಲ್ಲ ಎಂದು ಪ್ರಾಣಿ ಹಕ್ಕುಗಳ ರಕ್ಷಣಾ ಕಾರ್ಯಕರ್ತೆ ಹಾಗೂ ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p>ಪ್ರಾಣಿಗಳ ಬಗ್ಗೆ ಭಾರತಕ್ಕೆ ಇರುವ ಸಹಾನುಭೂತಿಯು ಮತ್ತೊಬ್ಬರಿಗೆ ಮಾರ್ಗದರ್ಶಿ ಆಗುವಂತಿರಬೇಕು ಎಂದು ಅವರು ಹೇಳಿದ್ದಾರೆ.</p>.<p>ಶಾಲೆ–ಕಾಲೇಜುಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಅಂತಹ ಶ್ವಾನಗಳನ್ನು ನಿರ್ದಿಷ್ಟ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಕಳೆದವಾರ ನಿರ್ದೇಶನ ನೀಡಿತ್ತು.</p>.<p>‘ಶ್ವಾನ, ಬೆಕ್ಕು, ಕೋತಿಗಳನ್ನು ಹಿಡಿದು ಆಶ್ರಯ ಕೇಂದ್ರಗಳಿಗೆ ಹಾಕಿ, ಸಂತಾನಶಕ್ತಿಹರಣ ಚಿಕಿತ್ಸೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ. ಆದರೆ ಯಾರೂ ಇದನ್ನು ಮಾಡುವುದಿಲ್ಲ. ಇದು ಕಾರ್ಯಸಾಧ್ಯವೂ ಅಲ್ಲ’ ಎಂದು ಪ್ರಶ್ನೆಯೊಂದಕ್ಕೆ ಮೇನಕಾ ಉತ್ತರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>