<p><strong>ಮುಂಬೈ</strong>: ‘ಪ್ರಧಾನಿ ಅಥವಾ ಇತರೆ ಪ್ರಮುಖರ ಭೇಟಿಗಾಗಿ ಒಂದು ದಿನಕ್ಕಾಗಿ ಪಾದಚಾರಿ ಮಾರ್ಗಗಳನ್ನು ಸ್ವಚ್ಛವಾಗಿಡುವುದು ಸಾಧ್ಯವಾಗುವುದಾದರೆ, ಅದೇ ಕೆಲಸವನ್ನು ಜನಸಾಮಾನ್ಯರಿಗಾಗಿ ದಿನವೂ ಏಕೆ ಮಾಡಬಾರದು’ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಪ್ರಶ್ನಿಸಿದೆ. </p>.<p>ಮುಕ್ತ ಮತ್ತು ಬಳಕೆಗೆ ಸುರಕ್ಷಿತವಾಗಿರುವ ಪಾದಚಾರಿ ಮಾರ್ಗವು ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದನ್ನು ಒದಗಿಸಲು ಆಡಳಿತ ವ್ಯವಸ್ಥೆಯು ಬದ್ಧವಾಗಿರಬೇಕು ಎಂದೂ ಹೈಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಎಸ್.ಸೊನಾಕ್, ಕಮಲ್ ಖಾತಾ ಅವರಿದ್ದ ವಿಭಾಗೀಯ ಪೀಠವು, ಈ ಸಮಸ್ಯೆ ಬಗೆಹರಿಸಲು ಏನಾದರೂ ಮಾಡಬೇಕು ಎಂದು ಸಲಹೆ ನೀಡಿದೆ.</p>.<p>ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಕೆಲವು ವ್ಯಾಪಾರಿಗಳು ಅತಿಕ್ರಮಿಸಿರುವ ಪರಿಣಾಮದಿಂದಾಗಿ ಉಂಟಾಗಿರುವ ಸಮಸ್ಯೆ ಕುರಿತು ಹೈಕೋರ್ಟ್ ಕಳೆದ ವರ್ಷ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.</p>.<p>‘ಪ್ರಧಾನಿ ಅಥವಾ ಪ್ರಮುಖರೊಬ್ಬರು ಬಂದಾಗ ರಸ್ತೆ, ಪಾದಚಾರಿ ಮಾರ್ಗಗಳು ತಕ್ಷಣ ಮುಕ್ತವಾಗಲಿವೆ. ಅದು ಹೇಗೆ ಸಾಧ್ಯ; ಇದನ್ನೇ ಜನರಿಗಾಗಿ ಏಕೆ ಮಾಡಲಾಗದು’ ಎಂದು ಪೀಠವು ಪ್ರಶ್ನಿಸಿತು.</p> <p>ಬೃಹತ್ ಮುಂಬೈ ನಗರಪಾಲಿಕೆ (ಬಿಎಂಸಿ) ಪ್ರತಿನಿಧಿಸಿದ್ದ ಹಿರಿಯ ವಕೀಲ ಎಸ್.ಯು.ಕಾಮ್ದಾರ್, ‘ಇಂತಹ ವ್ಯಾಪಾರಿಗಳ ವಿರುದ್ಧ ಆಗಾಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೂ ಮತ್ತೆ ಬರುತ್ತಾರೆ’ ಎಂದರು.</p>.<p>ಸಮಸ್ಯೆ ಬಗೆಹರಿಸಲು ನೆಲಮಾಳಿಗೆಯಲ್ಲಿ ಮಾರುಕಟ್ಟೆ ವ್ಯವಸ್ಥೆ ಜಾರಿಗೆ ತರಲು ಬಿಎಂಸಿ ಚಿಂತನೆ ನಡೆಸುತ್ತಿದೆ ಎಂದು ವಕೀಲರು ಹೇಳಿದರು. ಇದಕ್ಕೆ ಪೀಠವು, ‘ನಗರಪಾಲಿಕೆಯು ಇಂಥ ಮಾತುಗಳ ಮೂಲಕ ಅಕ್ಷರಶಃ ಸಮಸ್ಯೆಯನ್ನು ಹೂತುಹಾಕುತ್ತಿದೆ’ ಎಂದು ಪ್ರತಿಕ್ರಿಯಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಪ್ರಧಾನಿ ಅಥವಾ ಇತರೆ ಪ್ರಮುಖರ ಭೇಟಿಗಾಗಿ ಒಂದು ದಿನಕ್ಕಾಗಿ ಪಾದಚಾರಿ ಮಾರ್ಗಗಳನ್ನು ಸ್ವಚ್ಛವಾಗಿಡುವುದು ಸಾಧ್ಯವಾಗುವುದಾದರೆ, ಅದೇ ಕೆಲಸವನ್ನು ಜನಸಾಮಾನ್ಯರಿಗಾಗಿ ದಿನವೂ ಏಕೆ ಮಾಡಬಾರದು’ ಎಂದು ಬಾಂಬೆ ಹೈಕೋರ್ಟ್ ಸೋಮವಾರ ಪ್ರಶ್ನಿಸಿದೆ. </p>.<p>ಮುಕ್ತ ಮತ್ತು ಬಳಕೆಗೆ ಸುರಕ್ಷಿತವಾಗಿರುವ ಪಾದಚಾರಿ ಮಾರ್ಗವು ಪ್ರತಿಯೊಬ್ಬರ ಮೂಲಭೂತ ಹಕ್ಕು. ಅದನ್ನು ಒದಗಿಸಲು ಆಡಳಿತ ವ್ಯವಸ್ಥೆಯು ಬದ್ಧವಾಗಿರಬೇಕು ಎಂದೂ ಹೈಕೋರ್ಟ್ ಹೇಳಿದೆ.</p>.<p>ನ್ಯಾಯಮೂರ್ತಿಗಳಾದ ಎಂ.ಎಸ್.ಸೊನಾಕ್, ಕಮಲ್ ಖಾತಾ ಅವರಿದ್ದ ವಿಭಾಗೀಯ ಪೀಠವು, ಈ ಸಮಸ್ಯೆ ಬಗೆಹರಿಸಲು ಏನಾದರೂ ಮಾಡಬೇಕು ಎಂದು ಸಲಹೆ ನೀಡಿದೆ.</p>.<p>ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಕೆಲವು ವ್ಯಾಪಾರಿಗಳು ಅತಿಕ್ರಮಿಸಿರುವ ಪರಿಣಾಮದಿಂದಾಗಿ ಉಂಟಾಗಿರುವ ಸಮಸ್ಯೆ ಕುರಿತು ಹೈಕೋರ್ಟ್ ಕಳೆದ ವರ್ಷ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು.</p>.<p>‘ಪ್ರಧಾನಿ ಅಥವಾ ಪ್ರಮುಖರೊಬ್ಬರು ಬಂದಾಗ ರಸ್ತೆ, ಪಾದಚಾರಿ ಮಾರ್ಗಗಳು ತಕ್ಷಣ ಮುಕ್ತವಾಗಲಿವೆ. ಅದು ಹೇಗೆ ಸಾಧ್ಯ; ಇದನ್ನೇ ಜನರಿಗಾಗಿ ಏಕೆ ಮಾಡಲಾಗದು’ ಎಂದು ಪೀಠವು ಪ್ರಶ್ನಿಸಿತು.</p> <p>ಬೃಹತ್ ಮುಂಬೈ ನಗರಪಾಲಿಕೆ (ಬಿಎಂಸಿ) ಪ್ರತಿನಿಧಿಸಿದ್ದ ಹಿರಿಯ ವಕೀಲ ಎಸ್.ಯು.ಕಾಮ್ದಾರ್, ‘ಇಂತಹ ವ್ಯಾಪಾರಿಗಳ ವಿರುದ್ಧ ಆಗಾಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೂ ಮತ್ತೆ ಬರುತ್ತಾರೆ’ ಎಂದರು.</p>.<p>ಸಮಸ್ಯೆ ಬಗೆಹರಿಸಲು ನೆಲಮಾಳಿಗೆಯಲ್ಲಿ ಮಾರುಕಟ್ಟೆ ವ್ಯವಸ್ಥೆ ಜಾರಿಗೆ ತರಲು ಬಿಎಂಸಿ ಚಿಂತನೆ ನಡೆಸುತ್ತಿದೆ ಎಂದು ವಕೀಲರು ಹೇಳಿದರು. ಇದಕ್ಕೆ ಪೀಠವು, ‘ನಗರಪಾಲಿಕೆಯು ಇಂಥ ಮಾತುಗಳ ಮೂಲಕ ಅಕ್ಷರಶಃ ಸಮಸ್ಯೆಯನ್ನು ಹೂತುಹಾಕುತ್ತಿದೆ’ ಎಂದು ಪ್ರತಿಕ್ರಿಯಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>