<div dir="ltr"><strong>ನವದೆಹಲಿ: </strong>ಮಕ್ಕಳ ಕೋವಿಡ್ ಆಸ್ಪತ್ರೆಗಳನ್ನು ಬಲಪಡಿಸುವ ಜೊತೆಗೆ, ಕೊರೊನಾ ಸೋಂಕಿನ ಕಾರಣಕ್ಕಾಗಿ ಪ್ರತ್ಯೇಕವಾಗಿರುವ ಮಕ್ಕಳಿಗೆ ಮಾನಸಿಕ ಮತ್ತು ಸಾಮಾಜಿಕ ಬೆಂಬಲ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳು ಆಯೋಗವು (ಎನ್ಎಚ್ಆರ್ಸಿ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ.</div>.<div dir="ltr">ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸಿಬ್ಬಂದಿ ಲಸಿಕೆ ಬಗ್ಗೆ ಇರುವ ಅನುಮಾನಗಳನ್ನು ಹೋಗಲಾಡಿಸಬೇಕು. ಇದರ ಜತೆಗೆ ಸಂಪರ್ಕಕ್ಕೆ ಬರುವ ಮಕ್ಕಳಿಗೆ ವೈರಸ್ ಸೋಂಕು ತಗುಲದಂತೆ ತಡೆಯಲು ಅಗತ್ಯವಾದ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಬೇಕು ಎಂದೂ ಆಯೋಗವು ಶಿಫಾರಸು ಮಾಡಿದೆ.</div>.<div dir="ltr"><strong>ಇದನ್ನೂ ಓದಿ... <a href="https://www.prajavani.net/india-news/availability-of-covid-vaccine-for-kids-will-pave-way-for-school-reopening-aiims-chief-842836.html" target="_blank">2–18 ವರ್ಷದವರಿಗೆ ಸೆಪ್ಟೆಂಬರ್ ವೇಳೆಗೆ ಲಸಿಕೆ: ಡಾ.ರಣದೀಪ್ ಗುಲ್ಹೇರಿಯಾ</a></strong></div>.<div dir="ltr">ಕೋವಿಡ್–19 ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಈ ತಿಂಗಳ ಆರಂಭದಲ್ಲಿ ಎನ್ಎಚ್ಆರ್ಸಿಯ ಸಲಹಾ ಸಮಿತಿಯು ನೀಡಿರುವ ಈ ಶಿಫಾರಸುಗಳ ಜೊತೆಗೆ ಇತರ ಅಂಶಗಳೂ ಇವೆ. ಕೋವಿಡ್ 3ನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದ ಸಂದರ್ಭದಲ್ಲಿ ಆಯೋಗವು ಈ ಸಲಹೆಗಳನ್ನು ನೀಡಿತ್ತು. ಆದರೆ, ತಜ್ಞರು ಈ ವರದಿಗಳನ್ನು ಅಲ್ಲಗಳೆದಿದ್ದರು.</div>.<div dir="ltr">ಮಕ್ಕಳ ಕೋವಿಡ್ ಆಸ್ಪತ್ರೆಗಳು, ಕೋವಿಡ್ ಶಿಷ್ಟಾಚಾರಗಳನ್ನು ಬಲಪಡಿಸುವ ಅವಶ್ಯಕತೆ ಇದೆ. ಮಕ್ಕಳ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆಗಳ ಹೆಚ್ಚಳ, ತರಬೇತಿ ಪಡೆದ ಸಿಬ್ಬಂದಿ, ಔಷಧಿ, ಉಪಕರಣಗಳ ಲಭ್ಯತೆಯನ್ನೂ ಖಾತ್ರಿಪಡಿಸಲು ಎನ್ಎಚ್ಆರ್ಸಿ ಸೂಚಿಸಿದೆ.</div>.<div dir="ltr">ಇವುಗಳ ಜೊತೆಗೆ ಕೊರೊನಾ ಸೋಂಕಿಗೊಳಗಾಗುವ ಮಕ್ಕಳು ಪ್ರತ್ಯೇಕವಾಗಿ ಇರುವಂಥ ಸಂದರ್ಭದಲ್ಲಿ ಅವರ ಮಾನಸಿಕ ಸ್ಥಿತಿಯ ಮೇಲಾಗುವ ಪರಿಣಾಮಗಳ ಬಗ್ಗೆಯೂ ಎನ್ಎಚ್ಆರ್ಸಿಯು ತನ್ನ ವರದಿಯಲ್ಲಿ ಪ್ರಮುಖವಾಗಿ ಗಮನ ಸೆಳೆದಿದೆ.</div>.<div dir="ltr">ಇಂಥ ಸಂದರ್ಭದಲ್ಲಿ ಬೇರೆ ಪರಿಸರದಲ್ಲಿ ವಾರಗಟ್ಟಲೇ ಕುಟುಂಬದಿಂದ ದೂರವಿರಬೇಕಾದ ಸಂದರ್ಭದಲ್ಲಿ, ಆಸ್ಪತ್ರೆಯ ಆಡಳಿತವು, ಮಕ್ಕಳ ವಯಸ್ಸಿಗೆ ಅನುಗುಣವಾಗಿ ಮಾನಸಿಕ–ಸಾಮಾಜಿಕ ಬೆಂಬಲಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪೋಷಕರೊಂದಿಗೆ ಆನ್ಲೈನ್ ಮತ್ತು ದೂರವಾಣಿ ಸಂವಾದ ನಡೆಸುವ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಆಯೋಗವು ಅಭಿಪ್ರಾಯಪಟ್ಟಿದೆ.</div>.<div dir="ltr">ಶಾಲೆಗಳು ಬಂದ್ ಆಗಿರುವ ಕಾರಣ, ಎಲ್ಲಾ ಮಕ್ಕಳಿಗೆ ವಿಶೇಷವಾಗಿ ಸಾಮಾಜಿಕ– ಆರ್ಥಿಕವಾಗಿ ಕೆಳಸ್ತರದಲ್ಲಿರುವ ಮಕ್ಕಳಿಗೆ ಇಂಟರ್ನೆಟ್ ಸೌಲಭ್ಯ ಸೇರಿದಂತೆ ಇತರ ಸೂಕ್ತ ಸಾಧನ ಮತ್ತು ಸಂಪನ್ಮೂಲಗಳನ್ನು ಒದಗಿಸಬೇಕು. ಈ ಮೂಲಕ ಎಲ್ಲ ಮಕ್ಕಳಿಗೆ ಆನ್ಲೈನ್ ತರಗತಿಗಳ ಪ್ರವೇಶವನ್ನು ಖಚಿತಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.ಈ ಉದ್ದೇಶಕ್ಕಾಗಿ ಸರ್ಕಾರವು ನಿರ್ದಿಷ್ಟ ಬಜೆಟ್ ಅನ್ನೂ ನಿಗದಿಪಡಿಸಬೇಕು ಎಂದೂ ಎನ್ಎಚ್ಆರ್ಸಿ ಹೇಳಿದೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div dir="ltr"><strong>ನವದೆಹಲಿ: </strong>ಮಕ್ಕಳ ಕೋವಿಡ್ ಆಸ್ಪತ್ರೆಗಳನ್ನು ಬಲಪಡಿಸುವ ಜೊತೆಗೆ, ಕೊರೊನಾ ಸೋಂಕಿನ ಕಾರಣಕ್ಕಾಗಿ ಪ್ರತ್ಯೇಕವಾಗಿರುವ ಮಕ್ಕಳಿಗೆ ಮಾನಸಿಕ ಮತ್ತು ಸಾಮಾಜಿಕ ಬೆಂಬಲ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳು ಆಯೋಗವು (ಎನ್ಎಚ್ಆರ್ಸಿ) ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ.</div>.<div dir="ltr">ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸಿಬ್ಬಂದಿ ಲಸಿಕೆ ಬಗ್ಗೆ ಇರುವ ಅನುಮಾನಗಳನ್ನು ಹೋಗಲಾಡಿಸಬೇಕು. ಇದರ ಜತೆಗೆ ಸಂಪರ್ಕಕ್ಕೆ ಬರುವ ಮಕ್ಕಳಿಗೆ ವೈರಸ್ ಸೋಂಕು ತಗುಲದಂತೆ ತಡೆಯಲು ಅಗತ್ಯವಾದ ವೈಯಕ್ತಿಕ ರಕ್ಷಣಾ ಸಾಧನಗಳನ್ನು ಒದಗಿಸಬೇಕು ಎಂದೂ ಆಯೋಗವು ಶಿಫಾರಸು ಮಾಡಿದೆ.</div>.<div dir="ltr"><strong>ಇದನ್ನೂ ಓದಿ... <a href="https://www.prajavani.net/india-news/availability-of-covid-vaccine-for-kids-will-pave-way-for-school-reopening-aiims-chief-842836.html" target="_blank">2–18 ವರ್ಷದವರಿಗೆ ಸೆಪ್ಟೆಂಬರ್ ವೇಳೆಗೆ ಲಸಿಕೆ: ಡಾ.ರಣದೀಪ್ ಗುಲ್ಹೇರಿಯಾ</a></strong></div>.<div dir="ltr">ಕೋವಿಡ್–19 ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಕುರಿತು ಈ ತಿಂಗಳ ಆರಂಭದಲ್ಲಿ ಎನ್ಎಚ್ಆರ್ಸಿಯ ಸಲಹಾ ಸಮಿತಿಯು ನೀಡಿರುವ ಈ ಶಿಫಾರಸುಗಳ ಜೊತೆಗೆ ಇತರ ಅಂಶಗಳೂ ಇವೆ. ಕೋವಿಡ್ 3ನೇ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದ ಸಂದರ್ಭದಲ್ಲಿ ಆಯೋಗವು ಈ ಸಲಹೆಗಳನ್ನು ನೀಡಿತ್ತು. ಆದರೆ, ತಜ್ಞರು ಈ ವರದಿಗಳನ್ನು ಅಲ್ಲಗಳೆದಿದ್ದರು.</div>.<div dir="ltr">ಮಕ್ಕಳ ಕೋವಿಡ್ ಆಸ್ಪತ್ರೆಗಳು, ಕೋವಿಡ್ ಶಿಷ್ಟಾಚಾರಗಳನ್ನು ಬಲಪಡಿಸುವ ಅವಶ್ಯಕತೆ ಇದೆ. ಮಕ್ಕಳ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆಗಳ ಹೆಚ್ಚಳ, ತರಬೇತಿ ಪಡೆದ ಸಿಬ್ಬಂದಿ, ಔಷಧಿ, ಉಪಕರಣಗಳ ಲಭ್ಯತೆಯನ್ನೂ ಖಾತ್ರಿಪಡಿಸಲು ಎನ್ಎಚ್ಆರ್ಸಿ ಸೂಚಿಸಿದೆ.</div>.<div dir="ltr">ಇವುಗಳ ಜೊತೆಗೆ ಕೊರೊನಾ ಸೋಂಕಿಗೊಳಗಾಗುವ ಮಕ್ಕಳು ಪ್ರತ್ಯೇಕವಾಗಿ ಇರುವಂಥ ಸಂದರ್ಭದಲ್ಲಿ ಅವರ ಮಾನಸಿಕ ಸ್ಥಿತಿಯ ಮೇಲಾಗುವ ಪರಿಣಾಮಗಳ ಬಗ್ಗೆಯೂ ಎನ್ಎಚ್ಆರ್ಸಿಯು ತನ್ನ ವರದಿಯಲ್ಲಿ ಪ್ರಮುಖವಾಗಿ ಗಮನ ಸೆಳೆದಿದೆ.</div>.<div dir="ltr">ಇಂಥ ಸಂದರ್ಭದಲ್ಲಿ ಬೇರೆ ಪರಿಸರದಲ್ಲಿ ವಾರಗಟ್ಟಲೇ ಕುಟುಂಬದಿಂದ ದೂರವಿರಬೇಕಾದ ಸಂದರ್ಭದಲ್ಲಿ, ಆಸ್ಪತ್ರೆಯ ಆಡಳಿತವು, ಮಕ್ಕಳ ವಯಸ್ಸಿಗೆ ಅನುಗುಣವಾಗಿ ಮಾನಸಿಕ–ಸಾಮಾಜಿಕ ಬೆಂಬಲಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪೋಷಕರೊಂದಿಗೆ ಆನ್ಲೈನ್ ಮತ್ತು ದೂರವಾಣಿ ಸಂವಾದ ನಡೆಸುವ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಆಯೋಗವು ಅಭಿಪ್ರಾಯಪಟ್ಟಿದೆ.</div>.<div dir="ltr">ಶಾಲೆಗಳು ಬಂದ್ ಆಗಿರುವ ಕಾರಣ, ಎಲ್ಲಾ ಮಕ್ಕಳಿಗೆ ವಿಶೇಷವಾಗಿ ಸಾಮಾಜಿಕ– ಆರ್ಥಿಕವಾಗಿ ಕೆಳಸ್ತರದಲ್ಲಿರುವ ಮಕ್ಕಳಿಗೆ ಇಂಟರ್ನೆಟ್ ಸೌಲಭ್ಯ ಸೇರಿದಂತೆ ಇತರ ಸೂಕ್ತ ಸಾಧನ ಮತ್ತು ಸಂಪನ್ಮೂಲಗಳನ್ನು ಒದಗಿಸಬೇಕು. ಈ ಮೂಲಕ ಎಲ್ಲ ಮಕ್ಕಳಿಗೆ ಆನ್ಲೈನ್ ತರಗತಿಗಳ ಪ್ರವೇಶವನ್ನು ಖಚಿತಗೊಳಿಸಬೇಕು ಎಂದು ಆಯೋಗವು ಶಿಫಾರಸು ಮಾಡಿದೆ.ಈ ಉದ್ದೇಶಕ್ಕಾಗಿ ಸರ್ಕಾರವು ನಿರ್ದಿಷ್ಟ ಬಜೆಟ್ ಅನ್ನೂ ನಿಗದಿಪಡಿಸಬೇಕು ಎಂದೂ ಎನ್ಎಚ್ಆರ್ಸಿ ಹೇಳಿದೆ.</div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>