<p><strong>ಅಯೋಧ್ಯೆ:</strong> ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಬಹು ಹಂತದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. </p>.<p>ಧರ್ಮಪೀಠದಿಂದ ರಾಮಪಥವರೆಗೆ ಮತ್ತು ಹನುಮಗಿರಿಯಿಂದ ಅಶರ್ಫೀ ಭವನದವರೆಗಿನ ಎಲ್ಲ ರಸ್ತೆಗಳಲ್ಲಿ ಪೊಲೀಸರು ಗಸ್ತು ತಿರುಗುವುದು ಕಾಣಿಸುತ್ತದೆ. ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ಭಾನುವಾರ ಅಯೋಧ್ಯೆಯಲ್ಲಿ ಪಥಸಂಚಲನ ನಡೆಸಿದರು. </p>.<p>‘ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಉತ್ತರ ಪ್ರದೇಶ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. </p>.<p>‘ಕಾರ್ಯಕ್ರಮದ ಸ್ಥಳದಲ್ಲಿ ಬಿಗಿ ಭದ್ರತೆ ಖಚಿತಪಡಿಸಿಕೊಳ್ಳಲು, ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆ ಜಿಲ್ಲೆಯಾದ್ಯಂತ 10 ಸಾವಿರ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಡೀ ಪಟ್ಟಣದ ಮೇಲೆ ಕಣ್ಗಾವಲು ಇಡಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧರಿತ ಡ್ರೋನ್ಗಳನ್ನೂ ಬಳಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. </p>.<p>ಬಹುಭಾಷೆ ಬಲ್ಲ ಪೊಲೀಸರ ಪ್ರತ್ಯೇಕ ಮಫ್ತಿ ತಂಡಗಳು ಕಾರ್ಯಕ್ರಮದ ತಾಣದಲ್ಲಿ ನಿಯೋಜನೆಗೊಂಡಿದೆ. ಸರಯೂ ನದಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ:</strong> ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಯೋಧ್ಯೆಯಾದ್ಯಂತ ಬಹು ಹಂತದ ಬಿಗಿ ಭದ್ರತೆ ಏರ್ಪಡಿಸಲಾಗಿದೆ. </p>.<p>ಧರ್ಮಪೀಠದಿಂದ ರಾಮಪಥವರೆಗೆ ಮತ್ತು ಹನುಮಗಿರಿಯಿಂದ ಅಶರ್ಫೀ ಭವನದವರೆಗಿನ ಎಲ್ಲ ರಸ್ತೆಗಳಲ್ಲಿ ಪೊಲೀಸರು ಗಸ್ತು ತಿರುಗುವುದು ಕಾಣಿಸುತ್ತದೆ. ಉತ್ತರ ಪ್ರದೇಶದ ಭಯೋತ್ಪಾದಕ ನಿಗ್ರಹ ದಳದ (ಎಟಿಎಸ್) ಸಿಬ್ಬಂದಿ ಭಾನುವಾರ ಅಯೋಧ್ಯೆಯಲ್ಲಿ ಪಥಸಂಚಲನ ನಡೆಸಿದರು. </p>.<p>‘ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕಾಗಿ ಉತ್ತರ ಪ್ರದೇಶ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. </p>.<p>‘ಕಾರ್ಯಕ್ರಮದ ಸ್ಥಳದಲ್ಲಿ ಬಿಗಿ ಭದ್ರತೆ ಖಚಿತಪಡಿಸಿಕೊಳ್ಳಲು, ತಂತ್ರಜ್ಞಾನವನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಲಾಗಿದೆ. ಅಯೋಧ್ಯೆ ಜಿಲ್ಲೆಯಾದ್ಯಂತ 10 ಸಾವಿರ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದ್ದಾರೆ.</p>.<p>‘ಇಡೀ ಪಟ್ಟಣದ ಮೇಲೆ ಕಣ್ಗಾವಲು ಇಡಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧರಿತ ಡ್ರೋನ್ಗಳನ್ನೂ ಬಳಸಲಾಗುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. </p>.<p>ಬಹುಭಾಷೆ ಬಲ್ಲ ಪೊಲೀಸರ ಪ್ರತ್ಯೇಕ ಮಫ್ತಿ ತಂಡಗಳು ಕಾರ್ಯಕ್ರಮದ ತಾಣದಲ್ಲಿ ನಿಯೋಜನೆಗೊಂಡಿದೆ. ಸರಯೂ ನದಿಗೆ ಹೊಂದಿಕೊಂಡಿರುವ ಪ್ರದೇಶದಲ್ಲಿ ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>