<p><strong>ಚೆನ್ನೈ</strong>: ‘ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.</p><p>‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ ಯತ್ನ ನಡೆಯುತ್ತಿದೆ’ ಎಂದು ಅಣ್ಣಾಮಲೈ ಎಕ್ಸ್ನಲ್ಲಿ ಆರೋಪಿಸಿದ್ದಾರೆ.</p><p>‘ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜನವರಿ 3ರಂದು ಉಮಾರತಿ ರಾಜನ್ ಅವರ ನೇತೃತ್ವದಲ್ಲಿ ಮಧುರೈನಿಂದ ಚೆನ್ನೈವರೆಗೆ ನ್ಯಾಯ ರ್ಯಾಲಿ ನಡೆಯಲಿದೆ. ರ್ಯಾಲಿ ಪೂರ್ಣಗೊಂಡ ನಂತರ ಮಹಿಳಾ ಘಟಕದ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>ಡಿಸೆಂಬರ್ 23ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಗಳಿಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ.</p><p>ಏತನ್ಮಧ್ಯೆ, ಆರೋಪಿಗಳು ಡಿಎಂಕೆ ಸದಸ್ಯರು ಎಂಬ ಬಿಜೆಪಿ ಆರೋಪವನ್ನು ಪಕ್ಷ (ಡಿಎಂಕೆ ) ಅಲ್ಲಗೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ‘ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.</p><p>‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ ಯತ್ನ ನಡೆಯುತ್ತಿದೆ’ ಎಂದು ಅಣ್ಣಾಮಲೈ ಎಕ್ಸ್ನಲ್ಲಿ ಆರೋಪಿಸಿದ್ದಾರೆ.</p><p>‘ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜನವರಿ 3ರಂದು ಉಮಾರತಿ ರಾಜನ್ ಅವರ ನೇತೃತ್ವದಲ್ಲಿ ಮಧುರೈನಿಂದ ಚೆನ್ನೈವರೆಗೆ ನ್ಯಾಯ ರ್ಯಾಲಿ ನಡೆಯಲಿದೆ. ರ್ಯಾಲಿ ಪೂರ್ಣಗೊಂಡ ನಂತರ ಮಹಿಳಾ ಘಟಕದ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.</p><p>ಡಿಸೆಂಬರ್ 23ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಗಳಿಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ.</p><p>ಏತನ್ಮಧ್ಯೆ, ಆರೋಪಿಗಳು ಡಿಎಂಕೆ ಸದಸ್ಯರು ಎಂಬ ಬಿಜೆಪಿ ಆರೋಪವನ್ನು ಪಕ್ಷ (ಡಿಎಂಕೆ ) ಅಲ್ಲಗೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>