<p><strong>ಭುವನೇಶ್ವರ:</strong> ಬಾಲೇಶ್ವರದ ಎಫ್.ಎಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ, ಬಿಜೆಡಿ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. </p>.<p>ಬಿಜೆಡಿಯ ಮಹಿಳಾ, ವಿದ್ಯಾರ್ಥಿ ಮತ್ತು ಯುವ ಘಟಕದ ಕಾರ್ಯಕರ್ತರು ಮುಖಕ್ಕೆ ಕಪ್ಪು ಮಾಸ್ಕ್ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು. ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಪಟ್ಟು ಹಿಡಿದರು. </p>.<p>‘ಸರ್ಕಾರವು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವವರೆಗೆ ಪ್ರತಿಭಟನೆ ಮುಂದುವರಿಸಲು ಬಿಜೆಡಿ ನಿರ್ಧರಿಸಿದೆ. ಜುಲೈ 21ರಂದು ಕಟಕ್, ಸಂಭಲ್ಪುರ ಮತ್ತು ಬೆಹ್ರಾಂಪುರದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ’ ಎಂದು ಬಿಜೆಡಿ ಉಪಾಧ್ಯಕ್ಷ ದೇವಿ ಪ್ರಸಾದ್ ಮಿಶ್ರಾ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p>.<p>‘ಜುಲೈ 16ರಂದು ಶಾಂತಿಯುತ ಪ್ರತಿಭಟನೆಗೆ ಮುಂದಾದ ನಮ್ಮ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಬಳಸಿದ್ದರಿಂದ ತಳ್ಳಾಟ –ನೂಕಾಟ ಉಂಟಾಗಿ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ’ ಎಂದು ಬಿಜೆಡಿ ನಾಯಕಿ ಟುಕುನಿ ಸಾಹೊ ಆಕ್ರೋಶ ವ್ಯಕ್ತಪಡಿಸಿದರು. </p>.<p>ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ದ್ವಿತೀಯ ವರ್ಷದ ಬಿ.ಇಡಿ ವಿದ್ಯಾರ್ಥಿನಿ ಜುಲೈ 12ರಂದು ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಜುಲೈ 14ರಂದು ಅವರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ:</strong> ಬಾಲೇಶ್ವರದ ಎಫ್.ಎಂ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ, ಬಿಜೆಡಿ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. </p>.<p>ಬಿಜೆಡಿಯ ಮಹಿಳಾ, ವಿದ್ಯಾರ್ಥಿ ಮತ್ತು ಯುವ ಘಟಕದ ಕಾರ್ಯಕರ್ತರು ಮುಖಕ್ಕೆ ಕಪ್ಪು ಮಾಸ್ಕ್ ಧರಿಸಿಕೊಂಡು ಮೌನ ಪ್ರತಿಭಟನೆ ನಡೆಸಿದರು. ನ್ಯಾಯಾಂಗ ತನಿಖೆಯೇ ಆಗಬೇಕು ಎಂದು ಪಟ್ಟು ಹಿಡಿದರು. </p>.<p>‘ಸರ್ಕಾರವು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವವರೆಗೆ ಪ್ರತಿಭಟನೆ ಮುಂದುವರಿಸಲು ಬಿಜೆಡಿ ನಿರ್ಧರಿಸಿದೆ. ಜುಲೈ 21ರಂದು ಕಟಕ್, ಸಂಭಲ್ಪುರ ಮತ್ತು ಬೆಹ್ರಾಂಪುರದಲ್ಲಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ’ ಎಂದು ಬಿಜೆಡಿ ಉಪಾಧ್ಯಕ್ಷ ದೇವಿ ಪ್ರಸಾದ್ ಮಿಶ್ರಾ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. </p>.<p>‘ಜುಲೈ 16ರಂದು ಶಾಂತಿಯುತ ಪ್ರತಿಭಟನೆಗೆ ಮುಂದಾದ ನಮ್ಮ ಮೇಲೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಬಳಸಿದ್ದರಿಂದ ತಳ್ಳಾಟ –ನೂಕಾಟ ಉಂಟಾಗಿ ಅನೇಕ ಕಾರ್ಯಕರ್ತರು ಗಾಯಗೊಂಡಿದ್ದಾರೆ’ ಎಂದು ಬಿಜೆಡಿ ನಾಯಕಿ ಟುಕುನಿ ಸಾಹೊ ಆಕ್ರೋಶ ವ್ಯಕ್ತಪಡಿಸಿದರು. </p>.<p>ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ದ್ವಿತೀಯ ವರ್ಷದ ಬಿ.ಇಡಿ ವಿದ್ಯಾರ್ಥಿನಿ ಜುಲೈ 12ರಂದು ಕಾಲೇಜು ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಜುಲೈ 14ರಂದು ಅವರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>