<p><strong>ಹೈದರಾಬಾದ್:</strong> ಪಾರ್ಟಿ ಮಾಡಿದ ನಂತರ ಸ್ನೇಹಿತರ ಮಧ್ಯೆ ಬಿಲ್ ಹಂಚಿಕೆ ವಿಚಾರದಲ್ಲಿ ಉಂಟಾದ ಹಣಕಾಸಿನ ಜಗಳವು, 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ನಾರಪಲ್ಲಿಯಲ್ಲಿರುವ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಭಾನುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. </p><p>ಸ್ನೇಹಿತರ ಗುಂಪೊಂದು ಬಾರ್ನಲ್ಲಿ ಪಾರ್ಟಿ ಮಾಡಿದ್ದು, ಬಿಲ್ ಹಂಚಿಕೊಳ್ಳುವ ವಿಷಯದಲ್ಲಿ ಗಲಾಟೆಯಾಗಿತ್ತು ಎಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆತ್ಮಹತ್ಯೆಗೂ ಮೊದಲು ವಿಡಿಯೊ ಮಾಡಿದ್ದು, ‘ಕೆಲವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದಕ್ಕಾಗಿ ಬೆದರಿಕೆ ಹಾಗೂ ಅವಮಾನ ಮಾಡಿದ್ದರು. ಬಲವಂತವಾಗಿ ಬಾರ್ಗೆ ಕರೆದೊಯ್ದು, ಮದ್ಯ ಸೇವಿಸುವಂತೆ ಒತ್ತಾಯ ಮಾಡಿದ್ದರು. ನಂತರ ₹10 ಸಾವಿರ ಬಿಲ್ ಕಟ್ಟುವಂತೆ ಒತ್ತಾಯಿಸಿದ್ದರು’ ಎಂದಿದ್ದಾನೆ.</p><p>ಮೃತನ ತಂದೆಯ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ಪಾರ್ಟಿ ಮಾಡಿದ ನಂತರ ಸ್ನೇಹಿತರ ಮಧ್ಯೆ ಬಿಲ್ ಹಂಚಿಕೆ ವಿಚಾರದಲ್ಲಿ ಉಂಟಾದ ಹಣಕಾಸಿನ ಜಗಳವು, 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.</p><p>ನಾರಪಲ್ಲಿಯಲ್ಲಿರುವ ಖಾಸಗಿ ವಸತಿ ನಿಲಯದ ಕೊಠಡಿಯಲ್ಲಿ ಭಾನುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. </p><p>ಸ್ನೇಹಿತರ ಗುಂಪೊಂದು ಬಾರ್ನಲ್ಲಿ ಪಾರ್ಟಿ ಮಾಡಿದ್ದು, ಬಿಲ್ ಹಂಚಿಕೊಳ್ಳುವ ವಿಷಯದಲ್ಲಿ ಗಲಾಟೆಯಾಗಿತ್ತು ಎಂದು ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಆತ್ಮಹತ್ಯೆಗೂ ಮೊದಲು ವಿಡಿಯೊ ಮಾಡಿದ್ದು, ‘ಕೆಲವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಅದಕ್ಕಾಗಿ ಬೆದರಿಕೆ ಹಾಗೂ ಅವಮಾನ ಮಾಡಿದ್ದರು. ಬಲವಂತವಾಗಿ ಬಾರ್ಗೆ ಕರೆದೊಯ್ದು, ಮದ್ಯ ಸೇವಿಸುವಂತೆ ಒತ್ತಾಯ ಮಾಡಿದ್ದರು. ನಂತರ ₹10 ಸಾವಿರ ಬಿಲ್ ಕಟ್ಟುವಂತೆ ಒತ್ತಾಯಿಸಿದ್ದರು’ ಎಂದಿದ್ದಾನೆ.</p><p>ಮೃತನ ತಂದೆಯ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>