<p><strong>ತಿರುವನಂತಪುರ:</strong> ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇರೆಗೆ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ಕೇರಳದ ಕೋಯಿಕೋಡ್ ಜಿಲ್ಲೆಯ ಚೇಳನ್ನೂರಿನಲ್ಲಿ ನಡೆದಿದೆ.</p>.<p>ಶ್ರೀನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲರಾದ ದೇವಿಪ್ರಿಯಾ ಕೊಠಡಿಯಲ್ಲಿ ಬಂಧಿತರಾದವರು.</p>.<p>ಅತಿಥಿ ಉಪನ್ಯಾಸಕರೊಬ್ಬರು ವಿಚಾರ ಸಂಕಿರಣವೊಂದರಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಒಟ್ಟಿಗೆ ಕೂರಲು ಅವಕಾಶ ಕೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಉಪನ್ಯಾಸಕರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು.</p>.<p>‘ಪ್ರಾಂಶುಪಾಲರು ನೈತಿಕ ಪೊಲೀಸ್ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರನ್ನು ಅಮಾನತು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಕಾಲೇಜು ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದಾಗ ಅವರು ಲಭ್ಯರಾಗಲಿಲ್ಲ.</p>.<p>‘ಪ್ರಾಂಶುಪಾಲರು ವಿದ್ಯಾರ್ಥಿಗಳೊಂದಿಗೆ ಮಾತನಾಡಲು ಸಿದ್ಧರಿರಲಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಕೊಠಡಿಯಲ್ಲಿ ಕೂಡಿಹಾಕಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಕಾಲೇಜಿಗೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರ ಮನವೊಲಿಸಲು ಯತ್ನಿಸಿದರಾದರೂ, ಪ್ರಾಂಶುಪಾಲರು ವಿದ್ಯಾರ್ಥಿಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಪ್ರಾಂಶುಪಾಲರು ನಮ್ಮ ಬೇಡಿಕೆ ಈಡೇರಿಸಿದಲ್ಲಿ ಮಾತ್ರ ಅವರೊಂದಿಗೆ ಮಾತನಾಡುವುದಾಗಿ ವಿದ್ಯಾರ್ಥಿಗಳು ಪಟ್ಟು ಹಿಡಿದರು ಎನ್ನಲಾಗಿದೆ.</p>.<p>ಇತ್ತೀಚೆಗಷ್ಟೇ ಇದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಸಂಜೆ ವೇಳೆ ಹಾಸ್ಟೆಲ್ನಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೊಕ್ಕಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ವಿದ್ಯಾರ್ಥಿನಿಯರ ಪರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದ ಮೇರೆಗೆ ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಘಟನೆ ಕೇರಳದ ಕೋಯಿಕೋಡ್ ಜಿಲ್ಲೆಯ ಚೇಳನ್ನೂರಿನಲ್ಲಿ ನಡೆದಿದೆ.</p>.<p>ಶ್ರೀನಾರಾಯಣ ಗುರು ಕಾಲೇಜಿನ ಪ್ರಾಂಶುಪಾಲರಾದ ದೇವಿಪ್ರಿಯಾ ಕೊಠಡಿಯಲ್ಲಿ ಬಂಧಿತರಾದವರು.</p>.<p>ಅತಿಥಿ ಉಪನ್ಯಾಸಕರೊಬ್ಬರು ವಿಚಾರ ಸಂಕಿರಣವೊಂದರಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಒಟ್ಟಿಗೆ ಕೂರಲು ಅವಕಾಶ ಕೊಟ್ಟಿದ್ದರು ಎನ್ನುವ ಕಾರಣಕ್ಕಾಗಿ ಉಪನ್ಯಾಸಕರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು.</p>.<p>‘ಪ್ರಾಂಶುಪಾಲರು ನೈತಿಕ ಪೊಲೀಸ್ಗಿರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿಗಳು, ಅತಿಥಿ ಉಪನ್ಯಾಸಕರನ್ನು ಅಮಾನತು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p>ಈ ಸಂಬಂಧ ಕಾಲೇಜು ಆಡಳಿತ ಮಂಡಳಿಯ ಪ್ರತಿಕ್ರಿಯೆ ಪಡೆಯಲು ಪ್ರಯತ್ನಿಸಿದಾಗ ಅವರು ಲಭ್ಯರಾಗಲಿಲ್ಲ.</p>.<p>‘ಪ್ರಾಂಶುಪಾಲರು ವಿದ್ಯಾರ್ಥಿಗಳೊಂದಿಗೆ ಮಾತನಾಡಲು ಸಿದ್ಧರಿರಲಿಲ್ಲ. ಹಾಗಾಗಿ, ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಕೊಠಡಿಯಲ್ಲಿ ಕೂಡಿಹಾಕಿದರು’ ಎಂದು ಮೂಲಗಳು ತಿಳಿಸಿವೆ.</p>.<p>ಕಾಲೇಜಿಗೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರ ಮನವೊಲಿಸಲು ಯತ್ನಿಸಿದರಾದರೂ, ಪ್ರಾಂಶುಪಾಲರು ವಿದ್ಯಾರ್ಥಿಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಪ್ರಾಂಶುಪಾಲರು ನಮ್ಮ ಬೇಡಿಕೆ ಈಡೇರಿಸಿದಲ್ಲಿ ಮಾತ್ರ ಅವರೊಂದಿಗೆ ಮಾತನಾಡುವುದಾಗಿ ವಿದ್ಯಾರ್ಥಿಗಳು ಪಟ್ಟು ಹಿಡಿದರು ಎನ್ನಲಾಗಿದೆ.</p>.<p>ಇತ್ತೀಚೆಗಷ್ಟೇ ಇದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಸಂಜೆ ವೇಳೆ ಹಾಸ್ಟೆಲ್ನಲ್ಲಿ ಮೊಬೈಲ್ ಬಳಸುವುದನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೊಕ್ಕಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ವಿದ್ಯಾರ್ಥಿನಿಯರ ಪರ ಆದೇಶ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>