ಸಂಸದರಿಗೆ ಮತ್ತು ಇತರರಿಗೆ ನೀಡುತ್ತಿದ್ದ ಆಹಾರಗಳ ಮೇಲಿನ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಜನವರಿ 19ರಂದು ತಿಳಿಸಿದ್ದರು. ಇದರಂತೆ, ದರಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಸಬ್ಸಿಡಿ ಸ್ಥಗಿತಗೊಳಿಸಿರುವುದರಿಂದ ಆಗುವ ಉಳಿತಾಯದ ಬಗ್ಗೆ ಬಿರ್ಲಾ ಅವರು ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ, ಮೂಲಗಳ ಪ್ರಕಾರ ವಾರ್ಷಿಕವಾಗಿ ₹8 ಕೋಟಿ ಉಳಿತಾಯವಾಗಲಿದೆ ಎಂದು ಹೇಳಲಾಗಿದೆ.