ನವದೆಹಲಿ: ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.
‘ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ ಹೊರಬರಲು ನಾವು ಜಗನ್ನಾಥನನ್ನು ಪ್ರಾರ್ಥಿಸುತ್ತಿದ್ದೇವೆ. ಸಿಕ್ಕಿಬಿದ್ದಿರುವ 41 ಕಾರ್ಮಿಕರಲ್ಲಿ 5 ಮಂದಿ ಒಡಿಶಾದವರಿದ್ದಾರೆ. ಎಲ್ಲ ಕಾರ್ಮಿಕರ ರಕ್ಷಣೆಗಾಗಿ ನಾವೆಲ್ಲರೂ ಒಗ್ಗೂಡಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದು ಸುದರ್ಶನ್ ಪಟ್ನಾಯಕ್ ತಿಳಿಸಿದ್ದಾರೆ.
ಈ ಕಲಾಕೃತಿಯನ್ನು ತಯಾರಿಸಲು 4 ಟನ್ ಮರಳನ್ನು ಬಳಸಲಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಸಹ ಕೈಜೋಡಿಸಿದರು ಎಂದು ಪಟ್ನಾಯಕ್ ತಿಳಿಸಿದ್ದಾರೆ.
ಸುರಂಗದಲ್ಲಿ 41 ಮಂದಿ ಕಾರ್ಮಿಕರ ಸಿಲುಕಿಕೊಂಡಿದ್ದಾರೆ. ಅವರ ರಕ್ಷಣೆಗಾಗಿ 11 ದಿನದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.