ನವದೆಹಲಿ: ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ರಾಜ್ಯಸಭೆ ಸದಸ್ಯೆಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಸಂಸತ್ ಭವನದಲ್ಲಿ ಸುಧಾ ಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ರಾಜ್ಯಸಭಾ ನಾಯಕ ಪಿಯೂಷ್ ಗೋಯೆಲ್ ಮತ್ತಿತರರು ಉಪಸ್ಥಿತರಿದ್ದರು.
ಈ ವೇಳೆ ಸುಧಾ ಮೂರ್ತಿ ಅವರ ಪತಿ ನಾರಾಯಣ ಮೂರ್ತಿ ಕೂಡ ಹಾಜರಿದ್ದರು.
ಮಹಿಳಾ ದಿನಾಚರಣೆಯಂದು ಸುಧಾ ಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.
ಇವರು ಪ್ರಸ್ತುತ ರಾಜ್ಯಸಭೆಯಲ್ಲಿರುವ ಕರ್ನಾಟಕದ ಎರಡನೇ ನಾಮನಿರ್ದೇಶಿತ ಸದಸ್ಯರಾಗಲಿದ್ದಾರೆ.