ನವದೆಹಲಿ: ಸಕ್ಕರೆ ರಫ್ತು ಮೇಲಿನ ನಿರ್ಬಂಧವನ್ನು ಅಕ್ಟೋಬರ್ 31ರ ನಂತರವೂ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಹಬ್ಬದ ಋತುವಿನಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಸರಕುಗಳ ಲಭ್ಯತೆಯನ್ನು ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಹಿಂದೆ ಅಕ್ಟೋಬರ್ 31ರವರೆಗೆ ನಿರ್ಬಂಧ ವಿಧಿಸಿತ್ತು.
ಕಚ್ಚಾ ಸಕ್ಕರೆ, ಬಿಳಿ ಸಕ್ಕರೆ, ಸಂಸ್ಕರಿತ ಸಕ್ಕರೆ ಹಾಗೂ ಸಾವಯವ ಸಕ್ಕರೆ ಮೇಲಿನ ರಪ್ತು ನಿರ್ಬಂಧವನ್ನು ಅಕ್ಟೋಬರ್ 31 ರಿಂದ ಮುಂದಿನ ಆದೇಶದವರೆಗೂ ವಿಸ್ತರಿಸಲಾಗಿದೆ. ಇತರ ಷರತ್ತುಗಳಲ್ಲಿ ಬದಲಾವಣೆ ಇಲ್ಲ’ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ(ಡಿಜಿಎಫ್ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.