<p><strong>ನವದೆಹಲಿ</strong>: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ಟಿಎಫ್) ಸುಪ್ರೀಂ ಕೋರ್ಟ್ ಸೋಮವಾರ ರಚನೆ ಮಾಡಿದೆ.</p>.<p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಂಡಿದೆ.</p>.<p>ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹದೇವನ್ ಅವರನ್ನು ಒಳಗೊಂಡ ನ್ಯಾಯಪೀಠವು, ಐಐಟಿ ದೆಹಲಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕೆಂದು ದೆಹಲಿ ಪೊಲೀಸರಿಗೆ ಸೂಚಿಸಿತು.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರು ಎನ್ಟಿಎಫ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗುವ ಅಂಶಗಳು, ಚಾಲ್ತಿಯಲ್ಲಿರುವ ನಿಯಮಗಳು ಮತ್ತಿತರ ಅಂಶಗಳ ಬಗ್ಗೆ ಎನ್ಟಿಎಫ್ ವರದಿ ನೀಡಲಿದೆ ಎಂದು ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ಕೋರ್ಟ್ ಹೇಳಿದ ಇತರ ಅಂಶಗಳು</strong></p><ul><li><p>ವರದಿ ತಯಾರಿಕೆ ಸಂದರ್ಭದಲ್ಲಿ ಎನ್ಟಿಎಫ್ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗೆ ಪರಿಶೀಲನೆಗಾಗಿ ದಿಢೀರ್ ಭೇಟಿ ನೀಡುವ ಅಧಿಕಾರವನ್ನು ಹೊಂದಿರುತ್ತದೆ</p></li><li><p>ಎನ್ಟಿಎಫ್ ತನ್ನ ಮಧ್ಯಂತರ ವರದಿಯನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು</p></li><li><p>ಅಂತಿಮ ವರದಿಯನ್ನು ಎಂಟು ತಿಂಗಳ ಒಳಗಾಗಿ ಸಲ್ಲಿಸಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕಾಗಿ ಮತ್ತು ಆತ್ಮಹತ್ಯೆ ತಡೆಗಾಗಿ ರಾಷ್ಟ್ರೀಯ ಕಾರ್ಯಪಡೆಯನ್ನು (ಎನ್ಟಿಎಫ್) ಸುಪ್ರೀಂ ಕೋರ್ಟ್ ಸೋಮವಾರ ರಚನೆ ಮಾಡಿದೆ.</p>.<p>ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪದೇ ಪದೇ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವ ಕಾರಣ ಈ ನಿರ್ಧಾರ ಕೈಗೊಂಡಿದೆ.</p>.<p>ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಮತ್ತು ಆರ್.ಮಹದೇವನ್ ಅವರನ್ನು ಒಳಗೊಂಡ ನ್ಯಾಯಪೀಠವು, ಐಐಟಿ ದೆಹಲಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಬೇಕೆಂದು ದೆಹಲಿ ಪೊಲೀಸರಿಗೆ ಸೂಚಿಸಿತು.</p>.<p>ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರು ಎನ್ಟಿಎಫ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗುವ ಅಂಶಗಳು, ಚಾಲ್ತಿಯಲ್ಲಿರುವ ನಿಯಮಗಳು ಮತ್ತಿತರ ಅಂಶಗಳ ಬಗ್ಗೆ ಎನ್ಟಿಎಫ್ ವರದಿ ನೀಡಲಿದೆ ಎಂದು ಎಂದು ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ಕೋರ್ಟ್ ಹೇಳಿದ ಇತರ ಅಂಶಗಳು</strong></p><ul><li><p>ವರದಿ ತಯಾರಿಕೆ ಸಂದರ್ಭದಲ್ಲಿ ಎನ್ಟಿಎಫ್ ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗೆ ಪರಿಶೀಲನೆಗಾಗಿ ದಿಢೀರ್ ಭೇಟಿ ನೀಡುವ ಅಧಿಕಾರವನ್ನು ಹೊಂದಿರುತ್ತದೆ</p></li><li><p>ಎನ್ಟಿಎಫ್ ತನ್ನ ಮಧ್ಯಂತರ ವರದಿಯನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು</p></li><li><p>ಅಂತಿಮ ವರದಿಯನ್ನು ಎಂಟು ತಿಂಗಳ ಒಳಗಾಗಿ ಸಲ್ಲಿಸಬೇಕು</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>