<p><strong>ನವದೆಹಲಿ</strong>: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಟರ್ಕಿಯಿಂದ ಸೇಬು ಆಮದು ಮಾಡಿಕೊಳ್ಳುತ್ತಿರುವ ವಿಷಯಕ್ಕೆ ಸಂಬಂಧಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಸೇಬು ಬೆಳೆಗಾರರ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತಿದೆ ಎಂದು ದೂರಿದ್ದಾರೆ.</p><p>ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಸೇಬುಗಳ ಮೇಲಿನ ಆಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಅವರು ಹಣಕಾಸು ಸಚಿವರನ್ನು ಒತ್ತಾಯಿಸಿದರು.</p><p>ಕೇಂದ್ರ ಸರ್ಕಾರದ ಗಮನ ಅಗತ್ಯವಿರುವ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಬಜೆಟ್ ಮತ್ತು ಹಣಕಾಸು ವಿಷಯಗಳ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸಿದರು.</p><p>ಹಿಮಾಚಲ ಮತ್ತು ಇತರ ವಿಶೇಷ ವರ್ಗದ ರಾಜ್ಯಗಳ ಸಾಲ ಮಿತಿಯನ್ನು ಕನಿಷ್ಠ ಎರಡು ಪ್ರತಿಶತದಷ್ಟು ಹೆಚ್ಚಿಸುವಂತೆ ಅವರು ಹಣಕಾಸು ಸಚಿವರನ್ನು ವಿನಂತಿಸಿದರು.</p><p>ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ವಿವಿಧ ಉಪಕ್ರಮಗಳು ಮತ್ತು ಹಲವು ಆರ್ಥಿಕ ನಿರ್ಬಂಧಗಳ ಹೊರತಾಗಿಯೂ ಹಣಕಾಸು ಸಂಪನ್ಮೂಲಗಳನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅವರು ಹಣಕಾಸು ಸಚಿವರಿಗೆ ವಿವರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಟರ್ಕಿಯಿಂದ ಸೇಬು ಆಮದು ಮಾಡಿಕೊಳ್ಳುತ್ತಿರುವ ವಿಷಯಕ್ಕೆ ಸಂಬಂಧಿಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಸೇಬು ಬೆಳೆಗಾರರ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತಿದೆ ಎಂದು ದೂರಿದ್ದಾರೆ.</p><p>ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ಸೇಬುಗಳ ಮೇಲಿನ ಆಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಅವರು ಹಣಕಾಸು ಸಚಿವರನ್ನು ಒತ್ತಾಯಿಸಿದರು.</p><p>ಕೇಂದ್ರ ಸರ್ಕಾರದ ಗಮನ ಅಗತ್ಯವಿರುವ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಬಜೆಟ್ ಮತ್ತು ಹಣಕಾಸು ವಿಷಯಗಳ ಕುರಿತು ಮುಖ್ಯಮಂತ್ರಿ ಚರ್ಚೆ ನಡೆಸಿದರು.</p><p>ಹಿಮಾಚಲ ಮತ್ತು ಇತರ ವಿಶೇಷ ವರ್ಗದ ರಾಜ್ಯಗಳ ಸಾಲ ಮಿತಿಯನ್ನು ಕನಿಷ್ಠ ಎರಡು ಪ್ರತಿಶತದಷ್ಟು ಹೆಚ್ಚಿಸುವಂತೆ ಅವರು ಹಣಕಾಸು ಸಚಿವರನ್ನು ವಿನಂತಿಸಿದರು.</p><p>ಹಣಕಾಸು ನಿರ್ವಹಣೆಯನ್ನು ಸುಧಾರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ವಿವಿಧ ಉಪಕ್ರಮಗಳು ಮತ್ತು ಹಲವು ಆರ್ಥಿಕ ನಿರ್ಬಂಧಗಳ ಹೊರತಾಗಿಯೂ ಹಣಕಾಸು ಸಂಪನ್ಮೂಲಗಳನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅವರು ಹಣಕಾಸು ಸಚಿವರಿಗೆ ವಿವರಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>