<p><strong>ತಿರುವನಂತಪುರ</strong>: ಕೇರಳದಲ್ಲಿ ಹಗಲಿನ ವೇಳೆ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಕಾರ್ಮಿಕರ ಕೆಲಸ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.</p><p>ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದುಡಿಯುವ ಎಲ್ಲಾ ಕಾರ್ಮಿಕರು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಕಡ್ಡಾಯವಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಲೇಬರ್ ಕಮಿಷನರ್ ಸಫ್ನಾ ನಾಸಿರುದ್ದೀನ್ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಪಾಳಿಯಲ್ಲಿ ಕೆಲಸ ಮಾಡುವವರಿಗೆ ಬೆಳಿಗ್ಗೆ ಆರಂಭವಾದ ಕೆಲಸ 12 ಗಂಟೆಗೆ ಕೊನೆಗೊಳ್ಳಬೇಕು. ಮಧ್ಯಾಹ್ನದ ಪಾಳಿ 3 ಗಂಟೆಗೆ ಆರಂಭವಾಗಬೇಕು. ಮುಖ್ಯವಾಗಿ ಕಟ್ಟಡ, ರಸ್ತೆ ನಿರ್ಮಾಣ ಕೆಲಸ ಮಾಡುವವರು ಈ ನಿಯಮ ಪಾಲಿಸಲೇಬೇಕು. ಕಾರ್ಮಿಕರ ಕೆಲಸದ ಅವಧಿಯ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಸನ್ಸ್ಟ್ರೋಕ್ನಂತಹ ಅಪಾಯ ತಪ್ಪಿಸಲು ಮೇ 10ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಸಮುದ್ರ ಮಟ್ಟದಿಂದ 3 ಸಾವಿರ ಅಡಿ ಎತ್ತರದಲ್ಲಿ ವಾಸವಿರುವ ಬಿಸಿಲಿನ ಝಳದಿಂದ ಅಪಾಯ ಎದುರಾಗದಿರುವ ಪ್ರದೇಶದಲ್ಲಿರುವವರಿಗೆ ಈ ನಿಯಮ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದಲ್ಲಿ ಹಗಲಿನ ವೇಳೆ ತಾಪಮಾನ ಏರಿಕೆಯಾಗುತ್ತಿರುವ ಕಾರಣ ಕಾರ್ಮಿಕರ ಕೆಲಸ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.</p><p>ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ದುಡಿಯುವ ಎಲ್ಲಾ ಕಾರ್ಮಿಕರು ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಕಡ್ಡಾಯವಾಗಿ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಲೇಬರ್ ಕಮಿಷನರ್ ಸಫ್ನಾ ನಾಸಿರುದ್ದೀನ್ ಅವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಪಾಳಿಯಲ್ಲಿ ಕೆಲಸ ಮಾಡುವವರಿಗೆ ಬೆಳಿಗ್ಗೆ ಆರಂಭವಾದ ಕೆಲಸ 12 ಗಂಟೆಗೆ ಕೊನೆಗೊಳ್ಳಬೇಕು. ಮಧ್ಯಾಹ್ನದ ಪಾಳಿ 3 ಗಂಟೆಗೆ ಆರಂಭವಾಗಬೇಕು. ಮುಖ್ಯವಾಗಿ ಕಟ್ಟಡ, ರಸ್ತೆ ನಿರ್ಮಾಣ ಕೆಲಸ ಮಾಡುವವರು ಈ ನಿಯಮ ಪಾಲಿಸಲೇಬೇಕು. ಕಾರ್ಮಿಕರ ಕೆಲಸದ ಅವಧಿಯ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p>ಸನ್ಸ್ಟ್ರೋಕ್ನಂತಹ ಅಪಾಯ ತಪ್ಪಿಸಲು ಮೇ 10ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಸಮುದ್ರ ಮಟ್ಟದಿಂದ 3 ಸಾವಿರ ಅಡಿ ಎತ್ತರದಲ್ಲಿ ವಾಸವಿರುವ ಬಿಸಿಲಿನ ಝಳದಿಂದ ಅಪಾಯ ಎದುರಾಗದಿರುವ ಪ್ರದೇಶದಲ್ಲಿರುವವರಿಗೆ ಈ ನಿಯಮ ಅನ್ವಯವಾಗದು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>