ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮನ್ಸ್ ಕಾನೂನುಬಾಹಿರ, ಆದರೆ ಇ.ಡಿ ವಿಚಾರಣೆಗೆ ಹಾಜರಾಗಲು ಸಿದ್ಧ: ಕೇಜ್ರಿವಾಲ್

Published 4 ಮಾರ್ಚ್ 2024, 4:29 IST
Last Updated 4 ಮಾರ್ಚ್ 2024, 4:29 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ಹಾಜರಾಗಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒಪ್ಪಿಕೊಂಡಿದ್ದಾರೆ.

ಅಬಕಾರಿ ನೀತಿ ಹಗರಣ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇ.ಡಿ ಬರೋಬ್ಬರಿ ಏಳು ಸಮನ್ಸ್‌ಗಳನ್ನು ನೀಡಿದೆ. ಆದರೆ ಒಮ್ಮೆಯೂ ವಿಚಾರಣೆಗೆ ಹಾಜರಾಗಿರಲಿಲ್ಲ. ಸಮನ್ಸ್ ಹಿಂಪಡೆಯುವಂತೆ ಇ.ಡಿಗೆ ಪತ್ರವನ್ನೂ ಬರೆದಿದ್ದರು.

ಸಮನ್ಸ್‌ಗಳನ್ನು ಕಾನೂನುಬಾಹಿರ ಎಂದು ಕರೆದಿರುವ ಕೇಜ್ರಿವಾಲ್, ಸದ್ಯ ವಿಚಾರಣೆಗೆ ಸಹಕರಿಸುವುದಾಗಿ ಹೇಳಿದ್ದಾರೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಮಾ. 12ರ ನಂತರ ವಿಚಾರಣೆಯ ದಿನಾಂಕ ನಿಗದಿಪಡಿಸುವಂತೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT