ಶಶಿ ತರೂರ್ ವಿರುದ್ಧ ಹಲವು ಆರೋಪಗಳನ್ನು ದಾಖಲಿಸುವಂತೆ ಪೊಲೀಸರುನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿ ತರೂರ್ ಪರ ವಕೀಲ ವಿಕಾಸ್ ಪಹ್ವಾ,‘ಈಗಾಗಲೇ ಎಸ್ಐಟಿಯು ಶಶಿ ತರೂರ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದೆ’ ಎಂದು ವಾದಿಸಿದರು.
2014ರ ಜನವರಿ 17ರಂದು ದೆಹಲಿಯ ಐಷಾರಾಮಿ ಹೋಟೆಲ್ನಲ್ಲಿಸುನಂದಾ ಪುಷ್ಕರ್ ಅವರ ಶವ ಪತ್ತೆಯಾಗಿತ್ತು. ಶಶಿ ತರೂರ್ ಅವರ ಅಧಿಕೃತ ಬಂಗಲೆ ನವೀಕರಣ ನಡೆಯುತ್ತಿದ್ದರಿಂದ ದಂಪತಿ ಹೋಟೆಲ್ನಲ್ಲಿ ತಂಗಿದ್ದರು.
ಇದಾದ ಬಳಿಕ ತರೂರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ, ಅವರನ್ನು ಬಂಧಿಸಿರಲಿಲ್ಲ. ಈ ಪ್ರಕರಣದಲ್ಲಿ ತರೂರ್ ಅವರಿಗೆ 2018ರ ಜುಲೈ 5ರಂದು ಜಾಮೀನು ಮಂಜೂರಾಗಿತ್ತು.