<p><strong>ಕೋಲ್ಕತ್ತ</strong>: ಗಗನಯಾನಿ ಸುನಿತಾ ಮಿಲಿಯಮ್ಸ್ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ.</p><p>ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ ರಕ್ಷಣಾ ತಂಡಗಳನ್ನು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದ್ದಾರೆ.</p><p>'ಹಲವಾರು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ವಿಲಿಯಮ್ಸ್ ಮತ್ತು ಬುಚ್ ಗಗನಯಾನಿಗಳನ್ನು ರಕ್ಷಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ವಿಧಾನಸಭೆಯ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಸುನಿತಾ ವಿಲಿಯಮ್ಸ್ ಅವರನ್ನು ಅಭಿನಂದಿಸುತ್ತೇನೆ. ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು' ಎಂದು ಬ್ಯಾನರ್ಜಿ ಒತ್ತಾಯಿಸಿದರು. </p>.Explainer: ಸುನಿತಾ ವಿಲಿಯಮ್ಸ್ ಭೂಮಿಗೆ ಆಗಮನ, ಕಾಡಿದ ಕಲ್ಪನಾ ಚಾವ್ಲಾ ನೆನಪು.Sunita Williams ಸುರಕ್ಷಿತ ಲ್ಯಾಂಡಿಂಗ್: ಗುಜರಾತ್ ಮೂಲದ ತಂದೆ ದೀಪಕ್ ಹಿನ್ನೆಲೆ.<p>'ನನಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಇದೆ. ಬೆಳವಣಿಗೆಗಳನ್ನು ಗಮನಿಸುತ್ತೇನೆ ಮತ್ತು ತಂತ್ರಜ್ಞಾನದ ಆಧುನಿಕ ನವೀಕರಣಗಳ ಬಗ್ಗೆಯೂ ತಿಳಿದುಕೊಳ್ಳುತ್ತಿರುತ್ತೇನೆ' ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾನಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾದ ಕರಾವಳಿಗೆ ಬಂದಿಳಿದ್ದಾರೆ.</p><p>ಕಳೆದ ವರ್ಷ ಜೂನ್ 5ರಂದು ಬೋಯಿಂಗ್ನ ಸ್ಟಾರ್ಲಿಂಕ್ ಗಗನನೌಕೆಯಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್ಎಸ್) ತೆರಳಿದ್ದ ಕ್ರೂ–9 ಮಿಷನ್ನ ಸಿಬ್ಬಂದಿ ಸುನಿತಾ ಮತ್ತು ಬುಚ್, ಗಗನನೌಕೆಯಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದಾಗಿ 9 ತಿಂಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಳ್ಳಬೇಕಾಯಿತು.</p>.ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ.IPL 2025: ಕೋಲ್ಕತ್ತದಲ್ಲಿ ನಿಗದಿಯಾಗಿರುವ KKR vs LSG ಪಂದ್ಯ ಮುಂದೂಡಿಕೆ!.ಮಾನವೀಯತೆಗೆ ಬೆಲೆ ಕೊಡದ ಇಸ್ರೇಲ್: ಪ್ರಿಯಾಂಕಾ ವಾಗ್ದಾಳಿ.ವಯನಾಡು ಭೂಕುಸಿತ | ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಲಾ ₹10 ಲಕ್ಷ ನೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಗಗನಯಾನಿ ಸುನಿತಾ ಮಿಲಿಯಮ್ಸ್ಗೆ ಭಾರತ ರತ್ನ ನೀಡಿ, ಗೌರವಿಸಬೇಕೆಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಒತ್ತಾಯಿಸಿದ್ದಾರೆ.</p><p>ವಿಧಾನಸಭೆಯಲ್ಲಿ ಮಾತನಾಡಿದ ಅವರು, ಗಗನಯಾನಿಗಳನ್ನು ಭೂಮಿಗೆ ಕರೆ ತರುವಲ್ಲಿ ನಿರಂತರವಾಗಿ ಶ್ರಮಿಸಿದ ರಕ್ಷಣಾ ತಂಡಗಳನ್ನು ಶ್ಲಾಘಿಸಿ, ಅಭಿನಂದನೆ ಸಲ್ಲಿಸಿದ್ದಾರೆ.</p><p>'ಹಲವಾರು ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ವಿಲಿಯಮ್ಸ್ ಮತ್ತು ಬುಚ್ ಗಗನಯಾನಿಗಳನ್ನು ರಕ್ಷಿಸಿದ್ದಕ್ಕಾಗಿ ಪಶ್ಚಿಮ ಬಂಗಾಳ ವಿಧಾನಸಭೆಯ ಪರವಾಗಿ ಧನ್ಯವಾದ ತಿಳಿಸುತ್ತೇನೆ. ಸುನಿತಾ ವಿಲಿಯಮ್ಸ್ ಅವರನ್ನು ಅಭಿನಂದಿಸುತ್ತೇನೆ. ಅವರಿಗೆ ಭಾರತ ರತ್ನ ನೀಡಿ ಗೌರವಿಸಬೇಕು' ಎಂದು ಬ್ಯಾನರ್ಜಿ ಒತ್ತಾಯಿಸಿದರು. </p>.Explainer: ಸುನಿತಾ ವಿಲಿಯಮ್ಸ್ ಭೂಮಿಗೆ ಆಗಮನ, ಕಾಡಿದ ಕಲ್ಪನಾ ಚಾವ್ಲಾ ನೆನಪು.Sunita Williams ಸುರಕ್ಷಿತ ಲ್ಯಾಂಡಿಂಗ್: ಗುಜರಾತ್ ಮೂಲದ ತಂದೆ ದೀಪಕ್ ಹಿನ್ನೆಲೆ.<p>'ನನಗೆ ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಇದೆ. ಬೆಳವಣಿಗೆಗಳನ್ನು ಗಮನಿಸುತ್ತೇನೆ ಮತ್ತು ತಂತ್ರಜ್ಞಾನದ ಆಧುನಿಕ ನವೀಕರಣಗಳ ಬಗ್ಗೆಯೂ ತಿಳಿದುಕೊಳ್ಳುತ್ತಿರುತ್ತೇನೆ' ಎಂದು ಬ್ಯಾನರ್ಜಿ ತಿಳಿಸಿದ್ದಾರೆ.</p><p>9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾನಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ಲೋರಿಡಾದ ಕರಾವಳಿಗೆ ಬಂದಿಳಿದ್ದಾರೆ.</p><p>ಕಳೆದ ವರ್ಷ ಜೂನ್ 5ರಂದು ಬೋಯಿಂಗ್ನ ಸ್ಟಾರ್ಲಿಂಕ್ ಗಗನನೌಕೆಯಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ(ಐಎಸ್ಎಸ್) ತೆರಳಿದ್ದ ಕ್ರೂ–9 ಮಿಷನ್ನ ಸಿಬ್ಬಂದಿ ಸುನಿತಾ ಮತ್ತು ಬುಚ್, ಗಗನನೌಕೆಯಲ್ಲಿ ತಲೆದೋರಿದ ತಾಂತ್ರಿಕ ದೋಷದಿಂದಾಗಿ 9 ತಿಂಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದುಕೊಳ್ಳಬೇಕಾಯಿತು.</p>.ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 12 ಪೈಸೆ ಏರಿಕೆ.IPL 2025: ಕೋಲ್ಕತ್ತದಲ್ಲಿ ನಿಗದಿಯಾಗಿರುವ KKR vs LSG ಪಂದ್ಯ ಮುಂದೂಡಿಕೆ!.ಮಾನವೀಯತೆಗೆ ಬೆಲೆ ಕೊಡದ ಇಸ್ರೇಲ್: ಪ್ರಿಯಾಂಕಾ ವಾಗ್ದಾಳಿ.ವಯನಾಡು ಭೂಕುಸಿತ | ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಲಾ ₹10 ಲಕ್ಷ ನೆರವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>