<p><strong>ರಾಯಪುರ</strong>: ‘ಸನ್ನಿ ಲಿಯೋನ್’ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ತೆರೆಯುವ ಮೂಲಕ ವ್ಯಕ್ತಿಯೊಬ್ಬ ಛತ್ತೀಸಗಢ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ತಂದಿರುವ ‘ಮಹತಾರಿ ವಂದನಾ ಯೋಜನೆ’ಯ ಲಾಭ ಪಡೆದುಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ.</p><p>ಈ ಯೋಜನೆಯಡಿಯಲ್ಲಿ ವಿವಾಹಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಸರ್ಕಾರ ₹1 ಸಾವಿರ ಮೊತ್ತವನ್ನು ಜಮಾ ಮಾಡುತ್ತಿದೆ.</p><p>ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೀರೇಂದ್ರ ಜೋಶಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.</p>.<p>ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ವಂಚನೆ ಬಗ್ಗೆ ತನಿಖೆ ಆರಂಭಿಸಿದೆ. ಛತ್ತೀಸಗಢದ ಬಸ್ತಾರ್ ಜಿಲ್ಲೆಯ ತಾಲೂರ್ ಗ್ರಾಮದಲ್ಲಿ ವಂಚನೆ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹ್ಯಾರಿಸ್ ಎಸ್. ಆದೇಶಿಸಿದ್ದಾರೆ.</p><p>ಈ ಸಂಗತಿಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.</p><p>ಮಹತಾರಿ ವಂದನಾ ಯೋಜನೆಯಡಿ ಶೇ 50ರಷ್ಟು ಫಲಾನುಭವಿಗಳು ನಕಲಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೀಪಕ್ ಬೈಜ್ ಆರೋಪಿಸಿದ್ದು, ಈ ಆರೋಪವನ್ನು ಬಿಜೆಪಿ ಅಲ್ಲಗೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ‘ಸನ್ನಿ ಲಿಯೋನ್’ ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ತೆರೆಯುವ ಮೂಲಕ ವ್ಯಕ್ತಿಯೊಬ್ಬ ಛತ್ತೀಸಗಢ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ತಂದಿರುವ ‘ಮಹತಾರಿ ವಂದನಾ ಯೋಜನೆ’ಯ ಲಾಭ ಪಡೆದುಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ.</p><p>ಈ ಯೋಜನೆಯಡಿಯಲ್ಲಿ ವಿವಾಹಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಸರ್ಕಾರ ₹1 ಸಾವಿರ ಮೊತ್ತವನ್ನು ಜಮಾ ಮಾಡುತ್ತಿದೆ.</p><p>ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೀರೇಂದ್ರ ಜೋಶಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.</p>.<p>ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ವಂಚನೆ ಬಗ್ಗೆ ತನಿಖೆ ಆರಂಭಿಸಿದೆ. ಛತ್ತೀಸಗಢದ ಬಸ್ತಾರ್ ಜಿಲ್ಲೆಯ ತಾಲೂರ್ ಗ್ರಾಮದಲ್ಲಿ ವಂಚನೆ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹ್ಯಾರಿಸ್ ಎಸ್. ಆದೇಶಿಸಿದ್ದಾರೆ.</p><p>ಈ ಸಂಗತಿಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.</p><p>ಮಹತಾರಿ ವಂದನಾ ಯೋಜನೆಯಡಿ ಶೇ 50ರಷ್ಟು ಫಲಾನುಭವಿಗಳು ನಕಲಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೀಪಕ್ ಬೈಜ್ ಆರೋಪಿಸಿದ್ದು, ಈ ಆರೋಪವನ್ನು ಬಿಜೆಪಿ ಅಲ್ಲಗೆಳೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>