ಹೈದರಾಬಾದ್: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕದಿದ್ದರೆ ನಿಮ್ಮ ಮನೆಗಳನ್ನು ಬುಲ್ಡೋಜರ್ನಿಂದ ಉರುಳಿಸಲಾಗುವುದು ಮತ್ತು ನಿಮ್ಮನ್ನು ರಾಜ್ಯದಿಂದ ಹೊರಹಾಕಲಾಗುವುದು ಎಂದು ತೆಲಂಗಾಣದ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಮತದಾರರನ್ನು ಬೆದರಿಸುವ ವಿಡಿಯೊ ವೈರಲ್ ಆಗಿದೆ.
ಹೈದರಾಬಾದ್ನ ಗೋಶಮಹಲ್ ಶಾಸಕರಾಗಿರುವ ಟಿ. ರಾಜಾ, ‘ಸೋಮವಾರ ನಡೆದ ಎರಡನೇ ಹಂತದ ಚುನಾವಣೆ ವೇಳೆ ಅಧಿಕ ಸಂಖ್ಯೆಯಲ್ಲಿ ಮತದಾನವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶತ್ರುಗಳೆಲ್ಲ ಮತ ಹಾಕಲು ಹೊರಗೆ ಬಂದಿದ್ದಾರೆ’ಎಂದು ಅವರು ಹೇಳಿದ್ದಾರೆ.
ಹಿಂದೂ ಸಹೋದರ, ಸಹೋದರಿಯರೇ ಮನೆಯಿಂದ ಹೊರಬನ್ನಿ ಉಳಿದ 5 ಹಂತಗಳ ಚುನಾವಣೆಯಲ್ಲಿ ಮತದಾನ ಮಾಡಿ ಎಂದು ಅವರು ಹೇಳಿದ್ದಾರೆ.