ಪತ್ರಕರ್ತ ಕಿಶೋರ್ಚಂದ್ರ ವಾಂಗ್ಕೆಂಚಾ ಮತ್ತು ವ್ಯಂಗ್ಯಚಿತ್ರಕಾರರೊಬ್ಬರು ಈ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಉತ್ತರಿಸಲು ಹೆಚ್ಚಿನ ಸಮಯಾವಕಾಶ ನೀಡಬೇಕು ಎಂದು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೋರ್ಟ್ಅನ್ನು ಕೋರಿದ್ದರು. ಅದರಂತೆ ನ್ಯಾಯಮೂರ್ತಿಯರಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ನೇತೃತ್ವದ ಪೀಠ ಈ ಅರ್ಜಿ ವಿಚಾರಣೆಯನ್ನು ಇದೇ 27ಕ್ಕೆ ನಿಗದಿಪಡಿಸಿದೆ.