ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ ಪ್ರಶ್ನಿಸಿ ಎನ್ಸಿಪಿಸಿಆರ್ ಹಿಂದೆಯೇ ಅರ್ಜಿ ಸಲ್ಲಿಸಿತ್ತು. ಆಗ ವಕೀಲ ರಾಜಶೇಖರ್ ರಾವ್ರನ್ನು ಅಮಿಕಸ್ ಕ್ಯೂರಿ ಆಗಿ ನೇಮಿಸಿದ್ದ ‘ಸುಪ್ರೀಂ’, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಪ್ರಕರಣದಲ್ಲಿ ಅನ್ವಯಿಸುವ ಕಾನೂನು ಪರಿಶೀಲಿಸಲಾಗುವುದು ಎಂದು ತಿಳಿಸಿತ್ತು.