<p><strong>ನವದೆಹಲಿ (ಪಿಟಿಐ):</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ. </p>.<p>ಶರ್ಮಾ ಅವರು ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿ ಸರಣಿ ದ್ವೇಷ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಾಧ್ಯಪಕಾರದ ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಡಿಜಿಪಿ ಹರೇಕೃಷ್ಣ ದೇಕಾ, ಹಿರಿಯ ಪತ್ರಕರ್ತರಾದ ಪರೇಶ್ ಚಂದ್ರ ಹಾಗೂ ಹಿರಿಯ ವಕೀಲರಾದ ಶಾಂತನು ಬೋರ್ಠಾಕೂರ್ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. </p>.<p>ಶರ್ಮಾ ಅವರು ರೈಫಲ್ ಹಿಡಿದು ಅಲ್ಪಸಂಖ್ಯಾತ ಸಮುದಾಯದವರನ್ನು ಬಿಂಬಿಸುವ ಇಬ್ಬರು ವ್ಯಕ್ತಿಗಳ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವ ದೃಶ್ಯವನ್ನು ಒಳಗೊಂಡ ವಿಡಿಯೊ ಬಗ್ಗೆ ಇತ್ತೀಚೆಗೆ ಭಾರಿ ಆಕ್ಷೇಪವೂ ವ್ಯಕ್ತವಾಗಿತ್ತು. </p>.<p>ಇದಕ್ಕೆ ಸಂಬಂಧಿಸಿದಂತೆ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಿಪಿಐ ನಾಯಕಿ ಆನಿ ರಾಜಾ ಹಾಗೂ ಸಿಪಿಎಂ ಪಕ್ಷಗಳು ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಗಳನ್ನು ಆಲಿಸಲು ಮಂಗಳವಾರ ಒಪ್ಪಿಗೆಯನ್ನೂ ನೀಡಿದೆ.</p>.<p>ಎಡಪಕ್ಷದ ನಾಯಕರುಗಳ ಈ ಅರ್ಜಿಗಳ ಜತೆಗೆ ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನೂ ವಿಚಾರಣೆ ನಡೆಸಬೇಕೆಂದು ಬುಧವಾರ ಕೋರಲಾಗಿದ್ದು, ಪೀಠ ಸಮ್ಮತಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಚಾರಣೆಗೆ ನಿಗದಿಪಡಿಸಲು ಸುಪ್ರೀಂ ಕೋರ್ಟ್ ಬುಧವಾರ ಸಮ್ಮತಿಸಿದೆ. </p>.<p>ಶರ್ಮಾ ಅವರು ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿ ಸರಣಿ ದ್ವೇಷ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಮಾಜಿ ಪ್ರಾಧ್ಯಪಕಾರದ ಹಿರೇನ್ ಗೊಹೈನ್, ಅಸ್ಸಾಂನ ಮಾಜಿ ಡಿಜಿಪಿ ಹರೇಕೃಷ್ಣ ದೇಕಾ, ಹಿರಿಯ ಪತ್ರಕರ್ತರಾದ ಪರೇಶ್ ಚಂದ್ರ ಹಾಗೂ ಹಿರಿಯ ವಕೀಲರಾದ ಶಾಂತನು ಬೋರ್ಠಾಕೂರ್ ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ. </p>.<p>ಶರ್ಮಾ ಅವರು ರೈಫಲ್ ಹಿಡಿದು ಅಲ್ಪಸಂಖ್ಯಾತ ಸಮುದಾಯದವರನ್ನು ಬಿಂಬಿಸುವ ಇಬ್ಬರು ವ್ಯಕ್ತಿಗಳ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವ ದೃಶ್ಯವನ್ನು ಒಳಗೊಂಡ ವಿಡಿಯೊ ಬಗ್ಗೆ ಇತ್ತೀಚೆಗೆ ಭಾರಿ ಆಕ್ಷೇಪವೂ ವ್ಯಕ್ತವಾಗಿತ್ತು. </p>.<p>ಇದಕ್ಕೆ ಸಂಬಂಧಿಸಿದಂತೆ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಿಪಿಐ ನಾಯಕಿ ಆನಿ ರಾಜಾ ಹಾಗೂ ಸಿಪಿಎಂ ಪಕ್ಷಗಳು ಪ್ರತ್ಯೇಕವಾಗಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ಈ ಅರ್ಜಿಗಳನ್ನು ಆಲಿಸಲು ಮಂಗಳವಾರ ಒಪ್ಪಿಗೆಯನ್ನೂ ನೀಡಿದೆ.</p>.<p>ಎಡಪಕ್ಷದ ನಾಯಕರುಗಳ ಈ ಅರ್ಜಿಗಳ ಜತೆಗೆ ಹೊಸದಾಗಿ ಸಲ್ಲಿಸಿರುವ ಅರ್ಜಿಗಳನ್ನೂ ವಿಚಾರಣೆ ನಡೆಸಬೇಕೆಂದು ಬುಧವಾರ ಕೋರಲಾಗಿದ್ದು, ಪೀಠ ಸಮ್ಮತಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>