ಕೇಂದ್ರ ಸರ್ಕಾರದ ಕೃಷಿ ನೀತಿಗಳ ವಿರುದ್ಧ ಹರಿಹಾಯ್ದಿರುವ ಅವರು, 'ಕೃಷಿ ಮಸೂದೆಗಳನ್ನು ಪ್ರಶ್ನಿಸಿ ನಾವು ಸುಪ್ರೀಂ ಕೋರ್ಟ್ನ ಮೊರೆ ಹೋಗಲಿದ್ದೇವೆ. ಕೃಷಿ ಎಂಬುದು ರಾಜ್ಯಾಡಳಿತಕ್ಕೆ ಸಂಬಂದಿಸಿದ ವಿಷಯ. ಆದರೆ, ನಮ್ಮನ್ನು ಕೇಳದೆ ಸಂಸತ್ನಲ್ಲಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಇದು ಸಂಪೂರ್ಣವಾಗಿ ಅಸಂವಿಧಾನಿಕ' ಎಂದು ಅಮರಿಂದರ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.