<p><strong>ನವದೆಹಲಿ</strong>: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ – ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ವಸಂತ ಪಂಚಮಿಯ ದಿನ(ಶುಕ್ರವಾರ) ಹಿಂದೂಗಳು ಪೂಜೆ, ಪ್ರಾರ್ಥನೆ ಸಲ್ಲಿಸಲು ಹಾಗೂ ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p><p>ನಮಾಜ್ ಮಾಡಲು ಬರುವ ಮುಸ್ಲಿಂ ಸಮುದಾಯದವರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮಸೀದಿಗೆ ನಿರ್ದೇಶನ ನೀಡಿದೆ.</p><p>ಜನವರಿ 23ರಂದು ವಸಂತ ಪಂಚಮಿ ಪ್ರಯುಕ್ತ ಭೋಜಶಾಲಾ ಆವರಣದಲ್ಲಿ ಸರಸ್ವತಿ ಪೂಜೆ ಆಚರಿಸಲಾಗುತ್ತದೆ. ಹಾಗಾಗಿ, ಧಾರ್ಮಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಸಂಬಂಧ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲೇರಿದ್ದರು.</p><p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠವು ಎರಡೂ ಕಡೆಯವರ ವಾದವನ್ನು ಆಲಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆಡಳಿತಗಳ ಮಾರ್ಗಸೂಚಿಯಂತೆ ಪರಸ್ಪರ ಗೌರವ, ಸಹಕಾರವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದೆ.</p>.ಭೋಜಶಾಲಾ ಸಮೀಕ್ಷೆ: ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ.ಮಧ್ಯಪ್ರದೇಶ ಲೋಕಸಭಾ ಚುನಾವಣೆ | ಭೋಜಶಾಲಾ ವಿವಾದ: ಮತದಾರರ ಭಿನ್ನ ಅಭಿಪ್ರಾಯ.<p>ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.</p><p>ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಂರಕ್ಷಣೆಯಲ್ಲಿರುವ 11ನೇ ಶತಮಾನದ ಸ್ಮಾರಕವಾಗಿರುವ ಭೋಜಶಾಲೆಯನ್ನು ಹಿಂದೂಗಳು ವಾಗ್ದೇವಿಯ (ಸರಸ್ವತಿ) ದೇವಾಲಯವೆಂದು ಪರಿಗಣಿಸುತ್ತಾರೆ. ಆದರೆ, ಮುಸ್ಲಿಂ ಸಮುದಾಯವರು ಈ ಸಂಕೀರ್ಣವನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.</p><p>2003ರಲ್ಲಿ ಎಎಸ್ಐ ನೀಡಿರುವ ಆದೇಶದ ಅನ್ವಯ ಭೋಜಶಾಲಾದಲ್ಲಿ ಪ್ರತಿ ಮಂಗಳವಾರ ಹಿಂದೂಗಳು ಪೂಜೆ ಮಾಡುತ್ತಾರೆ ಮತ್ತು ಪ್ರತಿ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ – ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ವಸಂತ ಪಂಚಮಿಯ ದಿನ(ಶುಕ್ರವಾರ) ಹಿಂದೂಗಳು ಪೂಜೆ, ಪ್ರಾರ್ಥನೆ ಸಲ್ಲಿಸಲು ಹಾಗೂ ಮುಸ್ಲಿಮರು ನಮಾಜ್ ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.</p><p>ನಮಾಜ್ ಮಾಡಲು ಬರುವ ಮುಸ್ಲಿಂ ಸಮುದಾಯದವರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಮಸೀದಿಗೆ ನಿರ್ದೇಶನ ನೀಡಿದೆ.</p><p>ಜನವರಿ 23ರಂದು ವಸಂತ ಪಂಚಮಿ ಪ್ರಯುಕ್ತ ಭೋಜಶಾಲಾ ಆವರಣದಲ್ಲಿ ಸರಸ್ವತಿ ಪೂಜೆ ಆಚರಿಸಲಾಗುತ್ತದೆ. ಹಾಗಾಗಿ, ಧಾರ್ಮಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಸಂಬಂಧ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲೇರಿದ್ದರು.</p><p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠವು ಎರಡೂ ಕಡೆಯವರ ವಾದವನ್ನು ಆಲಿಸಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಆಡಳಿತಗಳ ಮಾರ್ಗಸೂಚಿಯಂತೆ ಪರಸ್ಪರ ಗೌರವ, ಸಹಕಾರವನ್ನು ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದೆ.</p>.ಭೋಜಶಾಲಾ ಸಮೀಕ್ಷೆ: ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಗೆ.ಮಧ್ಯಪ್ರದೇಶ ಲೋಕಸಭಾ ಚುನಾವಣೆ | ಭೋಜಶಾಲಾ ವಿವಾದ: ಮತದಾರರ ಭಿನ್ನ ಅಭಿಪ್ರಾಯ.<p>ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದೆ.</p><p>ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಸಂರಕ್ಷಣೆಯಲ್ಲಿರುವ 11ನೇ ಶತಮಾನದ ಸ್ಮಾರಕವಾಗಿರುವ ಭೋಜಶಾಲೆಯನ್ನು ಹಿಂದೂಗಳು ವಾಗ್ದೇವಿಯ (ಸರಸ್ವತಿ) ದೇವಾಲಯವೆಂದು ಪರಿಗಣಿಸುತ್ತಾರೆ. ಆದರೆ, ಮುಸ್ಲಿಂ ಸಮುದಾಯವರು ಈ ಸಂಕೀರ್ಣವನ್ನು ಕಮಲ್ ಮೌಲಾ ಮಸೀದಿ ಎಂದು ಕರೆಯುತ್ತಾರೆ.</p><p>2003ರಲ್ಲಿ ಎಎಸ್ಐ ನೀಡಿರುವ ಆದೇಶದ ಅನ್ವಯ ಭೋಜಶಾಲಾದಲ್ಲಿ ಪ್ರತಿ ಮಂಗಳವಾರ ಹಿಂದೂಗಳು ಪೂಜೆ ಮಾಡುತ್ತಾರೆ ಮತ್ತು ಪ್ರತಿ ಶುಕ್ರವಾರ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>