<p><strong>ನವದೆಹಲಿ:</strong> ಶಿಕ್ಷಕರ ಕುರಿತು ಆಕ್ಷೇಪಾರ್ಹ ಪೋಸ್ಟ್ ರಚಿಸಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣಕ್ಕಾಗಿ ಶಾಲೆಯಿಂದ ಹೊರಗೆ ಹಾಕಲಾಗಿದ್ದ 10ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ.</p>.<p>ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಪ್ರವೇಶಪತ್ರ ನೀಡುವಂತೆ ‘ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ಗೆ (ಸಿಐಎಸ್ಸಿಇ) ಸೂಚನೆ ನೀಡಿದೆ.</p>.<p>ವಿದ್ಯಾರ್ಥಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ನೇತೃತ್ವದ ನ್ಯಾಯಪೀಠ, ‘ವಿದ್ಯಾರ್ಥಿ ಈಗಾಗಲೇ ಪರೀಕ್ಷೆ ಬರೆಯಲು ಸಿಐಎಸ್ಸಿಇಯಲ್ಲಿ ನೋಂದಣಿ ಮಾಡಿಕೊಂಡಿದ್ದು, ಅವಕಾಶ ಕೊಡದಿದ್ದರೆ, ಆತನ ಶೈಕ್ಷಣಿಕ ವರ್ಷ ವ್ಯರ್ಥವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p class="title">2024–25ರಲ್ಲಿ ವಿದ್ಯಾರ್ಥಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವೇಳೆ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದಕ್ಕೆ ಶಾಲೆಯಿಂದ ಹೊರಗೆ ಹಾಕಲಾಗಿತ್ತು. ಬಾಲಕನ ತಂದೆಯು ಮಗನನ್ನು ಹೊರಹಾಕಿದ್ದನ್ನು ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p class="title">ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶಾಲೆಯ ನಿರ್ಧಾರವನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ ವಿದ್ಯಾರ್ಥಿಯು ಖಾಸಗಿಯಾಗಿ ಓದು ಮುಂದುವರಿಸಿದ್ದನು.</p>.<p class="title">ಫೆಬ್ರುವರಿ 17ರಂದು ಆರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗೆ ಸೂಕ್ತ ಅವಕಾಶ ನೀಡುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಐಎಸ್ಸಿಇಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶಿಕ್ಷಕರ ಕುರಿತು ಆಕ್ಷೇಪಾರ್ಹ ಪೋಸ್ಟ್ ರಚಿಸಿ, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣಕ್ಕಾಗಿ ಶಾಲೆಯಿಂದ ಹೊರಗೆ ಹಾಕಲಾಗಿದ್ದ 10ನೇ ತರಗತಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಸುಪ್ರೀಂಕೋರ್ಟ್ ಅವಕಾಶ ನೀಡಿದೆ.</p>.<p>ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಪ್ರವೇಶಪತ್ರ ನೀಡುವಂತೆ ‘ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ಗೆ (ಸಿಐಎಸ್ಸಿಇ) ಸೂಚನೆ ನೀಡಿದೆ.</p>.<p>ವಿದ್ಯಾರ್ಥಿಯ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಹಾಗೂ ಉಜ್ಜಲ್ ಭುಯಾನ್ ನೇತೃತ್ವದ ನ್ಯಾಯಪೀಠ, ‘ವಿದ್ಯಾರ್ಥಿ ಈಗಾಗಲೇ ಪರೀಕ್ಷೆ ಬರೆಯಲು ಸಿಐಎಸ್ಸಿಇಯಲ್ಲಿ ನೋಂದಣಿ ಮಾಡಿಕೊಂಡಿದ್ದು, ಅವಕಾಶ ಕೊಡದಿದ್ದರೆ, ಆತನ ಶೈಕ್ಷಣಿಕ ವರ್ಷ ವ್ಯರ್ಥವಾಗಲಿದೆ’ ಎಂದು ತಿಳಿಸಿದ್ದಾರೆ.</p>.<p class="title">2024–25ರಲ್ಲಿ ವಿದ್ಯಾರ್ಥಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವೇಳೆ ಆಕ್ಷೇಪಾರ್ಹ ಪೋಸ್ಟ್ ಹಂಚಿಕೊಂಡಿದ್ದಕ್ಕೆ ಶಾಲೆಯಿಂದ ಹೊರಗೆ ಹಾಕಲಾಗಿತ್ತು. ಬಾಲಕನ ತಂದೆಯು ಮಗನನ್ನು ಹೊರಹಾಕಿದ್ದನ್ನು ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.</p>.<p class="title">ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶಾಲೆಯ ನಿರ್ಧಾರವನ್ನು ಎತ್ತಿಹಿಡಿದಿತ್ತು. ಇದಾದ ಬಳಿಕ ವಿದ್ಯಾರ್ಥಿಯು ಖಾಸಗಿಯಾಗಿ ಓದು ಮುಂದುವರಿಸಿದ್ದನು.</p>.<p class="title">ಫೆಬ್ರುವರಿ 17ರಂದು ಆರಂಭವಾಗಲಿರುವ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗೆ ಸೂಕ್ತ ಅವಕಾಶ ನೀಡುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಐಎಸ್ಸಿಇಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>