<p><strong>ನವದೆಹಲಿ: </strong>ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಪೂರ್ಣ ವೇತನ ನೀಡುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಒಂದು ವಾರದೊಳಗೆ ಉತ್ತರಿಸಲು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ.</p>.<p>ಲಾಕ್ಡೌನ್ ಸಮಯದಲ್ಲಿ ಸರ್ಕಾರದ ಕ್ರಮಗಳಿಂದ ಬಹಳಷ್ಟು ಜನರು ಸಂಕಷ್ಟಕ್ಕೀಡಾಗಿರುವುದರಿಂದಾಗಿ 'ಈ ವಿಷಯವನ್ನು ತುರ್ತಾಗಿ ಪರಿಗಣಿಸುವಂತೆ'ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಮಂಗಳವಾರ ಕೇಂದ್ರ ಸರ್ಕಾರವನ್ನು ಕೇಳಿದೆ.</p>.<p>ಲಾಕ್ಡೌನ್ ವೇಳೆಯಲ್ಲಿ ಸಂಪೂರ್ಣ ಪಾವತಿಗಳನ್ನು ಮಾಡಲು ಸಾಕಷ್ಟು ಹಣಕಾಸಿನ ಮೀಸಲು ಇಲ್ಲದಿರುವುದರಿಂದಾಗಿ ಕಾರ್ಮಿಕರ ವೇತನವನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಕಂಪನಿಗಳ ಗುಂಪು ಈ ಅರ್ಜಿಯನ್ನು ಸಲ್ಲಿಸಿದ್ದವು.</p>.<p>ದೇಶವು ಎರಡು ತಿಂಗಳ ಸಂಪೂರ್ಣ ಲಾಕ್ಡೌನ್ ಪೂರ್ಣಗೊಳಿಸುವುದರೊಂದಿಗೆ, ಎಲ್ಲ ಕ್ಷೇತ್ರಗಳಾದ್ಯಂತ ವ್ಯವಹಾರಗಳು ಸಂಕಷ್ಟಕ್ಕೆ ಸಿಲುಕಿವೆ ಮತ್ತು ರಾತ್ರೋರಾತ್ರಿ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವಂತಾಯಿತು. ಪ್ರಧಾನಿ ಮೋದಿ ಅವರು ಲಾಕ್ಡೌನ್ ಘೋಷಿಸುವಾಗ, ಈ ಕಷ್ಟದ ಸಮಯದಲ್ಲಿ ನೌಕರರಿಗೆ ಉದ್ಯೋಗ ಭದ್ರತೆಯನ್ನು ಒದಗಿಸಿ ಎಂದು ಕಂಪನಿಗಳನ್ನು ಒತ್ತಾಯಿಸಿದ್ದರು.</p>.<p>ಮಾರ್ಚ್ನಲ್ಲಿ, ಉದ್ಯೋಗದಾತರು ಕಾರ್ಮಿಕರಿಗೆ ಪೂರ್ಣ ವೇತನವನ್ನು ಪಾವತಿಸುವುದು ಮತ್ತು ಅವರ ಉದ್ಯೋಗಗಳನ್ನು ರಕ್ಷಿಸುವುದನ್ನು ಕಡ್ಡಾಯಗೊಳಿಸುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಸಹಿ ಮಾಡಿದ ಆದೇಶವನ್ನು ಸರ್ಕಾರ ಅಂಗೀಕರಿಸಿತ್ತು.</p>.<p>ಲಾಕ್ಡೌನ್ನಿಂದಾಗಿ ಅವರು ತಿಂಗಳುಗಳಿಂದ ವ್ಯವಹಾರದಿಂದ ಹೊರಗುಳಿದಿದ್ದಾರೆ ಮತ್ತು ಹಣಕಾಸಿನ ಮೀಸಲು ಇಲ್ಲ. ಹೀಗಾಗಿಕಂಪನಿಗಳು ಎಲ್ಲಾ ಕಾರ್ಮಿಕರ ವೇತನವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಕೂಗು ಎದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಲಾಕ್ಡೌನ್ ಅವಧಿಯಲ್ಲಿ ಕಾರ್ಮಿಕರಿಗೆ ಪೂರ್ಣ ವೇತನ ನೀಡುವುದರಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಗಳ ಕುರಿತು ಒಂದು ವಾರದೊಳಗೆ ಉತ್ತರಿಸಲು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಕೇಳಿದೆ.</p>.<p>ಲಾಕ್ಡೌನ್ ಸಮಯದಲ್ಲಿ ಸರ್ಕಾರದ ಕ್ರಮಗಳಿಂದ ಬಹಳಷ್ಟು ಜನರು ಸಂಕಷ್ಟಕ್ಕೀಡಾಗಿರುವುದರಿಂದಾಗಿ 'ಈ ವಿಷಯವನ್ನು ತುರ್ತಾಗಿ ಪರಿಗಣಿಸುವಂತೆ'ಸುಪ್ರೀಂ ಕೋರ್ಟ್ನ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಮಂಗಳವಾರ ಕೇಂದ್ರ ಸರ್ಕಾರವನ್ನು ಕೇಳಿದೆ.</p>.<p>ಲಾಕ್ಡೌನ್ ವೇಳೆಯಲ್ಲಿ ಸಂಪೂರ್ಣ ಪಾವತಿಗಳನ್ನು ಮಾಡಲು ಸಾಕಷ್ಟು ಹಣಕಾಸಿನ ಮೀಸಲು ಇಲ್ಲದಿರುವುದರಿಂದಾಗಿ ಕಾರ್ಮಿಕರ ವೇತನವನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಕಂಪನಿಗಳ ಗುಂಪು ಈ ಅರ್ಜಿಯನ್ನು ಸಲ್ಲಿಸಿದ್ದವು.</p>.<p>ದೇಶವು ಎರಡು ತಿಂಗಳ ಸಂಪೂರ್ಣ ಲಾಕ್ಡೌನ್ ಪೂರ್ಣಗೊಳಿಸುವುದರೊಂದಿಗೆ, ಎಲ್ಲ ಕ್ಷೇತ್ರಗಳಾದ್ಯಂತ ವ್ಯವಹಾರಗಳು ಸಂಕಷ್ಟಕ್ಕೆ ಸಿಲುಕಿವೆ ಮತ್ತು ರಾತ್ರೋರಾತ್ರಿ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವಂತಾಯಿತು. ಪ್ರಧಾನಿ ಮೋದಿ ಅವರು ಲಾಕ್ಡೌನ್ ಘೋಷಿಸುವಾಗ, ಈ ಕಷ್ಟದ ಸಮಯದಲ್ಲಿ ನೌಕರರಿಗೆ ಉದ್ಯೋಗ ಭದ್ರತೆಯನ್ನು ಒದಗಿಸಿ ಎಂದು ಕಂಪನಿಗಳನ್ನು ಒತ್ತಾಯಿಸಿದ್ದರು.</p>.<p>ಮಾರ್ಚ್ನಲ್ಲಿ, ಉದ್ಯೋಗದಾತರು ಕಾರ್ಮಿಕರಿಗೆ ಪೂರ್ಣ ವೇತನವನ್ನು ಪಾವತಿಸುವುದು ಮತ್ತು ಅವರ ಉದ್ಯೋಗಗಳನ್ನು ರಕ್ಷಿಸುವುದನ್ನು ಕಡ್ಡಾಯಗೊಳಿಸುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಸಹಿ ಮಾಡಿದ ಆದೇಶವನ್ನು ಸರ್ಕಾರ ಅಂಗೀಕರಿಸಿತ್ತು.</p>.<p>ಲಾಕ್ಡೌನ್ನಿಂದಾಗಿ ಅವರು ತಿಂಗಳುಗಳಿಂದ ವ್ಯವಹಾರದಿಂದ ಹೊರಗುಳಿದಿದ್ದಾರೆ ಮತ್ತು ಹಣಕಾಸಿನ ಮೀಸಲು ಇಲ್ಲ. ಹೀಗಾಗಿಕಂಪನಿಗಳು ಎಲ್ಲಾ ಕಾರ್ಮಿಕರ ವೇತನವನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಕೂಗು ಎದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>