‘ನಾವು ಪ್ರಕರಣದ ಅಂಶಗಳನ್ನು ಪರಿಗಣಿಸಿ, ರಿಟ್ ಅರ್ಜಿಯನ್ನು ಇತ್ಯರ್ಥಗೊಳಿಸಿದ್ದೇವೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಗಂಭೀರ ವಿರೋಧದ ನಡುವೆಯೂ, ಆರೋಪಿಯನ್ನು ದೆಹಲಿಯ ಆರ್ಎಂಎಲ್ ಅಥವಾ ಎಐಐಎಂಎಸ್ ಅಥವಾ ಬೇರೆ ಯಾವುದೇ ಉತ್ತಮ ಆಸ್ಪತ್ರೆಗೆ ವರ್ಗಾಯಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದೇವೆ‘ ಎಂದು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎ.ಎಸ್. ಬೋಪಣ್ಣ ಅವರುಗಳನ್ನೂ ಒಳಗೊಂಡ ನ್ಯಾಯಪೀಠ ಹೇಳಿದೆ.