<p><strong>ನವದೆಹಲಿ</strong>: 'ನ್ಯಾಯಾಂಗ ಭ್ರಷ್ಟಾಚಾರ' ಕುರಿತ ಅಧ್ಯಾಯ ಸೇರಿಸಲಾಗಿದ್ದ 8ನೇ ತರಗತಿಯ ಎನ್ಸಿಇಆರ್ಟಿ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಎಲ್ಲ ಪುಸ್ತಕಗಳ ಜಪ್ತಿಗೆ ಆದೇಶಿಸಿರುವ ನ್ಯಾಯಾಲಯ, ಡಿಜಿಟಲ್ ಕಾಪಿಗಳನ್ನೂ ತೆಗೆದುಹಾಕುವಂತೆ ಆದೇಶಿಸಿದೆ.</p><p>ಅಲ್ಲದೇ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಕೂಡಲೇ ತನ್ನ ನಿರ್ದೆಶನಗಳನ್ನು ಪಾಲಿಸುವಂತೆ ಆದೇಶಿಸಿದೆ. ಯಾವುದೇ ವಿಧದಲ್ಲಿ ನಿರ್ದೇಶನಗಳನ್ನು ಉಲ್ಲಂಘಿಸಿದರೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ಎಚ್ಚರಿಸಿದೆ.</p><p>ಈ ಸಂಬಂಧ ಎನ್ಸಿಇಆರ್ಟಿ ನಿರ್ದೇಶಕರು, ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿರುವ ನ್ಯಾಯಾಲಯ, ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದೆ.</p><p>ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಮತ್ತು ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಉದ್ದೇಶಪೂರ್ವಕವಾಗಿ ನಡೆಸಲಾದ ಕ್ರಮ ಇದಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ.</p><p>ನ್ಯಾಯಾಂಗದ ಮೇಲೆ ಶಾಶ್ವತ ಪರಿಣಾಮ ಬೀರುವ ಇಂತಹ ದುಷ್ಕೃತ್ಯವು ಕ್ರಿಮಿನಲ್ ನ್ಯಾಯಾಂಗ ನಿಂದನೆಯ ವ್ಯಾಖ್ಯಾನದ ವ್ಯಾಪ್ತಿಗೆ ಬರುತ್ತದೆ ಎಂದು ಪೀಠ ಹೇಳಿದೆ.</p><p>‘ನಾವು ಈ ಕುರಿತ ಕೂಲಂಕಷ ತನಿಖೆ ನಡೆಸಲು ಬಯಸುತ್ತೇವೆ’ಎಂದು ಪೀಠ ಹೇಳಿದೆ.</p><p>ಇಂತವನ್ನು ನಿಯಂತ್ರಿಸದಿದ್ದರೆ, ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಇದು ಹಾಳು ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ಸಂಬಂಧಿತ ಯಾರನ್ನೂ ಶಿಕ್ಷೆ ವಿಧಿಸದೇ ಬಿಡಲಾಗುವುದಿಲ್ಲ ಎಂದಿದೆ.</p><p>‘ಇದಕ್ಕೆ ಯಾರು ಹೊಣೆಗಾರರು ಎಂಬುದನ್ನು ಕಂಡುಹಿಡಿಯುವುದು ನ್ಯಾಯಾಂಗದ ಮುಖ್ಯಸ್ಥರಾಗಿ ನನ್ನ ಕರ್ತವ್ಯ; ತಪ್ಪಿತಸ್ಥರ ತಲೆದಂಡವಾಗಬೇಕು’ ಎಂದು ಸಿಜೆಐ ಹೇಳಿದ್ದಾರೆ.</p><p>ನ್ಯಾಯಾಂಗದ ಮಾನಹಾನಿ ಮಾಡಲು ಆಳವಾಗಿ ಬೇರೂರಿರುವ, ಯೋಜಿತ ಪಿತೂರಿ ನಡೆಯುತ್ತಿರುವಂತೆ ತೋರುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಕಿಡಿಕಾರಿದ್ದಾರೆ.</p><p>ಬುಧವಾರದ ಎನ್ಸಿಇಆರ್ಟಿ ವಿವರಣೆಯನ್ನು ಪ್ರಸ್ತಾಪಿಸಿದ ಸಿಜೆಐ, ಅದರಲ್ಲಿ ಕ್ಷಮೆ ಕೇಳುವ ಬಗ್ಗೆ ಒಂದು ಪದವನ್ನೂ ಉಲ್ಲೇಖಿಸಿಲ್ಲ. ಬದಲಿಗೆ, ಪಠ್ಯವನ್ನು ಸಮರ್ಥಿಸಿಕೊಳ್ಳುವ ಯತ್ನ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದ್ದಾರೆ..</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 'ನ್ಯಾಯಾಂಗ ಭ್ರಷ್ಟಾಚಾರ' ಕುರಿತ ಅಧ್ಯಾಯ ಸೇರಿಸಲಾಗಿದ್ದ 8ನೇ ತರಗತಿಯ ಎನ್ಸಿಇಆರ್ಟಿ ಪಠ್ಯಪುಸ್ತಕವನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಎಲ್ಲ ಪುಸ್ತಕಗಳ ಜಪ್ತಿಗೆ ಆದೇಶಿಸಿರುವ ನ್ಯಾಯಾಲಯ, ಡಿಜಿಟಲ್ ಕಾಪಿಗಳನ್ನೂ ತೆಗೆದುಹಾಕುವಂತೆ ಆದೇಶಿಸಿದೆ.</p><p>ಅಲ್ಲದೇ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಕೂಡಲೇ ತನ್ನ ನಿರ್ದೆಶನಗಳನ್ನು ಪಾಲಿಸುವಂತೆ ಆದೇಶಿಸಿದೆ. ಯಾವುದೇ ವಿಧದಲ್ಲಿ ನಿರ್ದೇಶನಗಳನ್ನು ಉಲ್ಲಂಘಿಸಿದರೆ ಗಂಭೀರ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ಎಚ್ಚರಿಸಿದೆ.</p><p>ಈ ಸಂಬಂಧ ಎನ್ಸಿಇಆರ್ಟಿ ನಿರ್ದೇಶಕರು, ಶಾಲಾ ಶಿಕ್ಷಣ ಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿರುವ ನ್ಯಾಯಾಲಯ, ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ಪ್ರಶ್ನಿಸಿದೆ.</p><p>ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಮತ್ತು ನ್ಯಾಯಾಂಗದ ಘನತೆಯನ್ನು ಕುಗ್ಗಿಸಲು ಉದ್ದೇಶಪೂರ್ವಕವಾಗಿ ನಡೆಸಲಾದ ಕ್ರಮ ಇದಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠ ಹೇಳಿದೆ.</p><p>ನ್ಯಾಯಾಂಗದ ಮೇಲೆ ಶಾಶ್ವತ ಪರಿಣಾಮ ಬೀರುವ ಇಂತಹ ದುಷ್ಕೃತ್ಯವು ಕ್ರಿಮಿನಲ್ ನ್ಯಾಯಾಂಗ ನಿಂದನೆಯ ವ್ಯಾಖ್ಯಾನದ ವ್ಯಾಪ್ತಿಗೆ ಬರುತ್ತದೆ ಎಂದು ಪೀಠ ಹೇಳಿದೆ.</p><p>‘ನಾವು ಈ ಕುರಿತ ಕೂಲಂಕಷ ತನಿಖೆ ನಡೆಸಲು ಬಯಸುತ್ತೇವೆ’ಎಂದು ಪೀಠ ಹೇಳಿದೆ.</p><p>ಇಂತವನ್ನು ನಿಯಂತ್ರಿಸದಿದ್ದರೆ, ನ್ಯಾಯಾಂಗದ ಮೇಲಿನ ಜನರ ನಂಬಿಕೆಯನ್ನು ಇದು ಹಾಳು ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ. ಈ ಸಂಬಂಧಿತ ಯಾರನ್ನೂ ಶಿಕ್ಷೆ ವಿಧಿಸದೇ ಬಿಡಲಾಗುವುದಿಲ್ಲ ಎಂದಿದೆ.</p><p>‘ಇದಕ್ಕೆ ಯಾರು ಹೊಣೆಗಾರರು ಎಂಬುದನ್ನು ಕಂಡುಹಿಡಿಯುವುದು ನ್ಯಾಯಾಂಗದ ಮುಖ್ಯಸ್ಥರಾಗಿ ನನ್ನ ಕರ್ತವ್ಯ; ತಪ್ಪಿತಸ್ಥರ ತಲೆದಂಡವಾಗಬೇಕು’ ಎಂದು ಸಿಜೆಐ ಹೇಳಿದ್ದಾರೆ.</p><p>ನ್ಯಾಯಾಂಗದ ಮಾನಹಾನಿ ಮಾಡಲು ಆಳವಾಗಿ ಬೇರೂರಿರುವ, ಯೋಜಿತ ಪಿತೂರಿ ನಡೆಯುತ್ತಿರುವಂತೆ ತೋರುತ್ತಿದೆ ಎಂದು ಸಿಜೆಐ ಸೂರ್ಯ ಕಾಂತ್ ಕಿಡಿಕಾರಿದ್ದಾರೆ.</p><p>ಬುಧವಾರದ ಎನ್ಸಿಇಆರ್ಟಿ ವಿವರಣೆಯನ್ನು ಪ್ರಸ್ತಾಪಿಸಿದ ಸಿಜೆಐ, ಅದರಲ್ಲಿ ಕ್ಷಮೆ ಕೇಳುವ ಬಗ್ಗೆ ಒಂದು ಪದವನ್ನೂ ಉಲ್ಲೇಖಿಸಿಲ್ಲ. ಬದಲಿಗೆ, ಪಠ್ಯವನ್ನು ಸಮರ್ಥಿಸಿಕೊಳ್ಳುವ ಯತ್ನ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ವಿಚಾರಣೆಯನ್ನು ಮಾರ್ಚ್ 11ಕ್ಕೆ ಮುಂದೂಡಿದ್ದಾರೆ..</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>