<p><strong>ನವದೆಹಲಿ:</strong> ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು(ಎನ್ಸಿಇಆರ್ಟಿ) ಪ್ರಕಟಿಸಿರುವ 8ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದ ಮರುಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಪ್ರಸಾರವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.</p><p>ಪಠ್ಯಪುಸ್ತಕದ ಮುದ್ರಿತ ಹಾಗೂ ಡಿಜಿಟಲ್ ರೂಪದಲ್ಲಿರುವ ಎಲ್ಲ ಪ್ರತಿಗಳನ್ನು ತಕ್ಷಣವೇ ಜಪ್ತಿ ಮಾಡುವಂತೆಯೂ ಸೂಚಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿರುವ ಅಂಶಗಳಿವು...</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ.NCERT ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ:ಸುಪ್ರೀಂಕೋರ್ಟ್ ಆಕ್ಷೇಪ.<h2>ಸುಪ್ರೀಂ ಕೋರ್ಟ್ ಹೇಳಿದ್ದೇನು?</h2><p>* ನ್ಯಾಯಾಂಗವನ್ನು ಅವಹೇಳನ ಮಾಡುವುದಕ್ಕಾಗಿ ಬಹಳ ಲೆಕ್ಕಾಚಾರದಿಂದಲೇ ಇಂತಹ ಸಂಚು ರೂಪಿಸಿರುವಂತೆ ಕಂಡುಬರುತ್ತಿದೆ. ಈ ಕುರಿತು ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಪಾಲನೆ ಮಾಡದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು</p><p>* ನ್ಯಾಯಾಂಗಕ್ಕೆ ಶಾಶ್ವತವಾದ ಕಳಂಕ ತರುವ ಇಂತಹ ಅನುಚಿತ ವರ್ತನೆಯನ್ನು ಕ್ರಿಮಿನಲ್ ನಿಂದನೆ ಎಂದೇ ಪರಿಗಣಿಸಲಾಗುವುದು. ಇಂತಹ ನಡೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಜನರು ನ್ಯಾಯಾಂಗದಲ್ಲಿ ಇಟ್ಟಿರುವ ನಂಬಿಕೆಗೆ ಧಕ್ಕೆಯಾಗುತ್ತದೆ</p><p>* ಎನ್ಸಿಇಆರ್ಟಿ, ಕೇಂದ್ರ ಹಾಗೂ ರಾಜ್ಯಗಳ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪಠ್ಯಪುಸ್ತಕದ ಎಲ್ಲ ಪ್ರತಿಗಳನ್ನು ಜಪ್ತಿ ಮಾಡಬೇಕು. ಸಾರ್ವಜನಿಕರಿಗೆ ಪಠ್ಯಪುಸ್ತಕಗಳು ಲಭ್ಯವಾಗುವುದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು</p><p>* ಮುನ್ನೆಚ್ಚರಿಕೆ ಕ್ರಮವಾಗಿ, ಈ ಪಠ್ಯಪುಸ್ತಕದ ಮರುಮುದ್ರಣ ಅಥವಾ ಡಿಜಿಟಲ್ ವಿಧಾನದ ಮೂಲಕ ಮರುಹಂಚಿಕೆ ಮಾಡದಂತೆ ಸಂಪೂರ್ಣ ನಿಷೇಧ ಹೇರಲಾಗಿದೆ</p><p>* ಈ ಪಠ್ಯಪುಸ್ತಕದ ಮುದ್ರಿತ ಪ್ರತಿ ಅಥವಾ ಡಿಜಿಟಲ್ ಆವೃತ್ತಿಯ ವಿತರಣೆಗೆ ನಡೆಸುವ ಯತ್ನಗಳನ್ನು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದೇ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುವುದು</p><p>* ಎನ್ಸಿಇಆರ್ಟಿಯ 8ನೇ ತರಗತಿಯ ಈ ಪಠ್ಯಪುಸ್ತಕ ಕುರಿತು ಕೈಗೊಂಡಿರುವ ಕ್ರಮವು ನ್ಯಾಯಾಂಗ ಸೇರಿ ಯಾವುದೇ ಸಾರ್ವಜನಿಕ ಸಂಸ್ಥೆ ಕುರಿತ ನ್ಯಾಯಸಮ್ಮತ ಟೀಕೆ ಅಥವಾ ಪರಾಮರ್ಶೆಗೆ ಕಡಿವಾಣ ಹಾಕುವ ಉದ್ದೇಶ ಹೊಂದಿಲ್ಲ.</p>.<div><blockquote>ಇಂತಹ ಪಿತೂರಿಗೆ ಕಾರಣರಾದವರನ್ನು ಪತ್ತೆ ಮಾಡುವುದು ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥನಾದ ನನ್ನ ಕರ್ತವ್ಯ. ಈ ಬಗ್ಗೆ ಸಮಗ್ರ ತನಿಖೆ ಅಗತ್ಯ ಹಾಗೂ ತಪ್ಪಿತಸ್ಥರ ತಲೆದಂಡ ಆಗಲೇಬೇಕು</blockquote><span class="attribution">ಸೂರ್ಯಕಾಂತ್, ಮುಖ್ಯನ್ಯಾಯಮೂರ್ತಿ, ಸುಪ್ರೀಂ ಕೋರ್ಟ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತು(ಎನ್ಸಿಇಆರ್ಟಿ) ಪ್ರಕಟಿಸಿರುವ 8ನೇ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದ ಮರುಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಪ್ರಸಾರವನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.</p><p>ಪಠ್ಯಪುಸ್ತಕದ ಮುದ್ರಿತ ಹಾಗೂ ಡಿಜಿಟಲ್ ರೂಪದಲ್ಲಿರುವ ಎಲ್ಲ ಪ್ರತಿಗಳನ್ನು ತಕ್ಷಣವೇ ಜಪ್ತಿ ಮಾಡುವಂತೆಯೂ ಸೂಚಿಸಿದೆ. ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿರುವ ಅಂಶಗಳಿವು...</p>.ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ.NCERT ಪಠ್ಯದಲ್ಲಿ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಅಧ್ಯಾಯ:ಸುಪ್ರೀಂಕೋರ್ಟ್ ಆಕ್ಷೇಪ.<h2>ಸುಪ್ರೀಂ ಕೋರ್ಟ್ ಹೇಳಿದ್ದೇನು?</h2><p>* ನ್ಯಾಯಾಂಗವನ್ನು ಅವಹೇಳನ ಮಾಡುವುದಕ್ಕಾಗಿ ಬಹಳ ಲೆಕ್ಕಾಚಾರದಿಂದಲೇ ಇಂತಹ ಸಂಚು ರೂಪಿಸಿರುವಂತೆ ಕಂಡುಬರುತ್ತಿದೆ. ಈ ಕುರಿತು ನ್ಯಾಯಾಲಯ ನೀಡಿರುವ ನಿರ್ದೇಶನಗಳನ್ನು ಪಾಲನೆ ಮಾಡದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು</p><p>* ನ್ಯಾಯಾಂಗಕ್ಕೆ ಶಾಶ್ವತವಾದ ಕಳಂಕ ತರುವ ಇಂತಹ ಅನುಚಿತ ವರ್ತನೆಯನ್ನು ಕ್ರಿಮಿನಲ್ ನಿಂದನೆ ಎಂದೇ ಪರಿಗಣಿಸಲಾಗುವುದು. ಇಂತಹ ನಡೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದಲ್ಲಿ ಜನರು ನ್ಯಾಯಾಂಗದಲ್ಲಿ ಇಟ್ಟಿರುವ ನಂಬಿಕೆಗೆ ಧಕ್ಕೆಯಾಗುತ್ತದೆ</p><p>* ಎನ್ಸಿಇಆರ್ಟಿ, ಕೇಂದ್ರ ಹಾಗೂ ರಾಜ್ಯಗಳ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪಠ್ಯಪುಸ್ತಕದ ಎಲ್ಲ ಪ್ರತಿಗಳನ್ನು ಜಪ್ತಿ ಮಾಡಬೇಕು. ಸಾರ್ವಜನಿಕರಿಗೆ ಪಠ್ಯಪುಸ್ತಕಗಳು ಲಭ್ಯವಾಗುವುದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು</p><p>* ಮುನ್ನೆಚ್ಚರಿಕೆ ಕ್ರಮವಾಗಿ, ಈ ಪಠ್ಯಪುಸ್ತಕದ ಮರುಮುದ್ರಣ ಅಥವಾ ಡಿಜಿಟಲ್ ವಿಧಾನದ ಮೂಲಕ ಮರುಹಂಚಿಕೆ ಮಾಡದಂತೆ ಸಂಪೂರ್ಣ ನಿಷೇಧ ಹೇರಲಾಗಿದೆ</p><p>* ಈ ಪಠ್ಯಪುಸ್ತಕದ ಮುದ್ರಿತ ಪ್ರತಿ ಅಥವಾ ಡಿಜಿಟಲ್ ಆವೃತ್ತಿಯ ವಿತರಣೆಗೆ ನಡೆಸುವ ಯತ್ನಗಳನ್ನು ನ್ಯಾಯಾಲಯದ ಆದೇಶದ ಉಲ್ಲಂಘನೆ ಎಂದೇ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುವುದು</p><p>* ಎನ್ಸಿಇಆರ್ಟಿಯ 8ನೇ ತರಗತಿಯ ಈ ಪಠ್ಯಪುಸ್ತಕ ಕುರಿತು ಕೈಗೊಂಡಿರುವ ಕ್ರಮವು ನ್ಯಾಯಾಂಗ ಸೇರಿ ಯಾವುದೇ ಸಾರ್ವಜನಿಕ ಸಂಸ್ಥೆ ಕುರಿತ ನ್ಯಾಯಸಮ್ಮತ ಟೀಕೆ ಅಥವಾ ಪರಾಮರ್ಶೆಗೆ ಕಡಿವಾಣ ಹಾಕುವ ಉದ್ದೇಶ ಹೊಂದಿಲ್ಲ.</p>.<div><blockquote>ಇಂತಹ ಪಿತೂರಿಗೆ ಕಾರಣರಾದವರನ್ನು ಪತ್ತೆ ಮಾಡುವುದು ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥನಾದ ನನ್ನ ಕರ್ತವ್ಯ. ಈ ಬಗ್ಗೆ ಸಮಗ್ರ ತನಿಖೆ ಅಗತ್ಯ ಹಾಗೂ ತಪ್ಪಿತಸ್ಥರ ತಲೆದಂಡ ಆಗಲೇಬೇಕು</blockquote><span class="attribution">ಸೂರ್ಯಕಾಂತ್, ಮುಖ್ಯನ್ಯಾಯಮೂರ್ತಿ, ಸುಪ್ರೀಂ ಕೋರ್ಟ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>