<p><strong>ನವದೆಹಲಿ</strong>: ಡಿಜಿಟಲ್ ವಂಚನೆ ಮೂಲಕ ₹54,000 ಕೋಟಿಗೂ ಹೆಚ್ಚಿನ ಹಣವನ್ನು ದೋಚಿರುವುದು ‘ಡಕಾಯಿತಿ’ಗೆ ಸಮ ಎಂದಿರುವ ಸುಪ್ರೀಂಕೋರ್ಟ್, ಸೈಬರ್ ವಂಚನೆ ಪ್ರಕರಣಗಳನ್ನು ತಡೆಯಲು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. </p>.<p>ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ), ಇತರೆ ಪ್ರಮುಖ ಬ್ಯಾಂಕ್ಗಳು, ದೂರಸಂಪರ್ಕ ಇಲಾಖೆಯ ಸಲಹೆಗಳನ್ನು ಪಡೆದು ’ಎಸ್ಒಪಿ’ ರೂಪಿಸಬೇಕು. ’ಎಸ್ಒಪಿ’ ಸಿದ್ಧಗೊಂಡ ನಂತರ, ನಾಲ್ಕು ವಾರಗಳಲ್ಲಿ ಇದಕ್ಕೆ ಸಂಬಂಧಿಸಿದ ಒಪ್ಪಂದದ ಕರಡನ್ನು ಪ್ರಕಟಿಸಬೇಕು ಎಂದು ಕೇಂದ್ರ ಗೃಹ ಇಲಾಖೆಗೆ ನ್ಯಾಯಪೀಠ ನಿರ್ದೇಶಿಸಿದೆ. </p>.<p>‘ಡಿಜಿಟಲ್ ವಂಚನೆಯ ಮೊತ್ತವು ಸಣ್ಣ ರಾಜ್ಯಗಳ ಬಜೆಟ್ಗಿಂತಲೂ ಹೆಚ್ಚಿರುವುದು ಕಳವಳಕಾರಿ. ತಕ್ಷಣವೇ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ, ಎನ್.ವಿ. ಅಂಜರಿಯಾ ಅವರಿದ್ದ ಪೀಠವು ತಾಕೀತು ಮಾಡಿದೆ. </p>.<p>ಅಧಿಕಾರಿಗಳ ಪಾತ್ರವನ್ನೂ ಪರಿಶೀಲಿಸಿ: ಡಿಜಿಟಲ್ ವಂಚನೆ ಪ್ರಕರಣಗಳಲ್ಲಿ, ಸೈಬರ್ ಅಪರಾಧಿಗಳು ಮಾತ್ರವಲ್ಲ, ಬ್ಯಾಂಕ್ ಅಧಿಕಾರಿಗಳ ಶಾಮೀಲು ಹಾಗೂ ನಿರ್ಲಕ್ಷ್ಯವನ್ನೂ ಆಗಾಗ್ಗ ಪರಿಶೀಲನೆಗೆ ಒಳಪಡಿಸುತ್ತಿರಬೇಕು. ಈ ನಿಟ್ಟಿನಲ್ಲಿ ಆರ್ಬಿಐ ಬ್ಯಾಂಕ್ಗಳಿಗೆ ಸೂಚನೆ ನೀಡಬೇಕು, ನಿಗಾ ವಹಿಸಬೇಕು ಎಂದೂ ನ್ಯಾಯಪೀಠ ಹೇಳಿದೆ. </p>.<p><strong>ಡಿಜಿಟಲ್ ಅರೆಸ್ಟ್; ಸಿಬಿಐ ತನಿಖೆ</strong></p><p>ದೇಶದ ವಿವಿಧೆಡೆ ನಡೆದಿರುವ ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ. ಜತೆಗೆ ‘ಡಿಜಿಟಲ್ ಅರೆಸ್ಟ್‘ ಪ್ರಕರಣಗಳ ತನಿಖೆ ಮುಂದುವರಿಸಲು ಸಿಬಿಐಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.</p><p>‘ಡಿಜಿಟಲ್ ಅರೆಸ್ಟ್’ ಪ್ರಕರಣಗಳಲ್ಲಿ ಗ್ರಾಹಕರಿಗೆ ಪರಿಹಾರ ವಿತರಿಸಲು ಆರ್ಬಿಐ ಮತ್ತು ದೂರಸಂಪರ್ಕ ಇಲಾಖೆ ಜಂಟಿಯಾಗಿ ಚೌಕಟ್ಟು ರೂಪಿಸುವಂತೆಯೂ ಸುಪ್ರೀಂಕೋರ್ಟ್ ಹೇಳಿದೆ. </p><p>ಡಿಜಿಟಲ್ ವಂಚನೆಗೆ ಒಳಗಾದವರಿಗೆ ಪರಿಹಾರ ವಿತರಿಸಲು ಅಮಿಕಸ್ ಕ್ಯೂರಿ ಮಂಡಿಸಿದ್ದ ಸಲಹೆಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಡಿಸೆಂಬರ್ 16ರಂದು ಸೂಚನೆ ನೀಡಿತ್ತು. ಸೈಬರ್ ಅಪರಾಧಿಗಳು ದೇಶದಿಂದ ದೋಚುತ್ತಿರುವ ಅಪಾರ ಪ್ರಮಾಣದ ಹಣದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. </p><p> ಸೈಬರ್ ಅಪರಾಧಿಗಳ ಜಾಡನ್ನು ಪತ್ತೆ ಹಚ್ಚಲು ಮತ್ತು ಅಕ್ರಮ ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನವನ್ನು ಯಾಕೆ ಬಳಸುತ್ತಿಲ್ಲ ಎಂದೂ ಆರ್ಬಿಐಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಡಿಜಿಟಲ್ ವಂಚನೆ ಮೂಲಕ ₹54,000 ಕೋಟಿಗೂ ಹೆಚ್ಚಿನ ಹಣವನ್ನು ದೋಚಿರುವುದು ‘ಡಕಾಯಿತಿ’ಗೆ ಸಮ ಎಂದಿರುವ ಸುಪ್ರೀಂಕೋರ್ಟ್, ಸೈಬರ್ ವಂಚನೆ ಪ್ರಕರಣಗಳನ್ನು ತಡೆಯಲು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನವನ್ನು (ಎಸ್ಒಪಿ) ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸೋಮವಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. </p>.<p>ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ), ಇತರೆ ಪ್ರಮುಖ ಬ್ಯಾಂಕ್ಗಳು, ದೂರಸಂಪರ್ಕ ಇಲಾಖೆಯ ಸಲಹೆಗಳನ್ನು ಪಡೆದು ’ಎಸ್ಒಪಿ’ ರೂಪಿಸಬೇಕು. ’ಎಸ್ಒಪಿ’ ಸಿದ್ಧಗೊಂಡ ನಂತರ, ನಾಲ್ಕು ವಾರಗಳಲ್ಲಿ ಇದಕ್ಕೆ ಸಂಬಂಧಿಸಿದ ಒಪ್ಪಂದದ ಕರಡನ್ನು ಪ್ರಕಟಿಸಬೇಕು ಎಂದು ಕೇಂದ್ರ ಗೃಹ ಇಲಾಖೆಗೆ ನ್ಯಾಯಪೀಠ ನಿರ್ದೇಶಿಸಿದೆ. </p>.<p>‘ಡಿಜಿಟಲ್ ವಂಚನೆಯ ಮೊತ್ತವು ಸಣ್ಣ ರಾಜ್ಯಗಳ ಬಜೆಟ್ಗಿಂತಲೂ ಹೆಚ್ಚಿರುವುದು ಕಳವಳಕಾರಿ. ತಕ್ಷಣವೇ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ, ಎನ್.ವಿ. ಅಂಜರಿಯಾ ಅವರಿದ್ದ ಪೀಠವು ತಾಕೀತು ಮಾಡಿದೆ. </p>.<p>ಅಧಿಕಾರಿಗಳ ಪಾತ್ರವನ್ನೂ ಪರಿಶೀಲಿಸಿ: ಡಿಜಿಟಲ್ ವಂಚನೆ ಪ್ರಕರಣಗಳಲ್ಲಿ, ಸೈಬರ್ ಅಪರಾಧಿಗಳು ಮಾತ್ರವಲ್ಲ, ಬ್ಯಾಂಕ್ ಅಧಿಕಾರಿಗಳ ಶಾಮೀಲು ಹಾಗೂ ನಿರ್ಲಕ್ಷ್ಯವನ್ನೂ ಆಗಾಗ್ಗ ಪರಿಶೀಲನೆಗೆ ಒಳಪಡಿಸುತ್ತಿರಬೇಕು. ಈ ನಿಟ್ಟಿನಲ್ಲಿ ಆರ್ಬಿಐ ಬ್ಯಾಂಕ್ಗಳಿಗೆ ಸೂಚನೆ ನೀಡಬೇಕು, ನಿಗಾ ವಹಿಸಬೇಕು ಎಂದೂ ನ್ಯಾಯಪೀಠ ಹೇಳಿದೆ. </p>.<p><strong>ಡಿಜಿಟಲ್ ಅರೆಸ್ಟ್; ಸಿಬಿಐ ತನಿಖೆ</strong></p><p>ದೇಶದ ವಿವಿಧೆಡೆ ನಡೆದಿರುವ ‘ಡಿಜಿಟಲ್ ಅರೆಸ್ಟ್’ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ. ಜತೆಗೆ ‘ಡಿಜಿಟಲ್ ಅರೆಸ್ಟ್‘ ಪ್ರಕರಣಗಳ ತನಿಖೆ ಮುಂದುವರಿಸಲು ಸಿಬಿಐಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.</p><p>‘ಡಿಜಿಟಲ್ ಅರೆಸ್ಟ್’ ಪ್ರಕರಣಗಳಲ್ಲಿ ಗ್ರಾಹಕರಿಗೆ ಪರಿಹಾರ ವಿತರಿಸಲು ಆರ್ಬಿಐ ಮತ್ತು ದೂರಸಂಪರ್ಕ ಇಲಾಖೆ ಜಂಟಿಯಾಗಿ ಚೌಕಟ್ಟು ರೂಪಿಸುವಂತೆಯೂ ಸುಪ್ರೀಂಕೋರ್ಟ್ ಹೇಳಿದೆ. </p><p>ಡಿಜಿಟಲ್ ವಂಚನೆಗೆ ಒಳಗಾದವರಿಗೆ ಪರಿಹಾರ ವಿತರಿಸಲು ಅಮಿಕಸ್ ಕ್ಯೂರಿ ಮಂಡಿಸಿದ್ದ ಸಲಹೆಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಡಿಸೆಂಬರ್ 16ರಂದು ಸೂಚನೆ ನೀಡಿತ್ತು. ಸೈಬರ್ ಅಪರಾಧಿಗಳು ದೇಶದಿಂದ ದೋಚುತ್ತಿರುವ ಅಪಾರ ಪ್ರಮಾಣದ ಹಣದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. </p><p> ಸೈಬರ್ ಅಪರಾಧಿಗಳ ಜಾಡನ್ನು ಪತ್ತೆ ಹಚ್ಚಲು ಮತ್ತು ಅಕ್ರಮ ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನವನ್ನು ಯಾಕೆ ಬಳಸುತ್ತಿಲ್ಲ ಎಂದೂ ಆರ್ಬಿಐಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>