<p><strong>ನವದೆಹಲಿ</strong>: ‘ರಾಜ್ಯಗಳು ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರು ಅಂಕಿತ ಹಾಕುವುದಕ್ಕೆ ಕಾಲಮಿತಿ ನಿಗದಿ ಮಾಡಿ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಪ್ರಶ್ನೆ ಮಾಡುತ್ತಿದೆ. ಈ ಮೂಲಕ ಅದು, ಸಂವಿಧಾನದ ಅಡಿಪಾಯವನ್ನೇ ನಾಶ ಮಾಡಲು ಹೊರಟಿದೆ’ ಎಂದು ವಿಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಹಿಮಾಚಲ ಪ್ರದೇಶ, ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಪ್ರತಿಪಾದಿಸಿವೆ.</p>.<p>‘ಸಂವಿಧಾನದ ಆಶಯದಂತೆ ಕಾರ್ಯನಿರ್ವಹಣೆ ಮಾಡುವುದಕ್ಕೆ ರಾಜ್ಯಪಾಲರು ಅಡ್ಡಿಯಾಗುವುದಕ್ಕೆ ಅವಕಾಶ ನೀಡಬಾರದು’ ಎಂದೂ ಈ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿವೆ.</p>.<p>ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಗಡುವು ನಿಗದಿ ಮಾಡಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಳಿರುವ ಸಲಹೆಗೆ ಸಂಬಂಧಿಸಿ ನಡೆದ ವಿಚಾರಣೆ ವೇಳೆ, ಕಾಂಗ್ರೆಸ್ ಹಾಗೂ ಟಿಎಂಸಿ ಆಡಳಿತವಿರುವ ರಾಜ್ಯಗಳು ಈ ಪ್ರತಿಪಾದನೆ ಮಾಡಿವೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಸೂರ್ಯಕಾಂತ, ವಿಕ್ರಮನಾಥ್, ಪಿ.ಎಸ್.ನರಸಿಂಹ ಹಾಗೂ ಎ.ಎಸ್.ಚಂದೂರ್ಕರ್ ಈ ಪೀಠದಲ್ಲಿ ಇದ್ದಾರೆ.</p>.<p>ಪಶ್ಚಿಮ ಬಂಗಾಳ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಕರ್ನಾಟಕ ಪರ ಗೋಪಾಲ್ ಸುಬ್ರಮಣಿಯನ್ ಹಾಗೂ ಹಿಮಾಚಲ ಪ್ರದೇಶ ಪರ ಆನಂದ ಶರ್ಮಾ ಹಾಜರಿದ್ದರು. ವಾದ ಆಲಿಸಿದ ಪೀಠವು, ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.</p>.<p><strong>ವಿಪಕ್ಷಗಳ ಆಡಳಿತವಿರುವ ರಾಜ್ಯಗಳ ವಾದ</strong> </p><ul><li><p>ಮಸೂದೆಗಳು ಜನರ ಆಶಯಗಳನ್ನು ಒಳಗೊಂಡಿರುತ್ತವೆ. ಹೀಗಾಗಿ ಜನರ ಈ ಆಶಯಗಳ ಕುರಿತು ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರು ತಮ್ಮ ಮನಸಿಗೆ ಬಂದಂತೆ ನಿರ್ಣಯಿಸಬಾರದು </p></li><li><p>ವಿಧಾನಸಭೆಗಳು ಅಂಗೀಕರಿಸುವ ಮಸೂದೆಗಳ ಕುರಿತು ನ್ಯಾಯಾಂಗ ಪರಿಶೀಲನೆ ನಡೆಸಬಹುದು. ಆದರೆ ಈ ಮಸೂದೆಗಳ ಕುರಿತು ನಿರ್ಧಾರ ಕೈಗೊಳ್ಳುವ ಸಾರ್ವಭೌಮ ಅಧಿಕಾರವನ್ನು ರಾಜ್ಯಗಳು ಹೊಂದಿದ್ದು ಇದನ್ನು ರಾಜ್ಯಪಾಲರು ಪ್ರಶ್ನೆ ಮಾಡುವಂತಿಲ್ಲ </p></li><li><p>ಶಾಸನ ರೂಪಿಸುವ ಪ್ರಕ್ರಿಯೆಯಲ್ಲಿ ಕಾರ್ಯಾಂಗವು ಹಸ್ತಕ್ಷೇಪ ಮಾಡುವಂತಿಲ್ಲ. ವಿಧಾನಸಭೆಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ರಾಜ್ಯಪಾಲರು ತಕ್ಷಣವೇ ಅಂಕಿತ ಹಾಕಬೇಕು. ಇದಕ್ಕಾಗಿ 3 ಅಥವಾ 6 ತಿಂಗಳು ತೆಗೆದುಕೊಳ್ಳಬಾರದು </p></li><li><p>ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರದಿಂದ ಈ ವರೆಗೆ ಸಂಸತ್ನಲ್ಲಿ ಅಂಗೀಕಾರಗೊಂಡ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕದೇ ತಡೆ ಹಿಡಿದ ನಿದರ್ಶನಗಳು ವಿರಳ </p></li><li><p>ಯಾವುದೇ ಒಂದು ಮಸೂದೆಯನ್ನು ಪ್ರಶ್ನಿಸಿ ನಾಗರಿಕರು ನ್ಯಾಯಾಲಯದ ಮೆಟ್ಟಿಲೇರಬಹುದು. ಅಪರೂಪದ ಸಂದರ್ಭದಲ್ಲಿ ಮಾತ್ರ ಮಸೂದೆಗೆ ಅಂಕಿತ ಹಾಕುವುದಿಲ್ಲ ಎಂದು ರಾಜ್ಯಪಾಲರು ಹೇಳಬಹುದು </p></li><li><p>ರಾಜ್ಯಗಳನ್ನು ಮುನ್ಸಿಪಾಲಿಟಿಗಳಂತೆ ನಡೆಸಿಕೊಳ್ಳಬಾರದು. ರಾಷ್ಟ್ರಪತಿಗಳು ಮಸೂದೆಯನ್ನು ತಡೆಹಿಡಿಯವಂತಿಲ್ಲ. ಟಿಪ್ಪಣಿಯೊಂದಿಗೆ ಅದನ್ನು ರಾಜ್ಯಗಳಿಗೆ ತಕ್ಷಣವೇ ವಾಪಸು ಕಳುಹಿಸಬೇಕು </p></li><li><p>ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ವಿಧಿಸುವುದಕ್ಕೆ ಸಂಬಂಧಿಸಿ ರಾಷ್ಟ್ರಪತಿಯವರು ಕೇಳಿರುವ 14 ಪ್ರಶ್ನೆಗಳು ‘ಕಾಲ್ಪನಿಕ’ವಾಗಿ ಇಲ್ಲವೇ ‘ವಾಸ್ತವ ಸಂಗತಿಗಳ ಕೊರತೆಯಿಂದ ಕೂಡಿವೆ’ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ರಾಜ್ಯಗಳು ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರು ಅಂಕಿತ ಹಾಕುವುದಕ್ಕೆ ಕಾಲಮಿತಿ ನಿಗದಿ ಮಾಡಿ ಏಪ್ರಿಲ್ 8ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಪ್ರಶ್ನೆ ಮಾಡುತ್ತಿದೆ. ಈ ಮೂಲಕ ಅದು, ಸಂವಿಧಾನದ ಅಡಿಪಾಯವನ್ನೇ ನಾಶ ಮಾಡಲು ಹೊರಟಿದೆ’ ಎಂದು ವಿಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಹಿಮಾಚಲ ಪ್ರದೇಶ, ಸುಪ್ರೀಂ ಕೋರ್ಟ್ನಲ್ಲಿ ಬುಧವಾರ ಪ್ರತಿಪಾದಿಸಿವೆ.</p>.<p>‘ಸಂವಿಧಾನದ ಆಶಯದಂತೆ ಕಾರ್ಯನಿರ್ವಹಣೆ ಮಾಡುವುದಕ್ಕೆ ರಾಜ್ಯಪಾಲರು ಅಡ್ಡಿಯಾಗುವುದಕ್ಕೆ ಅವಕಾಶ ನೀಡಬಾರದು’ ಎಂದೂ ಈ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್ಗೆ ಮನವಿ ಮಾಡಿವೆ.</p>.<p>ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳಿಗೆ ಅಂಕಿತ ಹಾಕುವುದಕ್ಕೆ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ನ್ಯಾಯಾಲಯ ಗಡುವು ನಿಗದಿ ಮಾಡಬಹುದೇ ಎಂಬ ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಳಿರುವ ಸಲಹೆಗೆ ಸಂಬಂಧಿಸಿ ನಡೆದ ವಿಚಾರಣೆ ವೇಳೆ, ಕಾಂಗ್ರೆಸ್ ಹಾಗೂ ಟಿಎಂಸಿ ಆಡಳಿತವಿರುವ ರಾಜ್ಯಗಳು ಈ ಪ್ರತಿಪಾದನೆ ಮಾಡಿವೆ.</p>.<p>ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಸೂರ್ಯಕಾಂತ, ವಿಕ್ರಮನಾಥ್, ಪಿ.ಎಸ್.ನರಸಿಂಹ ಹಾಗೂ ಎ.ಎಸ್.ಚಂದೂರ್ಕರ್ ಈ ಪೀಠದಲ್ಲಿ ಇದ್ದಾರೆ.</p>.<p>ಪಶ್ಚಿಮ ಬಂಗಾಳ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಕರ್ನಾಟಕ ಪರ ಗೋಪಾಲ್ ಸುಬ್ರಮಣಿಯನ್ ಹಾಗೂ ಹಿಮಾಚಲ ಪ್ರದೇಶ ಪರ ಆನಂದ ಶರ್ಮಾ ಹಾಜರಿದ್ದರು. ವಾದ ಆಲಿಸಿದ ಪೀಠವು, ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.</p>.<p><strong>ವಿಪಕ್ಷಗಳ ಆಡಳಿತವಿರುವ ರಾಜ್ಯಗಳ ವಾದ</strong> </p><ul><li><p>ಮಸೂದೆಗಳು ಜನರ ಆಶಯಗಳನ್ನು ಒಳಗೊಂಡಿರುತ್ತವೆ. ಹೀಗಾಗಿ ಜನರ ಈ ಆಶಯಗಳ ಕುರಿತು ರಾಜ್ಯಪಾಲರು ಹಾಗೂ ರಾಷ್ಟ್ರಪತಿಯವರು ತಮ್ಮ ಮನಸಿಗೆ ಬಂದಂತೆ ನಿರ್ಣಯಿಸಬಾರದು </p></li><li><p>ವಿಧಾನಸಭೆಗಳು ಅಂಗೀಕರಿಸುವ ಮಸೂದೆಗಳ ಕುರಿತು ನ್ಯಾಯಾಂಗ ಪರಿಶೀಲನೆ ನಡೆಸಬಹುದು. ಆದರೆ ಈ ಮಸೂದೆಗಳ ಕುರಿತು ನಿರ್ಧಾರ ಕೈಗೊಳ್ಳುವ ಸಾರ್ವಭೌಮ ಅಧಿಕಾರವನ್ನು ರಾಜ್ಯಗಳು ಹೊಂದಿದ್ದು ಇದನ್ನು ರಾಜ್ಯಪಾಲರು ಪ್ರಶ್ನೆ ಮಾಡುವಂತಿಲ್ಲ </p></li><li><p>ಶಾಸನ ರೂಪಿಸುವ ಪ್ರಕ್ರಿಯೆಯಲ್ಲಿ ಕಾರ್ಯಾಂಗವು ಹಸ್ತಕ್ಷೇಪ ಮಾಡುವಂತಿಲ್ಲ. ವಿಧಾನಸಭೆಗಳಲ್ಲಿ ಅಂಗೀಕಾರಗೊಂಡ ಮಸೂದೆಗಳಿಗೆ ರಾಜ್ಯಪಾಲರು ತಕ್ಷಣವೇ ಅಂಕಿತ ಹಾಕಬೇಕು. ಇದಕ್ಕಾಗಿ 3 ಅಥವಾ 6 ತಿಂಗಳು ತೆಗೆದುಕೊಳ್ಳಬಾರದು </p></li><li><p>ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರದಿಂದ ಈ ವರೆಗೆ ಸಂಸತ್ನಲ್ಲಿ ಅಂಗೀಕಾರಗೊಂಡ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕದೇ ತಡೆ ಹಿಡಿದ ನಿದರ್ಶನಗಳು ವಿರಳ </p></li><li><p>ಯಾವುದೇ ಒಂದು ಮಸೂದೆಯನ್ನು ಪ್ರಶ್ನಿಸಿ ನಾಗರಿಕರು ನ್ಯಾಯಾಲಯದ ಮೆಟ್ಟಿಲೇರಬಹುದು. ಅಪರೂಪದ ಸಂದರ್ಭದಲ್ಲಿ ಮಾತ್ರ ಮಸೂದೆಗೆ ಅಂಕಿತ ಹಾಕುವುದಿಲ್ಲ ಎಂದು ರಾಜ್ಯಪಾಲರು ಹೇಳಬಹುದು </p></li><li><p>ರಾಜ್ಯಗಳನ್ನು ಮುನ್ಸಿಪಾಲಿಟಿಗಳಂತೆ ನಡೆಸಿಕೊಳ್ಳಬಾರದು. ರಾಷ್ಟ್ರಪತಿಗಳು ಮಸೂದೆಯನ್ನು ತಡೆಹಿಡಿಯವಂತಿಲ್ಲ. ಟಿಪ್ಪಣಿಯೊಂದಿಗೆ ಅದನ್ನು ರಾಜ್ಯಗಳಿಗೆ ತಕ್ಷಣವೇ ವಾಪಸು ಕಳುಹಿಸಬೇಕು </p></li><li><p>ಮಸೂದೆಗಳಿಗೆ ಅಂಕಿತ ಹಾಕಲು ಕಾಲಮಿತಿ ವಿಧಿಸುವುದಕ್ಕೆ ಸಂಬಂಧಿಸಿ ರಾಷ್ಟ್ರಪತಿಯವರು ಕೇಳಿರುವ 14 ಪ್ರಶ್ನೆಗಳು ‘ಕಾಲ್ಪನಿಕ’ವಾಗಿ ಇಲ್ಲವೇ ‘ವಾಸ್ತವ ಸಂಗತಿಗಳ ಕೊರತೆಯಿಂದ ಕೂಡಿವೆ’ </p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>